ರಾಯಚೂರು | ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದ ದೂರು

Date:

ರಾಯಚೂರು ಜಿಲ್ಲೆಯ ಹಲವು ತಾಲೂಕಿನ ಪಟ್ಟಣ ಪ್ರದೇಶಕ್ಕಿಂತಲೂ ಹಳ್ಳಿ ಹಳ್ಳಿಯಲ್ಲೂ ಕದ್ದು ಮುಚ್ಚಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಲಿಂಗಸೂಗೂರು ತಾಲೂಕಿನ ಹಲ್ಕಾವಟಗಿ ಗ್ರಾಮದ ಸುತ್ತ ಮುತ್ತ ಸಣ್ಣ ಪುಟ್ಟ ಹಳ್ಳಿಗಳಲ್ಲಿ ರಾಜಾರೋಷವಾಗಿ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಗ್ರಾಮೀಣ ಭಾಗದ ಕೆಲವು ಸಣ್ಣ ಪುಟ್ಟ ಅಂಗಡಿಗಳು, ಹೋಟೆಲ್‌ಗಳು, ಕೆಲವರ ಮನೆಗಳಲ್ಲೂ ಕೂಡ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಟ್ಟಿದೆ. ಈ ಅಕ್ರಮ ಮದ್ಯವನ್ನು ಬಾರ್‌ಗಳಿಗಿಂತಲೂ ಮೂರುಪಟ್ಟು ಹೆಚ್ಚು ದರದಲ್ಲಿ ಮಾರಾಟ ಮಾಡುತ್ತಾರೆ ಎಂದು ಗ್ರಾಮದ ಜನರು ದೂರು ನೀಡಿದ್ದಾರೆ.

ಮದ್ಯ ಮಾರಾಟಕ್ಕೆ ಕೊನೆಯಿಲ್ಲ. ಹಲವು ಬಾರಿ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿ ಗಮನಕ್ಕೆ ತಂದರು ಕೂಡ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241109 WA0021

ಹಲ್ಕಾವಟಗಿ ಗ್ರಾಮದ ನಿವಾಸಿ ಪರಶುರಾಮ ಮಾತನಾಡಿ, ಮದ್ಯ ಮಾರಾಟ ಹಗಲು ರಾತ್ರಿ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜನರು ಆರ್ಥಿಕ ಸಂಕಷ್ಟದಲ್ಲಿದ್ದರೂ ಗ್ರಾಮಿಣ ಭಾಗದ ಜನರು, ಯುವಕರು ಗ್ರಾಮದಲ್ಲಿಯೇ ಸುಲಭವಾಗಿ ಸಿಗುವ ಮದ್ಯ ಸೇವನೆಯಿಂದ ಚಟಕ್ಕೆ ಬಿದ್ದಿದ್ದಾರೆ ಎಂದು ಹೇಳಿದರು.

ಇದನ್ನು ಓದಿದ್ದಿರಾ? ರಾಯಚೂರು | ಹೃದಯಾಘಾತದಿಂದ ಕರ್ತವ್ಯ ನಿರತ ಪೌರ ಕಾರ್ಮಿಕ ಸಾವು

ಸಣ್ಣ ಪುಟ್ಟ ಅಂಗಡಿಗಳಲ್ಲಿ ಮಾರಾಟ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಿದೆ. ಕುಡಿಯುವ ನೀರಿನ ಪಕ್ಕದಲ್ಲಿ ರಾಶಿಯಾಗಿ ಮದ್ಯದ ಬಾಟಲಿ ,ಡಬ್ಬಿಗಳನ್ನು ಎಸೆದಿದ್ದಾರೆ ಎಂದರು.

ಈ ಕುರಿತು ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸೂಕ್ತವಾಗಿ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಹಲ್ಕಾವಟಗಿ ಗ್ರಾಮದ ಜನರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...