ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

Date:

ಸರ್ಕಾರದ ಜಮೀನನ್ನು ಅಕ್ರಮವಾಗಿ ಉಳುಮೆ ಮಾಡುತ್ತಿರುವುದರಿಂದ ನಾಡಗೌಡರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆ ಸಿಂಧನೂರಿನ ಮಿನಿ ವಿಧಾನಸೌಧ ಕಚೇರಿ ಎದುರು ರೈತ ಸಂಘ ಹಾಗೂ ಸಿಪಿಐಎಂಎಲ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

“ಕರ್ನಾಟಕ ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಕಬಳಿಕೆ ಮಾಡಿದ ಜವಳಗೇರಾ ನಾಡಗೌಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ತಳ್ಳಿ, ಅಕ್ರಮ ಸಾಗುವಳಿ ಭೂ ಕಂದಾಯ ವಸೂಲಿ ಮಾಡಿ ತಾಲೂಕಿನಾದ್ಯಂತ ಸರ್ಕಾರಿ ಭೂ ಕಬಳಿಕೆದಾರರಿಂದ ತೆರವುಗೊಳಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಎಲ್ಲ ಜಾತಿಯ ಭೂಹೀನ ಬಡವರಿಗೆ ಹಂಚಬೇಕು” ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ಸಿಪಿಐ ರಾಜ್ಯಾಧ್ಯಕ್ಷ ಮಾತನಾಡಿ, “ಸಿಂಧನೂರು ಕಂದಾಯ ಗ್ರಾಮದ ಸರ್ಕಾರಿ ಸರ್ವೆ ನಂಬರ್ 419/ಪಿ1 32.11 ಎಕರೆ ಹಾಗೂ ಸುಲ್ತಾನಪೂರ ಸರ್ಕಾರಿ ಸರ್ವೆ ನಂಬರ್ 186, 29.31 ಎಕರೆ ಭೂಮಿಯನ್ನು ಕಳೆದ 43 ವರ್ಷಗಳಿಂದ ಕೋಟಿಗಟ್ಟಲೆ ಬೆಲೆಬಾಳುವ‌ 61 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿ‌, ಹಾಡುಹಗಲೇ ಸರ್ಕಾರಕ್ಕೆ ವಂಚನೆ ಮಾಡಿದ ಜವಳಗೇರಾ ನಾಡಗೌಡರ ಕುಟುಂಬದ ವಿರುದ್ಧ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಿಎಂಶ್ರೀ ಯೋಜನೆಯಡಿ 7 ಶಾಲೆಗಳ ಉನ್ನತೀಕರಣಕ್ಕೆ 3.71ಕೋಟಿ ಅನುದಾನ: ಸಂಸದ ಸಿದ್ದೇಶ್ವರ

“ಕಳೆದ 43 ವರ್ಷಗಳಿಂದ ಸಾಗುವಳಿ ಮಾಡಿದ ಭೂ ಕಂದಾಯವನ್ನು ಸರ್ಕಾರ ವಸೂಲು ಮಾಡಬೇಕು. ತಾಲೂಕಿನಲ್ಲಿ ಸರ್ಕಾರಿ ಭೂಮಿ ಅಕ್ರಮ ಸಾಗುವಳಿ ಮತ್ತು ಒತ್ತುವರಿ ಮಾಡಿದ ನಾಡಗೌಡರ ಕುಟುಂಬ ಸೇರಿದಂತೆ ಇತರೆ ಅಕ್ರಮ ಭೂಗಳ್ಳರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ, ಎಲ್ಲ ಜಾತಿಯ ಭೂಹೀನ ಬಡವರಿಗೆ ವಿತರಿಸಬೇಕು. ಅಕ್ರಮ-ಸಕ್ರಮದಡಿ ಫಾರಂ 1, 57, 94ಸಿ, 94ಸಿಸಿ ಅರ್ಜಿ ಹಾಕಿದ ಅರ್ಜಿದಾರರಿಗೆ ಸರ್ಕಾರಿ ಭೂಮಿ ಮತ್ತು ವಸತಿಯನ್ನು ನೀಡಬೇಕು” ಎಂದರು.

ಸಿಪಿಐಎಂಎಲ್ ರಾಜ್ಯ ಸದಸ್ಯ ಗಂಗಾಧರ್, ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಕರ್ನಾಟಕ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಸಂತೋಷ ಹಿರೆದಿನ್ನಿ, ಸಿಪಿಐ(ಎಂಎಲ್) ತಾಲ್ಲೂಕು ಮುಖಂಡ ಹನುಮಂತಪ್ಪ ಗೊಡ್ಯಾಳ, ಹನುಮಂತಪ್ಪ ಗೋಡ್ಯಾಳ, ಅಜೀಜ್ ಜಾಗೀರದಾರ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...