ರಾಯಚೂರು | ನೀರು ಉಳಿಸಲು ‘ಸೆಕ್ಷನ್ 144’ ಜಾರಿ

Date:

ತುಂಗಾಭದ್ರ ಜಲಾಶಯದಿಂದ ರಾಯಚೂರಿಗೆ ನೀರು ಹರಿಸಲು ರಾಯಚೂರು ಜಿಲ್ಲಾಡಳಿತವು ಕಾಲುವೆಗಳ ಆಸುಪಾಸಿನಲ್ಲಿ ಐಪಿಸಿ ಸೆಕ್ಷನ್ 144ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಜೂನ್ ಮೂರನೇ ವಾರ ಕಳೆದರೂ ರಾಜ್ಯದಲ್ಲಿ ಮಾನ್ಸೂನ್ ಮಳೆಯ ಸುಳಿವಿಲ್ಲ. ರಾಜ್ಯದ ನದಿಗಳು ಬತ್ತುತ್ತಿದ್ದು, ಹಲವೆಡೆ ನೀರಿನ ಅಭಾವ ಸೃಷ್ಠಿಯಾಗಿದೆ. ಜಲಾಶಯಗಳಲ್ಲಿ ಇರುವ ನೀರನ್ನು ಕುಡಿಯುವ ಉದ್ದೇಶಕ್ಕಷ್ಟೇ ಬಳಸಲು ನಿರ್ಧರಿದ್ದು, ಕೃಷಿಗೆ ನೀರಿಗೆ ಪೂರೈಕೆ ಇಲ್ಲವೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ, ರಾಯಚೂರಿನ ಕುಡಿಯುವ ನೀರು ಪೂರೈಸಲು ತುಂಗಭದ್ರ ಎಡದಂಡೆ ಕಾಲುವೆಗೆ (ಟಿಎಲ್‌ಬಿಸಿ) ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಕಾಲುವೆ ಉದ್ದಕ್ಕೂ ನೀರನ್ನು ಬೇರೆಡೆಗೆ ತಿರುಗಿಸದಂತೆ ತಡೆಯುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಷೇಧಾಜ್ಞೆಯು ಜೂನ್ 27ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಂಗಾಭದ್ರ ಅಣೆಕಟ್ಟೆಯಿಂದ ನೀರು ಪೂರೈಸುವುದರ ಜೊತೆಗೆ, ಕೃಷ್ಣಾ ನದಿಯಿಂದಲೂ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

“ತುಂಗಾಭದ್ರ ಅಣೆಕಟ್ಟಿನಿಂದ ಹರಿಸುವ ನೀರು ಟಿಎಲ್‌ಬಿಸಿ ಮೂಲಕ ಸುಮಾರು 130 ಮೈಲುಗಳವರೆಗೆ ಹರಿಯುತ್ತದೆ. ಮೊದಲು ಬಂಗಾರಪ್ಪ ಕೆರೆಯಲ್ಲಿರುವ ಬ್ಯಾಲೆನ್ಸಿಂಗ್ ಜಲಾಶಯದಲ್ಲಿ ನೀರು ಸಂಗ್ರಹಗೊಂಡು ನಂತರ ರಾಂಪುರ ಕೆರೆ ಜಲಾಶಯಕ್ಕೆ ಹರಿಸಲಾಗುವುದು. ನಂತರ ರಾಯಚೂರು ನಗರಕ್ಕೆ ಕುಡಿಯುವ ಉದ್ದೇಶಕ್ಕೆ ನೀರು ಪೂರೈಕೆ ಮಾಡಲಾಗುವುದು” ಎಂದು ಜಿಲ್ಲಾಡಳಿತ ಹೇಳಿದೆ.

“ಕಾಲುವೆಯುದ್ದಕ್ಕೂ ನಿಷೇಧಾಜ್ಞೆ ಜಾರಿಯಲ್ಲಿದೆ. ಗಸ್ತು ತಿರುಗಲು ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ. ಆದರೂ, ಜನರು ಗೇಜ್‌ಗಳನ್ನು ಬಳಸಿ ನೀರು ತಿರುಗಿಸುವ ಸಾಧ್ಯತೆಗಳಿವೆ” ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯ್ಕ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...