ರಾಯಚೂರು | ನರೇಗಾ ಕೂಲಿ ಕಾರ್ಮಿಕರ ಸಂಘಟನೆಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

Date:

  • ನರೇಗಾ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ
  • ದೆಹಲಿಯ ಜಂತರ್ ಮಂತರ್‌ನಲ್ಲಿ ಫೆ.13ರಿಂದ ನಡೆಯುತ್ತಿರುವ ಹೋರಾಟ

ನರೇಗಾ ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರ ನರೇಗಾ ಯೋಜನೆಗೆ 2023–24ನೇ ಸಾಲಿನ ಬಜೆಟ್ ನಲ್ಲಿ ಕೇವಲ 60,000 ಕೋಟಿ ಅನುದಾನ ಮೀಸಲಿಟ್ಟಿದ್ದು, ಇದನ್ನು 150,000 ಕೋಟಿಗೆ ಹೆಚ್ಚಿಸಬೇಕು ಹಾಗೂ ಗ್ರಾಕೂಸ್ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ” ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ಮತ್ತು ಕಾರ್ಮಿಕ ಹಕ್ಕುಗಳ ಉಲ್ಲಂಘನೆ ಮಾಡುತ್ತಿರುವುದನ್ನು ವಿರೋಧಿಸಿ ರಾಯಚೂರಿನ ಗ್ರಾಮೀಣ ಕೂಲಿಕಾರ್ಮಿಕ ಸಂಘಟನೆ (ಗ್ರಾಕೂಸ್) ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನ್ ಉದ್ಯಾನದ ಬಳಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಕೇಂದ್ರ ಸರ್ಕಾರದ 2023-24 ಸಾಲಿನ ಬಜೆಟ್‌ನಲ್ಲಿ ನರೇಗಾ ಕಾಯ್ದೆ (ಯೋಜನೆ)ಗೆ ಕೇವಲ 60,000 ಕೋಟಿ ಹಣ ಮೀಸಲಿಟ್ಟಿದೆ. ಇದರಿಂದ ಕೂಲಿಕಾರ್ಮಿಕರಿಗೆ ಕೇವಲ 20ರಿಂದ 30 ದಿನಗಳ ಕೆಲಸ ಮಾತ್ರ ಸಿಗುತ್ತದೆ. ಇದನ್ನು 150,000 ಕೋಟಿಗೆ ಹೆಚ್ಚಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2022-23ನೇ ಸಾಲಿನಲ್ಲಿ ಕೂಲಿ ಕಾರ್ಮಿಕರಿಗೆ ಬರಬೇಕಾಗಿದ್ದ ಕೂಲಿ ಹಣವು 2-3 ತಿಂಗಳು ವಿಳಂಬವಾಗಿ ನೀಡಿದ್ದಾರೆ. ಆದರೆ, ಪ್ರಸಕ್ತ ವರ್ಷದಲ್ಲಿ ಕೂಲಿ ಹಣವನ್ನು 7 ದಿನಗಳ ಒಳಗಡೆ ಕೊಡಬೇಕು, ಇಲ್ಲವೆಂದರೆ ಕೂಲಿ ಹಣದ ಜೊತೆ ನಷ್ಟ ಪರಿಹಾರ ಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? : ಬೆಳಗಾವಿ | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪ್ರತಿಭಟನೆ

“ನರೇಗಾ ಯೋಜನೆಯು ಕೋವಿಡ್ ಸಮಯದಲ್ಲಿ ಹಾಗೂ ನಂತರದ ದಿನಗಳಲ್ಲಿ ಹಳ್ಳಿ ಜನರಿಗೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದೆ. ಆದ್ದರಿಂದ ಪ್ರತಿ ಕುಟುಂಬಕ್ಕೂ ವರ್ಷದಲ್ಲಿ 200 ದಿನಗಳ ಕೆಲಸ ನೀಡಬೇಕು” ಎಂದು ಮನವಿ ಮಾಡಿದರು.

“ನರೇಗಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ದೆಹಲಿಯ ಜಂತರ್ ಮಂತರ್ ನಲ್ಲಿ ಫೆ.13ರಿಂದ ನರೇಗಾ ಸಂಘರ್ಷ ಮೋರ್ಚ (ದೇಶದ ಎಲ್ಲಾ ರಾಜ್ಯಗಳ ನರೇಗಾ ಕಾರ್ಮಿಕರ ಒಕ್ಕೂಟ) ಧರಣಿ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರವು ಸ್ಪಂದಿಸುತ್ತಿಲ್ಲ” ಎಂದು ಕಿಡಿ ಕಾರಿದರು.

ಧರಣಿಯಲ್ಲಿ ಹೋರಾಟಗಾರ್ತಿ ಮಾರೆಮ್ಮ, ಗುರುರಾಜ, ಗೋವಿಂದ, ಕೊಂಡಯ್ಯ, ವಿದ್ಯಾ ಪಾಟೀಲ, ಮಂದಕಲ್‌, ಬಸವರಾಜ, ಶಿವರಾಮ ರೆಡ್ಡಿ, ಉಮೇಶ, ಆಂಜಿನೇಯ ಸೇರಿದಂತೆ ಹಲವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...