ರಾಯಚೂರು | ಸೌಹಾರ್ದ ಪರಂಪರೆಯ ಅಭಿಯಾನದ ಮೂಲಕ ಮಾನವ ಸರಪಳಿ

Date:

ದೇಶದಲ್ಲಿ ತತ್ವಪದಕಾರರು, ಕವಿಗಳು, ವಿವಿಧ ಧಾರ್ಮಿಕ ಗುರುಗಳು, ಚಿಂತಕರು, ಕ್ರಿಯಾ ಶೀಲರು, ಸಮಾನತೆ ಮತ್ತು ಸಹಿಷ್ಣುತೆಯ ಆದರ್ಶ ಮಾದರಿಗಳನ್ನು ಬಿತ್ತಿ ಬೆಳೆದಿದ್ದಾರೆ. ಆದರೆ ಇತ್ತೀಚಿನ ಕೆಲವು ಅಹಿತಕರ ಘಟನೆಗಳು ನಮ್ಮ ಸೌಹಾರ್ದ ಸಂಸ್ಕೃತಿಗೆ ಧಕ್ಕೆ ತರುತ್ತಿವೆ ಎಂದು ಸೌಹಾರ್ದ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದರು.

ಸೌಹಾರ್ದ ಸಂಘಟನೆಗಳು, ವಿವಿಧ ಪ್ರಗತಿಪರ, ಜನಪರ ಸಂಘಟನೆಗಳು, ಸಮಾನ ಮನಸ್ಕರು ವತಿಯಿಂದ ಸೌಹಾರ್ದ ಪರಂಪರೆಯ ಅಭಿಯಾನದ ಮೂಲಕ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಸೌಹಾರ್ದತಾ ಮಾನವ ಸರಪಳಿ ರಚಿಸಿದವೇಳೆ ಮಾತನಾಡಿದರು.

“ದ್ವೇಷದ ದಾಹವನ್ನು ಹೆಚ್ಚಿಸುತ್ತಿವೆ. ಮಾನವೀಯ ಮೌಲ್ಯಗಳನ್ನು ಮಣ್ಣು ಮಾಡುತ್ತಿವೆ. ಆದರೂ ನಮ್ಮ ಮಣ್ಣಿನಲ್ಲಿ ಸೌಹಾರ್ದದ ಬೆಳೆ ಹಾಳಾಗುವುದಿಲ್ಲ. ಬದಲಾಗಿ ಬೆಂಕಿಯನ್ನು ಬೆಳಕಾಗಿಸುತ್ತದೆ. ಕೆಂಡವನ್ನೂ ಕರುಳಾಗಿಸುತ್ತದೆ. ಇಂಥ ಪರಂಪರೆಯ ಭರವಸೆಯನ್ನು ಬಿತ್ತರಿಸುವುದು ಎಲ್ಲ ಮಾನವೀಯ ಮನಸ್ಸುಗಳ ನೈತಿಕ ಹೊಣೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಂವಿಧಾನದಲ್ಲಿರುವ ಧಾರ್ಮಿಕ ಸ್ವಾತಂತ್ರ‍್ಯ ಮತ್ತು ಸಮಾನತೆಯ ಅಂಶಗಳನ್ನು ಸೌಹಾರ್ದದ ಸಕಾರಾತ್ಮಕ ಸಾಧನವಾಗಿ ಜನರಿಗೆ ಮನವರಿಕೆ ಮಾಡಿಕೊಡುವುದು ಇಂದು ಎಂದಿಗಿಂತ ಹೆಚ್ಚು ಅಗತ್ಯವಾಗಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವುದು ಹೇಗೆ ಸಂವಿಧಾನ ವಿರೋಧಿಯೆಂದು ಸಾರ್ವಜನಿಕರಿಗೆ ಮತ್ತಷ್ಟು ಮನದಟ್ಟು ಮಾಡಬೇಕಾಗಿದೆ” ಎಂದು ತಿಳಿಸಿದರಿ.

“ನಮ್ಮ ದೇಶದಲ್ಲಿ ಸೌಹಾರ್ದತೆಯ ಗಟ್ಟಿ ಪರಂಪರೆಯಿದೆ. ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೂ ಈ ಸೌಹಾರ್ದ ಪರಂಪರೆಯು ಸಂಕುಚಿತ ಸವಾಲುಗಳನ್ನು ಮೆಟ್ಟಿ ಮುಂದುವರೆಯುತ್ತ ಬಂದಿದೆ. ಹೀಗೆ ಮುಂದುವರೆಯುತ್ತ, ವಿವಿಧ ಧರ್ಮಗಳ ಜನಸಮುದಾಯಗಳ ನಡುವೆ ಭಾವನಾತ್ಮಕ ಬೆಸುಗೆಯಾಗುತ್ತಾ ಬಂದ ಸೌಹಾರ್ದ ಸಂವೇದನೆಗೆ ಧಕ್ಕೆ ತರಲು ಯಾವುದೇ ಧರ್ಮ ಮೂಲದವರು ಪ್ರಯತ್ನಿಸಿದರೂ ಅದನ್ನು ವಿರೋಧಿಸಬೇಕಾಗುತ್ತದೆ. ಇಲ್ಲದಿದ್ದರೆ ಜನಸಾಮಾನ್ಯರು ನಮ್ಮಲ್ಲಿ ಪೂರ್ವಗ್ರಹ ಮತ್ತು ಪಕ್ಷಪಾತವನ್ನು ಕಾಣುತ್ತಾರೆ. ಕೆಲವು ಹಿತಾಸಕ್ತಿಗಳು ಧರ್ಮದ ಹೆಸರಿನಲ್ಲಿ ಜನಸಮುದಾಯದ ನಡುವೆ ಕಂದಕ ಮೂಡಿಸುತ್ತ ಕಲುಷಿತ ವಾತಾವರಣಕ್ಕೆ ಕಾರಣವಾಗುತ್ತಿರುವಾಗ, ಜನಸಮುದಾಯಕ್ಕೆ ಸತ್ಯವನ್ನು ಮನವರಿಕೆ ಮಾಡಿಕೊಡುವುದು ನಮ್ಮ ಅಭಿಯಾನದ ಉದ್ದೇಶವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ದ; ಪ್ರಮೋದ್ ಮಧ್ವರಾಜ್

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ವೀರ ಹನುಮಾನ, ಚಾಮರಸ ಮಾಲೀ ಪಾಟೀಲ್, ವೆಂಕಟೇಶ ಬೇವಿನಬೆಂಚಿ, ಕರಿಯಪ್ಪ ಅಚ್ಚೊಳ್ಳಿ, ಹೆಚ್.ಪದ್ಮಾ, ಡಿ ಎಸ್ ಶರಣಬಸವ, ಕೆ ಜಿ ವೀರೇಶ, ಪ್ರವೀಣ್ ರೆಡ್ಡಿ ಗುಂಜಳ್ಳಿ, ಬಷೀರ್ ಅಹ್ಮದ್, ಖಾಜಾ ಅಸ್ಲಾ ಪಾಷಾ, ಸುಲೋಚನಾ, ಜಾನ್ ವೆಸ್ಲಿ, ಗೋಕುರಮ್ಮ, ಆಂಜನೇಯ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...