ರಾಯಚೂರು | ಬಡವರಿಗೆ ಭೂಮಿ ಮಂಜೂರಾತಿ ಗ್ಯಾರಂಟಿ ನೀಡಲಿ: ಮಾರೆಪ್ಪ ಹರವಿ

Date:

ರಾಜ್ಯದ ಹಲವೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜುರಾತಿ ನೀಡುವ ಮೂಲಕ ಬದುಕಿನ ಗ್ಯಾರಂಟಿ ನೀಡಬೇಕು ಎಂದು ಭೂಮಿ ವಸತಿ ಹೋರಾಟ ಸಮಿತಿಯ ರಾಜ್ಯ ಸದಸ್ಯ ಮಾರೆಪ್ಪ ಹರವಿ ಒತ್ತಾಯಿಸಿದರು.

ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಡ ಜನರಿಗೆ ಹಲವಾರು ಗ್ಯಾರಂಟಿಗಳನ್ನು ನೀಡುವ ಮೂಲಕ ಆಸರೆಯಾಗಿದೆ. ಸರ್ಕಾರ ನೀಡುವ ಸೌಲಭ್ಯಗಳನ್ನು ಆಧರಿಸಿ ಬದುಕುವುದಕ್ಕಿಂತ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಫಾರಂ ನಂಬರ್ 50, 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ಮಾಡುವ ಮೂಲಕ ಬದುಕಿನ ಗ್ಯಾರಂಟಿ ನೀಡಬೇಕು” ಎಂದು ಸರ್ಕಾರಕ್ಕೆ ಮನವಿ ಮಾಡಿದರು.

“ರಾಜ್ಯದಲ್ಲಿ ಲಕ್ಷಾಂತರ ಭೂರಹಿತರು ಸರ್ಕಾರಿ ಗೋಮಾಳ, ಸರ್ಕಾರಿ ವಿರಾಜ್, ಪರಂಬೋಕು, ಇನಾಂ, ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಾ ಭೂಮಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಭೂಮಿಯ ಮೇಲಿನ ಹಕ್ಕಿಗಾಗಿ ಕಳೆದ ಹಲವು ದಶಕಗಳಿಂದಲೂ ಹೋರಾಡುತ್ತಾ 30 ಲಕ್ಷಕ್ಕೂ ಅಧಿಕ ಕುಟುಂಬಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಸರ್ಕಾರಗಳು ಈವರೆಗೆ ನೀಡಿರುವ ಭರವಸೆಗಳು ನೀರಿನ ಮೇಲಿನ ಗುಳ್ಳೆಯಂತಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಬಾರಿ ಬಿಜೆಪಿ ಸರ್ಕಾರ ಬಡ ಜನರ ಭೂಮಿಯ ವಿಷಯವನ್ನು ನಿರ್ಲಕ್ಷ್ಯ ಮಾಡಿದ್ದು, ಬೃಹತ್ ಕಂಪನಿಗಳಿಗೆ ಎಸ್ಟೇಟ್ ಮಾಲೀಕರಿಗೆ, ಮಠಮಾನ್ಯಗಳಿಗೆ ನೀಡಿತ್ತು. ಅಷ್ಟೇ ಅಲ್ಲದೇ ಬಲಾ‌ಢ್ಯರು ಟ್ರಸ್ಟ್ ಹೆಸರಿನಲ್ಲಿ ರಾಜಕಾರಣಿಗಳು ತಮ್ಮ ಹೆಸರು ಹಾಗೂ ಬೇನಾಮಿ ಹೆಸರಿನಲ್ಲಿ ಸರ್ಕಾರಿ ಭೂಮಿಗಳನ್ನು ವಶ ಮಾಡಿಕೊಂಡಿದ್ದಾರೆ” ಎಂದು ಆಪಾದಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಂದಾಯ ಇಲಾಖೆ ಅಧಿಕಾರಿಗಳಿಂದಲೇ ಭೂಗಳ್ಳರಿಗೆ ಬೆಂಬಲ; ಆರೋಪ

“ಹಲವು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ತಾತ್ಕಾಲಿಕವಾಗಿ ವಾಸವಾಗಿರುವ ಬಡವರು ಸೂರಿಗಾಗಿ ಕಾಯುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲ. ರಾಜ್ಯದಲ್ಲಿ ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಬಡವರಿಗೆ ಭೂಮಿ ಮಂಜೂರಾತಿ ನೀಡಿ ಬಡವರ ಪರ ಆಡಳಿತ ನಡೆಸಬೇಕು” ಎಂದು ಮನವಿ ಮಾಡಿದರು.

ಆಂಜಿನೆಯ್ಯ ಕುರುಬದೊಡ್ಡಿ, ರಂಗಾರೆಡ್ಡಿ, ಹನುಮಂತ ಜೋಗಿ, ನರಸಿಂಹಲು ಕುರುಬದೊಡ್ಡಿ, ಬಂಗಾರಿ ನರಸಿಂಹಲು ಗುಂಜಳ್ಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...