ರಾಯಚೂರು | ಗೃಹರಕ್ಷಕರಿಂದ ಅಕ್ರಮವಾಗಿ ಹಣ ವಸೂಲಿ; ಸಮಾದೇಷ್ಟ ಜಂಬಣ್ಣನ ವಜಾಕ್ಕೆ ಆಗ್ರಹ

Date:

ಪೊಲೀಸ್ ಠಾಣೆ ಹಾಗೂ ಇತರೆ ಸ್ಥಳಗಳಲ್ಲಿ ಗೃಹರಕ್ಷಕರ ಕೆಲಸಕ್ಕೆ ನಿಯೋಜಿಸಲು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಗೃಹರಕ್ಷಕ ದಳದ ರಾಯಚೂರು ಜಿಲ್ಲಾ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಪ್ರಗತಿಪರ ಕನ್ನಡಿಗರ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪೊಲೀಸ್ ಠಾಣೆಯ ಸಿಬ್ಬಂದಿಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಅವರಿಗೆ ಕೊಂಚಮಟ್ಟಿಗೆ ವಿಶ್ರಾಂತಿಯನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗೃಹರಕ್ಷರನ್ನು ನೇಮಿಸಿಕೊಳ್ಳುವಂತೆ ಸುತ್ತೋಲೆ ಹೊರಡಿಸಿದೆ. ಅದರಂತೆಯೇ ರಾಯಚೂರು ಜಿಲ್ಲಾದ್ಯಂತ ಅನೇಕ ನಿರುದ್ಯೋಗಿ ಯುವಕ, ಯುವತಿಯರು ಗೃಹರಕ್ಷಕದಳ ಕರ್ತವ್ಯಕ್ಕೆ ನಿಯೋಜನೆಗೊಳ್ಳುತ್ತಿದ್ದಾರೆ. ರಾಯಚೂರು ನಗರ ಹಾಗೂ ತಾಲೂಕಿನ ವಿವಿಧ ಸ್ಥಳಗಳಲ್ಲಿ ಗೃಹರಕ್ಷಕ ಹುದ್ದೆಗೆ ನೇಮಿಸಿಕೊಳ್ಳಲು ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಆಗಿರುವ ಜಂಬಣ್ಣ ತಮ್ಮ ಮನಸ್ಸಿಗೆ ಬಂದವರಿಗೆ ಮತ್ತು ತಮ್ಮಿಷ್ಟಕ್ಕೆ ತಕ್ಕಂತೆ ಯಾರು ಹೆಚ್ಚಿನ ಹಣವನ್ನು ನೀಡುತ್ತಾರೋ ಅವರಿಗೆ, ಅವರು ಬಯಸುವ ಸ್ಥಳಗಳಿಗೆ ಕರ್ತವ್ಯಕ್ಕೆ ನಿಯೋಜಿಸುತ್ತಿದ್ದಾರೆ” ಎಂದು ದೂರಿದರು.

“ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೃಹರಕ್ಷಕರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಚೂರು ನಗರದ ರಿಮ್ಸ್ ಆಸ್ಪತ್ರೆ ಹಾಗೂ ಇತರೆ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಳ್ಳಬೇಕಾದರೆ ಕರ್ತವ್ಯ ಬಯಸುವ ಪ್ರತಿಯೊಬ್ಬ ಗೃಹರಕ್ಷಕರೂ ಪ್ರತಿ ತಿಂಗಳು ಕನಿಷ್ಠ ₹3,000ದಿಂದ ₹10,000 ನೀಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಎಲ್ಲ ಗೃಹರಕ್ಷಕರ ವಿವರಗಳನ್ನು ಕಲೆಹಾಕಿ, ಪ್ರತಿಯೊಬ್ಬ ಗೃಹರಕ್ಷಕ ಸಿಬ್ಬಂದಿಗಳಿಗೆ ಜಿಲ್ಲಾ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ಬಲಗೈ ಬಂಟನಂತೆ ಕೆಲಸ ನಿರ್ವಹಿಸುವ ಗೃಹರಕ್ಷಕರಾದ ಎಂ ಚಂದ್ರಶೇಖರ ಮೆಟಲ್ ಸಂಖ್ಯೆ 35, ಎಂ ಪಿ ಶಿವಪ್ಪ ಮೆಟಲ್ ಸಂಖ್ಯೆ 60 ಎಂಬುವವರೊಂದಿಗೆ ದೂರವಾಣಿ ಕರೆ ಮಾಡಿಸಿ, ಗೃಹರಕ್ಷಕರು ಪೊಲೀಸ್ ಠಾಣೆ ಕರ್ತವ್ಯಕ್ಕೆ ನಿಯೋಜನೆಗೊಳ್ಳಲು ಸಿದ್ಧರಿದ್ದಾರೆಯೇ ಎಂದು ಕೇಳುತ್ತಾರೆ. ಒಂದು ವೇಳೆ ದೂರವಾಣಿಯಲ್ಲಿ ಮಾತನಾಡಿದ ಗೃಹರಹಕ ಕರ್ತವ್ಯಕ್ಕೆ ಸಿದ್ಧನಿದ್ದರೆ ಅವರಿಂದ ₹15,000ದವರೆಗೆ ಲಂಚಕ್ಕೆ ಬೇಡಿಕೆಯಿಟ್ಟು, ಇದಕ್ಕೆ ಒಪ್ಪದಿದ್ದಲ್ಲಿ ಕನಿಷ್ಟ ₹10,000ವನ್ನಾದರೂ ಪಡೆದು ಗೃಹರಕ್ಷಕ ಹುದ್ದೆಗೆ ನಿಯೋಜನೆಗೊಳಿಸುತ್ತಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಕನಿಷ್ಟವೆಂದರೂ ಸರಿಸುಮಾರು ₹10 ಲಕ್ಷಗಳಷ್ಟು ಹಣವನ್ನು ಕರ್ತವ್ಯ ನಿಯೋಜನೆ ನೆಪದಲ್ಲಿ ಕೊಳ್ಳೆಹೊಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

“ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟ ಜಂಬಣ್ಣ ರಾಮಸ್ವಾಮಿ ಹಾಗೂ ಗೃಹರಕ್ಷಕರಾದ ಎಂ ಚಂದ್ರಶೇಖರ್ ಹಾಗೂ ಎಂ ಪಿ ಶಿವಪ್ಪ ಎಂಬುವವರನ್ನು ಕೂಡಲೇ ಕರ್ತವ್ಯದಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...