ರಾಯಚೂರು | ನಾನು ಕ್ಯಾಮರಾ ಮುಂದೆ ನಟನೆ ಮಾಡುತ್ತೇನೆ, ಪ್ರಧಾನಿ ಮೋದಿ ನಿಜ ಜೀವನದಲ್ಲಿ ನಟನೆ ಮಾಡುತ್ತಿದ್ದಾರೆ: ನಟ ಪ್ರಕಾಶ್‌ ರೈ

Date:

ನಾನು ಕ್ಯಾಮರಾ ಮುಂದೆ ನಟನೆ ಮಾಡುತ್ತೇನೆ. ಆದರೆ, ಪ್ರಧಾನಿ ಮೋದಿ ನಿಜ ಜೀವನದಲ್ಲಿ ನಟನೆ ಮಾಡುತ್ತಿದ್ದು, ಅವರೊಬ್ಬ ದೊಡ್ಡ ನಟರಾಗಿದ್ದಾರೆ ಎಂದು ನಟ ಪ್ರಕಾಶ ರೈ ಮೋದಿಯ ಹೆಸರು ಹೇಳದೆ ಮಹಾಪ್ರಭು ಎನ್ನುವ ಮೂಲಕ ಪರೋಕ್ಷವಾಗಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಯಚೂರು ನಗರದಲ್ಲಿ ಭಾನುವಾರ (ಏ.28) ಸಂಜೆ ಕರ್ನಾಟಕ ವೆಲ್‌ಫೇರ್ ಟ್ರಸ್ಟ್ ಶಾಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಏರ್ಪಡಿಸಿದ್ದ ರಾಜಕೀಯ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ದೇಶದ ಜನರು ನನ್ನ ಪರಿವಾರ ಎಂದು ಹೇಳುತ್ತಾನೆ. ಆದರೆ ಆ ಪರಿವಾರದಲ್ಲಿ ರೈತರು ಇಲ್ಲ ಎಂದರು.

ಆತನಿಗೆ ಓದಿನ ಮಹತ್ವ ಗೊತ್ತಿಲ್ಲ. ಹೀಗಾಗಿ ಯುವಕರಿಗೆ ಪಕೋಡ ಮಾರಿ ಎಂದು ಹೇಳುತ್ತಾನೆ. ಇನ್ನೂ ಆತನಿಗೆ ರೈತರ ಸಂಕಷ್ಟ ಹೇಗೆ ಗೊತ್ತಾಗಬೇಕು. ರೈತರಿಗೆ ಕೊಡುವುದು ಭಿಕ್ಷೆ ಅಂದುಕೊಂಡಿದಾರೆ. ರೈತರು ಭಿಕ್ಷೆ  ಕೇಳುತ್ತಿಲ್ಲ ಘನತೆ ಕೇಳುತ್ತಿದ್ದಾರೆ. ರೆಸಾರ್ಟ್ಗೆ ನೀರು ಕೊಡುವ ಸರ್ಕಾರ ರೈತರ ಬೆಳೆಗೆ ನೀರು ಕೊಡುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೊಂದು ಪಕ್ಷದ ಸರ್ಕಾರ ಬಂದರೆ ಮಹಿಳೆಯರ ಮಂಗಳಸೂತ್ರ ಕಿತ್ತುಕೊಳ್ಳುತ್ತಾರೆ ಎಂದು ಹೇಳುವವರು ಹೋರಾಟದಲ್ಲಿ ಮಡಿದ ರೈತರ ಪತ್ನಿಯರ ಮಂಗಳಸೂತ್ರ ಯಾರು ಕಿತ್ತಿಕೊಂಡಿದ್ದಾರೆ ಎಂದು ಹೇಳಬೇಕು. ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ಕೊಟ್ಟ ಮಾತನ್ನು ನೆನಪಿಸಿದರೆ ದೇಶ ದ್ರೋಹಿಯ ಪಟ್ಟ ಕಟ್ಟಲಾಗುತ್ತಿದೆ. ನಾವು ಒಗ್ಗಟ್ಟಾಗಿ ನಿಲ್ಲುವವರೆಗೆ ಸರ್ಕಾರಗಳು ಕೆಲಸ ಮಾಡುವುದಿಲ್ಲ. ಕೋಮುವಾದಿ ಸರ್ಕಾರವನ್ನು ಕಿತ್ತೊಗೆದ ನಂತರ ಮುಂದೆ ಬರುವ ಸರ್ಕಾರವನ್ನು ಹೇಳಿದ ಕೆಲಸ ಮಾಡುವವರೆಗೆ ಬಿಡುವುದು ಬೇಡ. ಇಂದಿನ ದಿನಗಳಲ್ಲಿ ಹೋರಾಟದ ಅವಶ್ಯಕತೆ ಇದೆ.

