ರಾಯಚೂರು | ಎಚ್. ಕಾಂತರಾಜ್ ಆಯೋಗದ ವರದಿ ಜಾರಿಗೆ ಹಿಂದುಳಿದ ಜಾತಿಗಳ ಒಕ್ಕೂಟದ ಆಗ್ರಹ

Date:

ಹಿಂದುಳಿದ ವರ್ಗಗಳ ಗಣತಿ ನಡೆಸಿ ಸಲ್ಲಿಸಲಾಗಿರುವ ಎಚ್ ಕಾಂತರಾಜ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಏನೇ ವಿರೋಧಗಳಿದ್ದರೂ ವರದಿ ಮಂಡನೆ ನಂತರ ಪರಿಶೀಲಸಬೇಕೆಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಆಗ್ರಹಿಸಿದ್ದಾರೆ.

ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 168ಕೋಟಿ ರೂ. ಖರ್ಚು ಮಾಡಿ ಸಿದ್ಧಪಡಿಸಲಾಗಿರುವ ವರದಿಯನ್ನು ಸರ್ಕಾರ ಅಂಗೀಕಾರಗೊಳಿಸುವ ಮುನ್ನವೇ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ವರದಿಯ ಜಾತಿವಾರು ಅಂಕಿ ಅಂಶಗಳೇ ಬಹಿರಂಗಗೊಂಡಿಲ್ಲ. ಆಯೋಗದ ಕಾರ್ಯದರ್ಶಿ ಸಹಿಯಿಲ್ಲ. ವರದಿಯೇ ಇಲ್ಲ ಎಂದು ಆರೋಪಿಸಲಾಗುತ್ತಿದೆ.

ಆದರೆ, ಶಾಶ್ವತ ಹಿಂದುಳಿದ ಆಯೋಗದ ಆಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಪೂರ್ಣ ವರದಿ ನೀಡಲು ಸಿದ್ದತೆಯಲ್ಲಿದ್ದಾರೆ. ಆದರೆ, ಬಲಾಡ್ಯ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ವಿರೋಧ ಏನಿದ್ದರೂ ಮೊದಲು ಆಯೋಗ ವರದಿ ಮಂಡಿಸಿ ಬಹಿರಂಗಪಡಿಸಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದು ಲಕ್ಷ 13ಸಾವಿರ ನೌಕರರು ನಡೆಸಿರುವ ಸಮೀಕ್ಷಾ ವರದಿಯನ್ನು ಯಾರದೋ ಒತ್ತಡಕ್ಕೆ ಮಣಿಯದೇ ಹಿಂದುಳಿದ, ಅಲ್ಪಸಂಖ್ಯಾತರ, ದಲಿತರು ಸೇರಿದಂತೆ ಸಮುದಾಯ ನಿಖರ ಅಂಕಿ-ಅಂಶಗಳನ್ನು ಪಡೆಯಲು ಆಯೋಗ ವರದಿ ಮಂಡಿಸಬೇಕು ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವುಕುಮಾರ ಸೇರಿದಂತೆ ಅನೇಕ ಸಚಿವರುಗಳು, ಶಾಸಕರುಗಳು ವಿರೋಧಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯಲ್ಲಿಯೇ ಹೇಳಿರುವದು ಸ್ವಾಗತಾರ್ಹವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಪ್ರವರ್ಗ 1 ಮತ್ತು 2ಎನಲ್ಲಿ ಬರುವ ಹಿಂದುಳಿದ ಜಾತಿಗಳಿಗೆ ಸರ್ಕಾರ ಕಾಮಗಾರಿಗಳಲ್ಲಿ ಒಂದು ಕೋಟಿ ರೂ. ಕಾಮಗಾರಿ ಶೇ.19 ಮೀಸಲಾತಿ ನೀಡಲು ನಿರ್ಧರಿಸಿರುವುದನ್ನು ಅವರು ಸ್ವಾಗತಿಸಿದರು.

ಈ ಕುರಿತು ಬೆಂಗಳೂರಿಗೆ ನಿಯೋಗ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಹಿಂದುಳಿದ ವರ್ಗಗಳ ಅನೇಕ ನಿಗಮಗಳನ್ನು ಸರ್ಕಾರ ಘೋಷಣೆ ಮಾಡಿದೆ. ಆದರೆ, ಯಾವುದೇ ಅನುದಾನ ನಿಡಿಲ್ಲ. ಬಲಿಷ್ಠ ಸಮುದಾಯಗಳಿಗೆ 500ಕೋಟಿ ಅನುದಾನ ನೀಡಲಾಗಿತ್ತು. ಜನಸಂಖ್ಯೆಯಲ್ಲಿ ಅತಿ ಹೆಚ್ಚು ಇರುವ ಹಿಂದುಳಿದ ಸಮೂದಾಯಗಳ ನಿಗಮಕ್ಕೆ 120ಕೋಟಿ ರೂ. ಅನುದಾನ ನೀಡಲು ಮನವಿ ಸಲ್ಲಿಸುತ್ತೇವೆ ಎಂದರು.

ವಕೀಲ ಶ್ರೀಕಾಂತ ಮಾತನಾಡಿ 2015ರಿಂದ 2018ರವರೆಗೆ ನಡೆದಿರುವ ಕಾಂತರಾಜ ಆಯೋಗ ಜಾರಿಗೆ ಬಲಿಷ್ಠ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿರುವದು ಕಳವಳಕಾರಿಯಾಗಿದೆ. ಆಯೋಗ ವರದಿಯಲ್ಲಿ ಏನಿದೆ ಎಂದು ಗೋತ್ತಿಲ್ಲ. ಮಂಡನೆಗೆ ಸುಖಾಸುಮ್ಮನೆ ವಿರೋಧಿಸಲಾಗುತ್ತದೆ. ಆಯೋಗ ವರದಿಯಿಂದ ಅನೇಕ ಸಮುದಾಯಗಳ ಮಾಹಿತಿ ದೊರೆಯಲಿದೆ. ಜನಗಣತಿಯೂ ನಡೆಯದೇ ಇರುವಾಗ ಜಾತಿಗಣತಿಯಿಂದ ದೊರೆಯುವ ಮಾಹಿತಿ ಆಧಾರಿಸಿ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ವಿರೋಧಿಸುವವರು ವರದಿ ಮಂಡನೆಗೆ ಅವಕಾಶ ನೀಡಬೇಕೆಂದರು.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಹನುಮಂತಪ್ಪ, ಜಂಬಣ್ಣ ಯಕ್ಲಾಸಪುರು, ಭಾಸ್ಕರ ಇಟಗಿ, ಬಿ.ಬಸವರಾಜ, ಆಂಜಿನೇಯ್ಯ ಸೇರಿ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...