ರಾಯಚೂರು| ಕರ್ನಲ್ ಸೋಫಿಯಾ‌ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ; ಸಚಿವ ಸ್ಥಾನದಿಂದ ವಜಾಗೊಳಿಸಲು ಒತ್ತಾಯ

Date:

ಭಾರತೀಯ ಸೇನೆಯ ಕರ್ನಲ್ ಸೋಫಿಯಾ‌ ಖುರೇಷಿ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಹೇಳಿಕೆ ನೀಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ‌ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರಿಗೆ ದೂರು ಸಲ್ಲಿಸಿದರು.

ಕರ್ನಲ್‌ ಸೋಫಿಯಾ ಅವರನ್ನು ಉಗ್ರರ‌ ಸಹೋದರಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ಭಾಷಣ ಮಾಡಿದ್ದು ಖಂಡನೀಯ. ಆ ಮೂಲಕ ದೇಶದ ಸೈನಿಕರಿಗೆ ಧಕ್ಕೆ ತಂದಿದ್ದಾರೆ ಕೂಡಲೇ ಅವರನ್ನು ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಸಚಿವ ಕುನ್ವರ್ ವಿಜಯ್ ಶಾ‌ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು ಕರ್ನಲ್ ಸೋಫಿಯಾ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು |ಮನೆಯ ಮುಂದೆ ಕಟ್ಟಿದ್ದ ಎತ್ತು ; ಸಿಡಿಲು ಬಡಿದು ಸಾವು

ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ ಫಯಾಜುದ್ದೀನ್ ನೇತೃತ್ವದಲ್ಲಿ ‌ಸಮಾಜದ ಮುಖಂಡರು, ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ‌ಎಸ್ಪಿ‌ ಮೂಲಕ ರಾಷ್ಟ್ರಪತಿಗೆ ,ಪ್ರಧಾನಿ ಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...