ರಾಯಚೂರು | ಅರೆಬರೆ ರಸ್ತೆ ಕಾಮಗಾರಿ : ಗ್ರಾಮಸ್ಥರಿಂದ ಆಕ್ರೋಶ; ಅಧಿಕಾರಿಗಳಿಗೆ ಹಿಡಿಶಾಪ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಡೋಣಿ ಗ್ರಾಮದಿಂದ ಹಾದು ಹೋಗುವ ಹಟ್ಟಿ ಹೊಸೂರು – ರೋಡಲಬಂಡ (ತವಗಾ) ಗ್ರಾಮಕ್ಕೆ ತೆರಳುವ ರಸ್ತೆ ಪೂರ್ತಿ ಹದಗೆಟ್ಟು ಸಂಚಾರಕ್ಕೆ ಅಡೆತಡೆ, ರಸ್ತೆಗೆ ತೆರಳಿದರೆ ವಾಹನಗಳು ಸಿಲುಕಿಕೊಂಡು ಒದ್ದಾಡುವ ಪರಿಸ್ಥಿತಿ ಉಂಟಾಗುತ್ತಿರುವುದರ ಬಗ್ಗೆ ನೊಂದು ಸಾರ್ವಜನಿಕರು, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಡೋಣಿ ಅಡ್ಡ ರಸ್ತೆಯಿಂದ ಹಾದು ಹೋಗುವ ಹಟ್ಟಿ ಹೊಸೂರು – ರೋಡಲಬಂಡಾ (ತವಗ) ಗ್ರಾಮಕ್ಕೆ ಸುಮಾರು ಎಂಟು ವರ್ಷಗಳ ಹಿಂದೆ ರಸ್ತೆ ನಿರ್ಮಾಣ ಮಂಜೂರು ಆಗಿದ್ದು, ಆದರೆ ಇಲ್ಲಿಯವರೆಗೂ ಸಂಪೂರ್ಣವಾದ ರಸ್ತೆ ನಿರ್ಮಾಣ ಕಾಮಗಾರಿ ಮಾಡಿರುವುದಿಲ್ಲ ಎಂದು ಗ್ರಾಮದ ಜನರು ಕಿಡಿಕಾರುತ್ತಿದ್ದಾರೆ.

ರಸ್ತೆಯು ಕೂಡ ಅರೆಬರೆ ಮಾಡಿ ಮಳೆಗೆ ಕೊಚ್ಚಿಕೊಂಡು ಅಸ್ತವ್ಯಸ್ತವಾಗಿದೆ. ಹಟ್ಟಿ ಪಟ್ಟಣದಿಂದ 1 ಕಿ.ಮೀ. ಮತ್ತು ತವಗ ಗ್ರಾಮದಿಂದ 1 ಕಿ.ಮೀ ಕಾಮಗಾರಿ ಮಾಡದೆ ಹಾಗೇ ಉಳಿದಿರುತ್ತದೆ. ಎರಡೂ ಕಡೆ ಬಿಟ್ಟು ಮಧ್ಯದಲ್ಲಿ ರಸ್ತೆ ನಿರ್ಮಾಣ ಮಾಡಿರುತ್ತಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241010 WA0040

ಹಟ್ಟಿಯಿಂದ ಅರ್ಧ ಮಾಡಿದ ರಸ್ತೆಗೆ ತಲುಪಬೇಕೆಂದರೆ ರಸ್ತೆಗಳು ಕೆಸರುಗದ್ದೆಯಂತೆ ಆಗಿರುತ್ತದೆ. ಆದ್ದರಿಂದ ಸಾರ್ವಜನಿಕರಿಗೆ ಮತ್ತು ರೈತರಿಗೆ ಸಂಚರಿಸಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಸ್ತೆ ಬಗ್ಗೆ ಮಾತನಾಡಿದ ಗ್ರಾಮಸ್ಥ ಲಿಂಗಪ್ಪ ಹಟ್ಟಿ, ರಸ್ತೆಯು ಅರೆಬರೆ ಮಾಡಿದ್ದಾರೆ. ಕಳಪೆ ಕಾಮಗಾರಿ ಮಾಡಿದ್ದು, ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂಗೆ ಕೆಲಸ ನಿರ್ವಹಿಸಿದ್ದಾರೆ. ಬೇಕಾಬಿಟ್ಟಿ ಕಾಮಗಾರಿ ನಡೆಸಿ, ಸರ್ಕಾರದ ಹಣವನ್ನು ನುಂಗಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಕೇರಳದ ಓಣಂ ಲಾಟರಿಯಲ್ಲಿ ₹25 ಕೋಟಿ ಗೆದ್ದ ಪಾಂಡವಪುರದ ಬೈಕ್ ಮೆಕ್ಯಾನಿಕ್!

ಇದೇ ರಸ್ತೆಯಿಂದ ಶಾಲಾ ಮಕ್ಕಳ ವಾಹನಗಳು ಓಡಾಡುತ್ತವೆ. ಮಾನ್ವಿಯಲ್ಲಿ ಆದಂತಹ ಅಪಘಾತದ ರೀತಿಯ ಘಟನೆ ಸಂಭವಿಸಿದರೆ ಯಾರ ಹೊಣೆ? ಅಪಘಾತ ಸಂಭವಿಸಿದಾಗ ಎಲ್ಲರೂ ಎಚ್ಚೆತ್ತುಗೊಂಡರೆ, ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರೆ ಏನು ಪ್ರಯೋಜನವೇನು ಎಂದು ಪ್ರಶ್ನಿಸಿದರು.

ರಸ್ತೆ ಬಗ್ಗೆ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದರೂ ಸ್ಪಂದನೆ ಸಿಕ್ಕಿಲ್ಲ. ಜಿಲ್ಲೆಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರಿಗೂ ಆಗಮಿಸಿದಾಗ ರಸ್ತೆ ಬಗ್ಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...