ಮಾನ್ವಿ | ಸುಂಕೇಶ್ವರ: ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರಿಂದ ಬೇಲಿ

Date:

ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ ಗ್ರಾಮದಲ್ಲಿ ಜರುಗಿದೆ.

ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿತ್ತು. ಆ ಕಾಮಗಾರಿಗೆ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸಲು ಅಧಿಕಾರಿಗಳು‌ ನಿರಾಕರಿಸಿರುವುದು ಘಟನೆಗೆ ಕಾರಣ ಎನ್ನಲಾಗಿದೆ.

ಶನಿವಾರ ಮತ್ತೆ ಅದೇ ನಾಲಾ ಹೂಳೆತ್ತುವ ಕಾಮಗಾರಿಗೆ ಕೆಲಸ ಮಾಡಲು ಬರುವಂತೆ ಅಧಿಕಾರಿಗಳು ಕೂಲಿಕಾರ್ಮಿಕರಿಗೆ ಹೇಳಿದ್ದರು. ಆದರೆ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತಿತರ ಸಿಬ್ಬಂದಿ ಗೈರಾಗಿದ್ದರು. ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಮೂರ್ನಾಲ್ಕು ತಾಸು ಕಾದು ಕುಳಿತ ಕೂಲಿಕಾರ್ಮಿಕರು ಅಸಮಾಧಾನಗೊಂಡಿದ್ದಾರೆ.ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಕೆಲಹೊತ್ತು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000133323

ಪ್ರತಿಭಟನಾ ಸ್ಥಳಕ್ಕೆ ಯಾವುದೇ ಅಧಿಕಾರಿ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದರು ಎಂದು ಪ್ರತ್ಯೇಕದರ್ಶಿಗಳು ತಿಳಿಸಿದ್ದಾರೆ.ಈ ಹಿಂದೆ ಮಾಡಿದ್ದ ಕೆಲಸಕ್ಕೆ ಕೂಲಿಕಾರ್ಮಿಕರಿಗೆ ಕೂಲಿ ಹಣ ನೀಡಿಲ್ಲ’ ಎಂದು ಗ್ರಾಮಸ್ಥರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರಿನ ಟೈ‌ರ್ ಬ್ಲಾಸ್ಟ್ ಸ್ಥಳದಲ್ಲಿಯೇ ಓರ್ವ ಯುವಕ ಸಾವು; ಓರ್ವ ಗಾಯ

ಘಟನೆ ಕುರಿತು ಪ್ರತಿಕ್ರಿಯಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಭೂಷಣ ಕಾಂಬ್ಳೆ, ‘ ವೈಯಕ್ತಿಕ ಕೆಲಸ ನಿಮಿತ್ತ ನಾನು ಬೇರೆ ಊರಿಗೆ ಬಂದಿರುವೆ. ನೈಜ ಕೂಲಿಕಾರ್ಮಿಕರಿಗೆ ಮಾತ್ರ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮತ್ತು ಕೂಲಿ ಹಣ ಪಾವತಿಸುವ ಬಗ್ಗೆ ಕೂಲಿಕಾರ್ಮಿಕರಿಗೆ ತಿಳಿಸಲಾಗಿತ್ತು. ಕೂಲಿಕಾರ್ಮಿಕರ ಹೆಸರಿನಲ್ಲಿ ಬೇರೆಯವರಿಗೆ ಹಣ ಪಾವತಿಸಲು ನಿರಾಕರಿಸಿದ ಕಾರಣ ಇಂದಿನ ಘಟನೆ ನಡೆದಿದೆ’ ಎಂದು ತಿಳಿಸಿದರು.

1000133326
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...