ರಾಯಚೂರು | ಒಳಮೀಸಲಾತಿ ಜಾರಿಗೆ ಮತ್ತೊಂದು ಸಮಿತಿ ರಚನೆ ತರಾತುರಿಯ ತೀರ್ಮಾನ : ಎಸ್ ಮಾರೆಪ್ಪ

Date:

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ಕುರಿತಾಗಿ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಿರುವುದು ತರಾತುರಿಯ ನಿರ್ಧಾರವಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಎಸ್.ಮಾರೆಪ್ಪ ಹೇಳಿದರು.

ರಾಯಚೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ಪರಿಶಿಷ್ಟ ಜಾತಿಗಳ ದತ್ತಾಂಶವಿದ್ದರೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವ ಉದ್ದೇಶದಿಂದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಮೂರು ತಿಂಗಳೊಳಗೆ ಸಮುದಾಯ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ. ಎ.ಜೆ.ಸದಾಶಿವ ಆಯೋಗದ ವರದಿ ಅಂಕಿ-ಅಂಶಗಳ ಆಧಾರದ ಮೇಲೆ ಒಳ ಮೀಸಲಾತಿ ವರ್ಗಿಕರಣಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆಯೋಗದ ವರದಿಯಲ್ಲಿಯೇ ಆದಿ ಕರ್ನಾಟಕ, ಆದಿ ದ್ರಾವಿಡದ ಕುರಿತು ಪ್ರತ್ಯೇಕ ಕಲಂಗಳನ್ನು ಸಮೀಕ್ಷೆ ಫಾರಂನಲ್ಲಿ ಅಳವಡಿಸಲಾಗಿತ್ತು. ವೈಜ್ಞಾನಿಕವಾಗಿಯೇ ಸಮೀಕ್ಷೆ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತ ಪಡೆಯುವ ಉದ್ದೇಶದಿಂದ ತರಾತುರಿಯಲ್ಲಿ ನಿರ್ಧರಿಸಿರುವುದು ಸಮಾಧಾನ ತಂದಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241029 WA0003

ಒಳಮೀಸಲಾತಿ ಜಾರಿಗೆ ತರುವ ನಿರ್ದಾರ ಸ್ವಾಗತಾರ್ಹವಾಗಿದ್ದರೂ ಜನರನ್ನು ದಾರಿತಪ್ಪಿಸುವ ಕೆಲಸ ಸಚಿವ ಸಂಪುಟ ಕೈಗೊಂಡಿದೆ. ಹೊಸದಾಗಿ ಸಮಿತಿ ರಚಿಸುವ ಅವಶ್ಯಕತೆ ಇರಲಿಲ್ಲ. ಜಾರಿಗೊಳಿಸಲು ಮತ್ತಷ್ಟು ವಿಳಂಬ ಮಾಡುವ ಉದ್ದೇಶ ಸರ್ಕಾರ ಹೊಂದಿರುವ ಸಂಶಯಗಳಿವೆ. ಈಗಾಗಲೇ ಸಂಡೂರು, ಹಾವೇರಿ ಉಪ ಚುನಾವಣೆಯಲ್ಲಿ ಮಾದಿಗ ಸಮೂದಾಯ ಜನರು ಕಾಂಗ್ರೆಸ್ ಬೆಂಬಲಿಸಲು ಮುಂದಾಗಿಲ್ಲ. ಇನ್ನೆರಡು ದಿನಗಳಲ್ಲಿ ಹೋರಾಟ ಸಮಿತಿಯ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ

ಈಗಾಗಲೇ ಕಾಂಗ್ರೆಸ್ ಸೋಲಿಸಲು ಪ್ರಚಾರ ಕಾರ್ಯವನ್ನು ಹೋರಾಟ ಸಮಿತಿ ಕೈಗೊಂಡಿದೆ. ಸಚಿವ ಸಂಪುಟ ತೀರ್ಮಾನದಂತೆ ಮೇಲ್ನೋಟಕ್ಕೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದ್ದರೂ ವಿಳಂಬವಾಗುವ ಎಲ್ಲ ಲಕ್ಷಣಗಳಿವೆ. ಸಮುದಾಯದ ಜನರು ಯಾವುದೇ ಅವಸರದ ನಿರ್ಧಾರ ಕೈಗೊಳ್ಳದೇ ಹೋರಾಟ ತಾರ್ಕಿಕ ಅಂತ್ಯ ಕಾಣಿಸುವ ನಿರ್ಧಾರಕ್ಕೆ ಬೆಂಬಲಿಸಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ, ಉಪಾಧ್ಯಕ್ಷ ಹೇಮರಾಜ ಅಸ್ಕಿಹಾಳ, ನರಸಿಂಹ ಮರ್ಚಟ್ಹಾಳ, ಆಂಜಿನಯ್ಯ ಉಟ್ಕೂರು, ತಾಯಪ್ಪ ಗಧಾರ, ಆಂಜಿನೇಯ್ಯ ಕುರಬದೊಡ್ಡಿ, ನರಸಿಂಹಲು, ಶ್ರೀನಿವಾಸ ಕೊಪ್ಪರ, ಅಬ್ರಹಾಂ ಕಮಲಾಪುರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...