ರಾಯಚೂರು | ಐಸಿಡಿಎಸ್ ಕೈಬಿಡಲು ಆಗ್ರಹಿಸಿ ಸಹಿ ಸಂಗ್ರಹ ಚಳುವಳಿ

Date:

ಕೇಂದ್ರ ಸರ್ಕಾರದ ಐಸಿಡಿಎಸ್ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಅಕರ್ಷಿಸಲು ಮುಖಚಹರೆ ಗುರುತಿಸುವ ಕ್ರಮವನ್ನು ಅಳವಡಿಸಿದ್ದು, ಇದರಿಂದ ತೊಂದರೆಗಳಾಗುತ್ತಿರುವುದರಿಂದ ಕೂಡಲೇ ಇದನ್ನು ಕೈಬಿಡಲು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ ಕೇಂದ್ರ ಪೋಸ್ಟ್ ಆಫೀಸ್ ಕಚೇರಿ ಮುಂದೆ ಸಹಿ ಸಂಗ್ರಹಿಸಿ ಚಳುವಳಿ ನಡೆಸಿ, ರಿಜಿಸ್ಟರ್ ಪೋಸ್ಟ್ ಮೂಲಕ ಕೇಂದ್ರ ರಾಜ್ಯ ಸರ್ಕಾರಕ್ಕೆ ಒತ್ತಾಯದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಪೋಸ್ಟ್ ಮಾಡಿ ಆಗ್ರಹಿಸಿದರು.

ಕೇಂದ್ರ ಸರ್ಕಾರದ ಐಸಿಡಿಎಸ್ ಯೋಜನೆಗೆ 50 ವರ್ಷಗಳು ಪೂರೈಸುತ್ತಿದ್ದು, ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರಗಳು ಕ್ರಮಗಳನ್ನು ರೂಪಿಸಬೇಕಿತ್ತು. ಆದರೆ ಅದರ ಬದಲಾಗಿ ಸಂಕೀರ್ಣಗೊಳಿಸಲಾಗುತ್ತಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಸೌಲಭ್ಯಗಳನ್ನು ಕೊಡದೇ ಮುಖಚಹರೆ ಗುರುತಿಸುವ ಕ್ರಮವನ್ನು ಅಳವಡಿಸಿದ್ದರಿಂದ ಕ್ಷೇತ್ರಮಟ್ಟದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ. ಆಹಾರ ಭದ್ರತಾ ಕಾಯ್ದೆಯಡಿ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು, ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಆಧಾರ ಕಾರ್ಡ್ ಇಲ್ಲ ಎಂಬ ನೆಪದಲ್ಲಿ ಸಬ್ಸಿಡಿ ಹಾಗೂ ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳಿಗೆ ವಂಚನೆಯಾಗಬಾರದು. ಸಂರಕ್ಷಣೆ ಮಾಡಬೇಕಾದ ಸರ್ಕಾರಗಳು ಇಂದು ಮುಖಚರ್ಯವನ್ನು ಕಡ್ಡಾಯಗೊಳಿಸುವ ಮುಖಾಂತರ ಫಲಾನುಭವಿಗಳ ಹಕ್ಕನ್ನು ನಿರಾಕರಿಸುತ್ತಿವೆ ಎಂದು ಆಪಾದಿಸಿದರು.

ಮುಖಚಹರೆಯಿಂದ ಫಲಾನುಭವಿಗಳ ವೈಯಕ್ತಿಕ ಮಾಹಿತಿ ಸೋರಿಕೆಯಾಗುತ್ತದೆ, ಸೈಬರ್ ವಂಚನೆಗಳಿಗೆ ಅನುಕೂಲ ದಾರಿಯಾಗುತ್ತದೆ. ಶೇ60 ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಇಂತಹ  ನಿರ್ಬಂಧಗಳನ್ನು ಹಾಕಿ  ತನ್ನ ಪಾಲಿನ ಹಣ ಕಡಿಮೆ ಮಾಡಲು ಮುಂದಾಗಿದನ್ನು ಖಂಡಿಸಿದರು.

ಚಟುವಟಿಕೆ ಆಧಾರದಲ್ಲಿ ಹಣ ಬಿಡುಗಡೆ ಮಾಡುವ ವಿಧಾನಗಳು ಮತ್ತು ಭಾರತದಲ್ಲಿ ಐಸಿಡಿಎಸ್ ಫಲಾನುಭವಿಗಳನ್ನು ಕಡಿಮೆ ತೋರಿಸಿ ಹಣ ಕಡಿತ ಮಾಡುವ ಯೋಜನೆ ಇದಾಗಿದೆ. ಕೂಡಲೇ ಇದನ್ನು ರದ್ದು ಮಾಡಿ ಐಸಿಡಿಎಸ್ ಯೋಜನೆಯನ್ನು ಖಾಯಂ ಮಾಡಬೇಕು, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ‘ಸಿ’ ಮತ್ತು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು. 2018 ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಿ, ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಣಂತಿ, ಮಗು ಸಾವು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಪದ್ಮಾ, ಕಾರ್ಯದರ್ಶಿ ನರ್ಮದಾ, ಖಜಾಂಚಿ ಗಂಗಮ್ಮ, ಶಾಂತ, ರಾಘಮ್ಮ, ಶರಣಮ್ಮ, ಸುನಿತಾ, ಶಾರದಾ, ಶಾಂತಮ್ಮ, ಮಲ್ಲಮ್ಮ, ಗೋಕುರಮ್ಮ, ಚಂದ್ರಮ್ಮ, ಇಂದ್ರಮ್ಮ, ಅಸ್ಮೀ, ರೇಹಮತ್, ಗೌರಮ್ಮ. ವೆಂಕಟಮ್ಮ, ಸಾವಿತ್ರಿ, ಮಮತಾ, ಕೆ.ವಿಜಯ, ನಾಗರತ್ನ, ಡಿಎಸ್ ಶರಣ ಬಸವ, ಕೆಜಿ ವೀರೇಶ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...