ರಾಯಚೂರು | ಸರ್ಕಾರಿ ಶಾಲೆಗಳ ಗುಣಮಟ್ಟ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಅನಿರ್ದಿಷ್ಟಾವಧಿ ಧರಣಿ

Date:

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜನವರಿ 25ರಂದು ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಂಚಾಲಕಿ ಮೋಕ್ಷಮ್ಮ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಿಕೊಳ್ಳದೆ ಸರ್ಕಾರ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಶಿಕ್ಷಕರ ನೇಮಕ ಮಾಡಲು ನಿರಂತರವಾಗಿ ಹೋರಾಟ ಮಾಡಿದ್ದರಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಲ್ಲಾ ವಿಷಯವಾರು ಶಿಕ್ಷಕರನ್ನು ನೇಮಿಸಿ ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ದೂರಿದರು.

“ಸರ್ಕಾರಿ ಶಾಲೆಗಳಲ್ಲಿ ಬಹುತೇಕ ಕಡೆ ಶೇ.75ರಷ್ಟು ಅತಿಥಿ ಶಿಕ್ಷಕರಿದ್ದು, ಉಳಿದಂತೆ ಶೇ 25ರಷ್ಟು ಮಾತ್ರ ಕಾಯಂ ಶಿಕ್ಷಕರಿದ್ದಾರೆ. ಹೀಗಿರುವಾಗ ಗುಣಮಟ್ಟದ ಶಿಕ್ಷಣ ದೊರೆಯಲು ಎಲ್ಲಿಂದ ಸಾಧ್ಯ. ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಸೌಲಭ್ಯ ಒದಗಿಸಿಕೊಡುವಲ್ಲಿ ಸರ್ಕಾ ಎಡವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಹೆಚ್ಚಿದೆ, ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ಅನುದಾನ ನೀಡುತ್ತಿದ್ದರೂ ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ. ಸಾಕ್ಷರತೆ ಮಾದರಿ ಅಭಿಯಾನವನ್ನು ನಡೆಸಲು ಸರ್ಕಾರ ಮುಂದಾಗಬೇಕಿದೆ” ಎಂದರು.

ವಿದ್ಯಾ ಪಾಟೀಲ್ ಮಾತನಾಡಿ, “ದೇವದಾಸಿ ಮಹಿಳೆಯರಿಗೆ ಪಿಂಚಣಿ ಸೌಲಭ್ಯವಿಲ್ಲದೆ, ಅವರ ಮಕ್ಕಳ ಶಿಕ್ಷಣ, ಮದುವೆ ಸೇರಿದಂತೆ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರ ಮಕ್ಕಳ ವಿದ್ಯಾಭ್ಯಾಕ್ಕೆ ಅನುದಾನ ಮೀಸಲಿಟ್ಟಿದೆ. ಆದರೆ ಬಳಕೆಯಾಗುತ್ತಿಲ್ಲ” ಎಂದು ಆರೋಪಿಸಿದರು.

“ದೇವದಾಸಿ ಮಹಿಳೆಯರ ಕುರಿತು ಮರು ಸರ್ವೆ ನಡೆಸಿ ಬಿಟ್ಟುಹೋದ ದೇವದಾಸಿಯರ ಹೆಸರು ಸೇರ್ಪಡೆ ಮಾಡಬೇಕು. ಪಿಂಚಣಿ, ಸೇರಿದಂತೆ ಸೌಲಭ್ಯ ಒದಗಿಸಿಕೊಡಬೇಕು. ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಘಟಕಗಳನ್ನು ನಿರ್ಮಾಣ ಮಾಡಿದೆ. ಆದರೆ ರಿಪೇರಿಯಿಂದಾಗಿ ಇಂದು ಬಂದ್ ಆಗಿದ್ದು, ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಹೋರಾಟ ನಡೆಸಿ ಸರ್ಕಾರದ ಗಮನಕ್ಕೆ ತಂದರೂ ದುರಸ್ತಿ ಮಾಡಿಸುವಲ್ಲಿ ನಿರ್ಲಕ್ಷ್ಯ ತಾಳಿದೆ” ಎಂದು ಆಪಾದಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜ. 30ರಂದು ದೇಶಕ್ಕಾಗಿ ಮಡಿದ ಹುತಾತ್ಮರ ನೆನಪಿನ ದಿನಾಚರಣೆ

“ರಾಜ್ಯದಲ್ಲಿ ಗರ್ಭಿಣಿ ಮಹಿಳೆಯರು ಮತ್ತು ಶಿಶುಗಳು ಸಾವನ್ನಪ್ಪುತ್ತಿರುವುದು ಖಂಡನೀಯ. ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಪಾರದರ್ಶಕ ಗುಣಮಟ್ಟದ ಔಷಧಿಗಳನ್ನು ಖರೀದಿಸುವ ನೀತಿ ಜಾರಿಗೊಳಿಸಬೇಕು. ಸರ್ಕಾರದ ವಿರುದ್ಧ ಹೋರಾಟ ನಡೆಸಿದರೂ ಕೇವಲ ಭರವಸೆ ನೀಡಿ ನುಣಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜನವರಿ 25ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, 20,000ಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾರೆಮ್ಮ, ರಾಧ, ಹುಚ್ಚಮ್ಮ, ವಿರೂಪಮ್ಮ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...