ರಾಯಚೂರು | ಬಾಲ್ಯ ವಿವಾಹ ಹೆಚ್ಚಳ; ಸುಮೊಟೊ ಪ್ರಕರಣ ದಾಖಲಿಸಲು ಡಿಸಿ ಸೂಚನೆ

Date:

ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ತಾಲೂಕು ಮತ್ತ ಗ್ರಾಮ ಮಟ್ಟದ ಸಮಿತಿಗಳಿದ್ದರೂ ಕೂಡ ದೂರು ದಾಖಲಾಗುತ್ತಿಲ್ಲ. ಸಂಬಂಧಪಟ್ಟ ಇಲಾಖೆಗಳು ಸುಮೊಟೊ ಪ್ರಕರಣ ದಾಖಲಿಸಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿವೆ. ಈ ಬಗ್ಗೆ ಮಾಹಿತಿ ಕೊರತೆ ಜಾಗೃತಿ ಮೂಡಿಸುವ ಕೆಲಸ ಸಮರ್ಪಕವಾಗಿ ಆಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏಪ್ರಿಲ್‌ನಿಂದ ಜನವರಿವರೆಗೆ 58 ಪ್ರಕರಣಗಳು ನಡೆದಿದ್ದು, 50 ಪ್ರಕರಣಗಳನ್ನು ತಡೆಯಲಾಗಿದೆ. ಉಳಿದ ಪ್ರಕರಣಗಳನ್ನು ತಡೆಯಲಾಗಿಲ್ಲ. ಗ್ರಾಮಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿವೆ. ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಮಿಟಿ ಇದೆ. ಆದರೂ ಬಾಲ್ಯ ವಿವಾಹಗಳು ನಡೆದಿವೆ. ಬೆಳಕಿಗೆ ಬಂದ ಪ್ರಕರಣಗಳನ್ನು ಮಾತ್ರ ತಡೆಯಲು ಸಾಧ್ಯವಾಗಿದೆ. ಬೆಳಕಿಗೆ ಬಾರದೇ ಇರುವ ಪ್ರಕರಣಗಳ ತಡೆಗೆ ಜಾಗೃತಿ ಮೂಡಿಸಬೇಕು, ಮಾಹಿತಿ ಕೊಡಬೇಕು” ಎಂದು ತಿಳಿಸಿದರು.

“ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಕಮಿಟಿಯಲ್ಲಿರುವ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು. ಮುಖ್ಯವಾಗಿ ದೇವದುರ್ಗ ಹಾಗೂ ಲಿಂಗಸಗೂರು ತಾಲೂಕಿನಲ್ಲಿ ಪ್ರಕರಣಗಳು ನಡೆಯುತ್ತಿವೆ. ಕಮಿಟಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 2856 ಅಂಗನವಾಡಿಗಳಿವೆ. 22782 ಮಂದಿ ಗರ್ಭಿಣಿಯರು, 27920 ಮಂದಿ ಬಾಣಂತಿಯರಿದ್ದಾರೆ. ಅಂಗನವಾಡಿಗಳಲ್ಲಿ ಒಟ್ಟು 2,29,279 ಮಂದಿ ಮಕ್ಕಳಿದ್ದಾರೆ. 1,96,137 ಮಂದಿ ಸಾಮಾನ್ಯ ಮಕ್ಕಳಿದ್ದಾರೆ. 2856 ಅಂಗನವಾಡಿಗಳ ಪೈಕಿ 220 ಕಟ್ಟಡಗಳು ನಿರ್ಮಾಣದ ಹಂತದಲ್ಲಿವೆ. ಇನ್ನೂ 700 ಅಂಗನವಾಡಿಗಳಿಗೆ ಕಟ್ಟಡದ ಅವಶ್ಯಕತೆ ಇದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್‌ಕುಮಾರ ಮಾಹಿತಿ ನೀಡಿದರು.

“ಜಿಲ್ಲೆಯಲ್ಲಿ 2856 ಅಂಗನವಾಡಿಗಳಲ್ಲಿ 1160 ಅಂಗನವಾಡಿಗಳಿಗೆ ಮಾತ್ರ ಕುಡಿಯುವ ನೀರಿನ ವ್ಯವಸ್ಥೆ ಇದೆ. ಉಳಿದ ಅಂಗನವಾಡಿಗಳಿಗೆ ಬೇರೆ ಕಡೆಯಿಂದ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಾಕಷ್ಟು ಅಂಗನವಾಡಿಗಳಿಗೆ ನೀರಿನ ಕೊರತೆ ಇದ್ದು, ಜೆಜೆಎಂ ಮೂಲಕ ಸಂಪರ್ಕ ಒದಗಿಸಿಕೊಡಲಾಗುತ್ತಿದೆ. ಜಿಲ್ಲೆಯಲ್ಲಿ 750 ಅಂಗನವಾಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಪ್ರತಿ ಗ್ರಾ.ಪಂ.ಗೆ ₹20,000 ಅನುದಾನ ಬಿಡುಗಡೆ ಮಾಡಲಾಗಿದೆ” ಎಂದು ತಿಳಿಸಿದರು.

16 ಶಿಶು ಪಾಲನಾ ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ರಾಯಚೂರಿನಲ್ಲಿ 75, ಲಿಂಗಸುಗೂರಿನಲ್ಲಿ 50 ಹಾಗೂ ದೇವದುರ್ಗದಲ್ಲಿ 75 ಮಕ್ಕಳು ದಾಖಲಾಗಿದ್ದಾರೆ. 2017-18ನೇ ಸಾಲಿನ ಅನುದಾನ ಮಾತ್ರ ಬಿಡುಗಡೆಯಾಗಿದೆ. ಇನ್ನೂ 3 ವರ್ಷದ ಅನುದಾನ ಬಿಡುಗಡೆಯಾಗಬೇಕಿದೆ” ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ರಮಾಕುಮಾರಿ ರಾಜಕಾರಣಕ್ಕೆ ಬರಬೇಕು: ಮಲ್ಲಿಕಾ ಬಸವರಾಜು

ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಆರೋಗ್ಯ ಇಲಾಖೆಯ ಆರ್‌ಸಿಎಚ್ ಅಧಿಕಾರಿ ನಂದಿತಾ, ಎಲ್ಲ ತಾಲೂಕುಗಳ ಸಿಡಿಪಿಒ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹಮದ್, ಶಿಕ್ಷಣಾಧಿಕಾರಿ ಆರ್ ಇಂದಿರಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...