ರಾಯಚೂರು | ಸತತ ಮಳೆಯಿಂದ ಹೊಲಗಳಿಗೆ ನುಗ್ಗಿದ ನೀರು: ರೈತರ ಬೆಳೆ ನಷ್ಟ

Date:

ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ರಸ್ತೆ, ಸೇತುವೆಗಳು ಹಾಗೂ ಹೊಲಗಳಲ್ಲಿ ನೀರು ನುಗ್ಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ.

ರಾಯಚೂರಿನಲ್ಲಿ 15.7 ಮಿಮೀ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು. ಪಾದಚಾರಿಗಳ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ರಾಯಚೂರು ತಾಲೂಕಿನಲ್ಲಿ ಕಳೆದ ರಾತ್ರಿ ಭಾರೀ ಮಳೆಯಾಗಿದ್ದು, ಚಂದ್ರಬಂಡಾ ಹೋಬಳಿಯಲ್ಲಿ 13.8 ಮಿ.ಮೀ. ಮಳೆಯಾಗಿದೆ. ರಾಯಚೂರು ಚಂದ್ರಬಂಡಾ ಮಾರ್ಗ ಮದ್ಯ ಕಡಗಂದೊಡ್ಡಿ ಗ್ರಾಮದ ಸಮೀಪದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಸೂಗುರು ಹೋಬಳಿಯಲ್ಲಿ 22.5 ಮಿಮೀ ಮಳೆಯಾಗಿದ್ದು, ಕೂಡ್ಲೂರು ಗ್ರಾಮಕ್ಕೆ ತೆರಳುವ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಕಷ್ಟ ಅನುಭವಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಜಿಂದಾಲ್‌ಗೆ ಭೂಮಿ ಮಾರಾಟ: ರಾಜ್ಯ ಸರ್ಕಾರದಿಂದ ದ್ರೋಹ : ರಾಘವೇಂದ್ರ ಕುಷ್ಟಗಿ

ಗಿಲ್ಲೆಸೂಗುರು ಹೋಬಳಿಯಲ್ಲಿ 19.9 ಮಿಮೀ, ಕಲ್ಮಲಾ ಹೋಬಳಿಯಲ್ಲಿ 21.8 ಮಿಮೀ, ಯರಗೇರಾ ಹೋಬಳಿಯಲ್ಲಿ 21.8 ಮಿಮೀ, ದೇವದುರ್ಗ ತಾಲೂಕಿನಲ್ಲಿ 38.9 ಮಿಮೀ ಮಳೆಯಾಗಿದೆ. ಜಾಲಹಳ್ಳಿಯ ರಾಜ್ಯ ಹೆದ್ದಾರಿಯಲ್ಲಿ ನೀರು ಹರಿದು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಜಾಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆ ಸಮೀಪದಲ್ಲಿ ಸೇತುವೆ ಕೊಚ್ಚಿ ಹೋಗಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡು ತೊಂದರೆಗೆ ಸಿಲುಕುವಂತಾಯಿತು.

ಲಿಂಗಸುಗುರು ತಾಲೂಕಿನಲ್ಲಿ 5.3 ಮಿಮೀ ಮಳೆಯಾಗಿದ್ದರೆ, ಮಾನ್ವಿ ತಾಲೂಕಿನಲ್ಲಿ 13.9 ಮಿಮೀ ಮಳೆಯಾಗಿದೆ. ರಾಯಚೂರು ತಾಲೂಕಿನಲ್ಲಿ 19.4 ಮಿಮೀ ಮಳೆಯಾಗಿದೆ. ಸಿಂಧನೂರಿನಲ್ಲಿ 1.7 ಮಿಮೀ, ಮಸ್ಕಿ ತಾಲೂಕಿನಲ್ಲಿ 2.4 ಮಿಮೀ ಹಾಗೂ ಸಿರವಾರ ತಾಲೂಕಿನಲ್ಲಿ 21.5 ಮಿಮೀ ಮಳೆಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...