ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

Date:

ತುಂಗಭದ್ರಾ ಎಡದಂಡೆ ಕಾಲುವೆಯ 104 ಮೈಲ್ ಕೆಳಭಾಗದ ರೈತರಿಗೆ ನೀರು ಒದಗಿಸುವುದು, ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ ರೈತರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ರೈತರು ರಾಯಚೂರಿನ ಸಾತ್ ಮೈಲ್ ಹತ್ತಿರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಕುರ್ಡಿ ಮಾರ್ಗದಿಂದ ಸಂಚರಿಸಿದ ವಾಹನಗಳನ್ನು ದಿನ್ನಿಯಲ್ಲಿ ತಡೆದು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಲ್ಲುವಂತಾಯಿತು.

“ಕಾಲುವೆ ನೀರು ಹರಿಸಿದಾಗಿನಿಂದ ನಿಗದಿತ ಗೇಜ್‌ನಲ್ಲಿ ನೀರು ಪೂರೈಕೆಯಾಗಿದೆ. ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸುವಲ್ಲಿ ನೀರಾವರಿ ನಿಗಮದ ಅಧಿಕಾರಿಗಳು ನಿರ್ಲಕ್ಷ್ಯ ತೊರಿದ್ದಾರೆ” ಎಂದು ರೈತರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಂಗಭದ್ರಾ ಎಡದಂಡೆ ಕಾಲುವೆಯಿಂದ ಹರಿಸಿದ ನೀರನ್ನು ಅಕ್ರಮವಾಗಿ ಬಳಕೆ ಮಾಡುತ್ತಿರುವುದು ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಈ ಭಾಗದ ಜನಪ್ರತಿನಿಧಿಗಳಿಗೆ ಮಾಹಿತಿ ಇದ್ದರೂ ಕೂಡ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

2010ಕ್ಕಿಂತ ಮೊದಲು ಎಡದಂಡೆ ಕಾಲುವೆಗೆ 3300ರಿಂದ 3400 ಕ್ಯೂಸೆಕ್‌ ನೀರು ಬಿಡುಗಡೆ ಮಾಡುತ್ತಿದ್ದ‌ ವೇಳೆ ಮೈಲ್ ಸಂಖ್ಯೆ 104ಕ್ಕೆ 6 ಅಡಿ ನೀರು ಬರುತ್ತಿತ್ತು. ಆದರೆ, ಈಗ 4100 ಕ್ಯೂಸೆಕ್ ನೀರು ಬಿಟ್ಟರೂ ಮಾನ್ವಿ, ಸಿರವಾರ ಮತ್ತು ರಾಯಚೂರು ತಾಲೂಕಿಗೆ ನೀರು ತಲುಪುತ್ತಿಲ್ಲ. ಕಾರಣ,  ಮೇಲ್ಭಾಗದ ಕೆಲವು ರೈತರು ಅನಧಿಕೃತವಾಗಿ ನೀರಾವರಿ ಮಾಡಿಕೊಳ್ಳುತ್ತಿದ್ದಾರೆ” ಎಂದು ದೂರಿದರು.

2008ರಿಂದ 2012ರವರೆಗೆ ಕಾಲುವೆ ದುರಸ್ಥಿ ಮತ್ತು ಆಧುನೀಕರಣಕ್ಕೆ ಸರ್ಕಾರ ಸುಮಾರು 10 ಸಾವಿರ ಕೋಟಿ ಹಣ ಖರ್ಚು ಮಾಡಿದೆ. ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಸೆಪ್ಟಂಬರ್‌ 25ರಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಲಾ ಗಿದೆ. ಅದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಕಿಡಿಕಾರಿದರು.

“ಅಕ್ರಮವಾಗಿ ನೀರು ಬಳಕೆಗೆ ಸಂಬಂಧಿಸಿದಂತೆ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಇವರು ತಮ್ಮ ಭಾಗದಲ್ಲಿ ಕಾಲುವೆಯ ನೀರನ್ನು ಅಕ್ರಮವಾಗಿ ಬಳಸಲು ಅನುಕೂಲ ಮಾಡಿಕೊಟ್ಟಿದ್ದು, ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳುತ್ತಿರುವ ಎಲ್ಲ ರೈತರಿಂದ ಒಂದು ಬೆಳೆಗೆ 2000 ಚೀಲ ಭತ್ತವನ್ನು ಹಫ್ತಾ ಸಂಗ್ರಹಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ವೋಟ್ ಬ್ಯಾಂಕ್‌ಗಾಗಿ ತಮ್ಮ ಭಾಗದ ರೈತರಿಗೆ ಸಹಾಯ ಮಾಡುವ ನೆಪದಲ್ಲಿ ಭತ್ತದ ಹಫ್ತಾ ವಸೂಲಿ ಮಾಡಿ, ಹಣ ಗಳಿಸುವ ಉದ್ದೇಶದಿಂದ ಜನಪ್ರತಿನಿಗಳೇ ಅಕ್ರಮ ನೀರು ಬಳಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಹೀಗಾದರೆ, ಕಾಲುವೆಯ ಕೆಳಭಾಗದ ರೈತರ ಗತಿ ಏನು” ಎಂದು ಪ್ರಶ್ನೆ ಮಾಡಿದರು.

“ಅಕ್ರಮ ನೀರು ಬಳಕೆ ಕುರಿತು ಕೂಡಲೇ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು.  ಕಾಲುವೆಯ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಕೆಳಭಾಗದ ಮಾನ್ವಿ, ಸಿರವಾರ ಮತ್ತು ರಾಯಚೂರು ತಾಲೂಕುಗಳ ಎಲ್ಲ ರೈತರಿಗೂ ನಿಗದಿತ ಪ್ರಮಾಣದಲ್ಲಿ ಗೇಜ್ ನಿರ್ವಹಣೆ ಮಾಡಬೇಕು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್‌ ದಾಸರಿ

ಪ್ರತಿಭಟನೆಯ ನೇತೃತ್ವವನ್ನು 104 ಮೈಲ್ ಕೆಳಭಾಗದ ರೈತರ ಹೋರಾಟ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಉಪಾಧ್ಯಕ್ಷ ಕೆ.ಶರಣಪ್ಪ ಕಲ್ಮಲಾ, ಸಿದ್ದನಗೌಡ ನೆಲಹಾಳ, ಶಾಸಕ ಡಾ.ಶಿವರಾಜ ಪಾಟಿಲ್, ಕರ್ನಾಟಕ ರೈತ ಸಂಘದ ಆಧ್ಯಕ್ಷ ಪ್ರಭಾಕರ ಪಾಟಿಲ್ ಇಂಗಳಧಾಳ, ಅನಿತಾ ಬಸವರಾಜ, ಬಸವರಾಜ ಕಲ್ಲೂರು, ಬಿ ರಾಮು ಸೇರಿದಂತೆ ಹಲವು ಗ್ರಾಮಗಳ ಮುಖಂಡರುಗಳು, ಹಲವು ರೈತ ಸಂಘಟನೆ ಪದಾಧಿಕಾರಿಗಳು ಒಳಗೊಂಡಂತೆ ನೂರಾರು ಜನರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...