ಮೋದಿಯ ಆಸ್ಥಾನಕ್ಕೆ ವಿದೂಷಕರು ಬೇಕೆ ಹೊರತು ಸಂಸದರಲ್ಲ. ನಾವು ಆರಿಸಿ ಕಳಿಸಿದ 28 ಸಂಸದರು ಕಳೆದ 5 ವರ್ಷದಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗ ಒಂದು ಮಾತನಾಡಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಾದ ನಾವು ನಮ್ಮ ಜವಾಬ್ದಾರಿ ತಿಳಿಯಬೇಕು ಎಂದು ಹೇಳಿದರು.

ಸಂಯುಕ್ತ ಕಿಸಾನ್ ಮೋರ್ಚಾ ಪ್ರಮುಖ ಅವತಾರ ಸಿಂಗ್ ಮಾತನಾಡಿ, ಯಾವುದೇ ರಾಜ್ಯಗಳಾದರೂ ಅಲ್ಲಿನ ರೈತರ ದುಃಖ, ಸಂಕಷ್ಟಗಳು ಒಂದೇ. ಆದರೆ ವಿಷಯ ವಸ್ತು ಮಾತ್ರ ಬೇರೆ ಬೇರೆಯಾಗಿರುತ್ತದೆ. ರೈತರು ಒಗ್ಗೂಡುವ ಮೂಲಕ ಕೇಂದ್ರ ಸರ್ಕಾರವನ್ನು ಮೊಣಕಾಲ ಮೇಲೆ ಕುಳಿತುಕೊಳ್ಳುವಂತೆ ಮಾಡಿದೆ. ಇದೇ ಸರ್ಕಾರ ಮುಂದುವರಿದರೆ ಹೋರಾಟ ಮಾಡುವ ಅಕಾರವನ್ನು ಕಿತ್ತುಕೊಳ್ಳುತ್ತದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ದೇಶದಲ್ಲಿ 1474 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಒಂದು ಸಮಿತಿ ನೇಮಕ ಮಾಡಲಿಲ್ಲ. ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸವನ್ನು ಪ್ರಧಾನಿಯಿಂದ ಆಗಲಿಲ್ಲ. ಆದರೆ ಅದಾನಿ ಮೊಮ್ಮಗನ ನಾಮಕರಣಕ್ಕೆ ಹೋಗುತ್ತಾರೆ. ಕೃಷಿ ಉಳಿಸಲು ಮೋದಿ ಸೋಲಿಸಲು ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಸಂಯುಕ್ತ ಹೋರಾಟ ಸಮಿತಿ ಪದಾಕಾರಿಗಳಾದ ಪ್ರಭಾಕರ ಪಾಟೀಲ್, ಡಿ.ಎಸ್.ಶರಣಬಸವ, ಕೆ.ಜಿ.ವೀರೇಶ, ಮಾರೆಪ್ಪ ಹರವಿ, ಜಾನ್‌ವೆಸ್ಲಿ, ಖಾಜಾ ಅಸ್ಲಂ ಅಹ್ಮದ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...