ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸುಂಕೇಶ್ವರ ಗ್ರಾಮದಲ್ಲಿ ನಡೆದಿದೆ ಎಂದು ಕೇಳಿ ಬಂದಿದೆ.
ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ವ್ಯಕ್ತಿಯೋರ್ವ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ವಿಷಯ ಬಹಿರಂಗ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದಿದ್ದಾಳೆ.
ಇದನ್ನೂ ಓದಿ: ರಾಯಚೂರು | ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಬಾಲಕಿಯು 8ನೇ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿ ಶಾಲೆಯಿಂದ ಹೊರಗುಳಿದಿದ್ದಾರೆ ಎನ್ನಲಾಗಿದ್ದು, ಬಾಲಕಿಯ ಮೇಲೆ ಯಾರು ಅತ್ಯಾಚಾರ ಮಾಡಿದ್ದಾರೆ ಎಂದು ಹೇಳುತ್ತಿಲ್ಲ ಆರೋಪಿ ಹೆಲ್ಮೆಟ್ ಧರಿಸಿದ್ದರು ಎಂದಷ್ಟೇ ಹೇಳಿಕೆ ನೀಡಿದ್ದಾಳೆ ಎಂದು ಮಾನ್ವಿ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಹೇಳಿಕೆ ಆಧಾರದ ಮೇಲೆ ವೈದ್ಯಕೀಯ ತಪಾಸಣೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆ ತರಲಾಗಿತ್ತು ಎಂದು ತಿಳಿದು ಬಂದಿದೆ. ಬಾಲಕಿ ದೂರಿನ ಮೇರೆಗೆ ಘಟನೆ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





