ರಾಯಚೂರು | ನಿಗಮ-ಮಂಡಳಿ ನೇಮಕಾತಿಯಲ್ಲಿ ಜಿಲ್ಲೆಗೆ ಅನ್ಯಾಯ

Date:

ರಾಜ್ಯದಲ್ಲಿ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆಗೆ ತೀವ್ರ ಅನ್ಯಾಯ ನಡೆದಿದೆ ಎಂಬ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಪಕ್ಷದ ಒಳಬಣಗಳ ಮಧ್ಯೆ ನಡೆಯುತ್ತಿರುವ ತಾರತಮ್ಯ ಹಾಗೂ ಒಗ್ಗಟ್ಟಿನ ಕೊರತೆಯಿಂದಾಗಿ ಜಿಲ್ಲೆಗೆ ನಿಗಮ-ಮಂಡಳಿ ಹಂಚಿಕೆ ಕೈ ತಪ್ಪಿದೆ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಜಿಲ್ಲೆಯ ಮುಖಂಡರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲೆಯ ಕಾಂಗ್ರೆಸ್ ನಾಯಕರ ನಡುವೆ ಬಣಬಳಗದ ಪೈಪೋಟಿ ಹೆಚ್ಚಾಗಿದ್ದು, ಇದರ ಪರಿಣಾಮವಾಗಿ ರಾಜ್ಯ ಮಟ್ಟದಲ್ಲಿ ಪ್ರಾಬಲ್ಯ ಸಾಧಿಸಲು ವಿಫಲರಾಗಿದ್ದಾರೆ ಎಂಬ ಟೀಕೆ ಕೇಳಿ ಬರುತ್ತಿದೆ. ಜನತೆಯ ಹಿತಾಸಕ್ತಿಯನ್ನು ಕಡೆಗಣಿಸಿ ನಾಯಕರು ಬಣ ರಾಜಕಾರಣದಲ್ಲಿ ತೊಡಗಿರುವುದರಿಂದ ಜಿಲ್ಲೆಯ ಹಕ್ಕು ಕಸಿದುಕೊಳ್ಳಲಾಗಿದೆ. ʼನಾ ಮುಂದೆ ನೀ ಮುಂದೆʼ ಎನ್ನುವ ಕಾರಣದಿಂದ ಹಲವು ಬಾರಿ ಇಂತಹ ಅವಕಾಶಗಳು ಕೈತಪ್ಪುತ್ತಿವೆʼ ಎಂದು ಕಾರ್ಯಕರ್ತರು ಮಾತಾಡಿಕೊಳ್ಳುತ್ತಿದ್ದಾರೆ.

ಪಕ್ಷ ಸಂಘಟಕರು, ಹಳೆ ನಾಯಕರಿಗೆ ನ್ಯಾಯ ಸಿಗದೆ, ನೇಮಕಾತಿಯಲ್ಲಿ ರಾಯಚೂರು ಜಿಲ್ಲೆಯ ಪ್ರತಿನಿಧಿತ್ವ ನಸುಕಿನ ಕನಸಾಗಿಬಿಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಪಕ್ಷದ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಭಿವೃದ್ದಿಯ ದೃಷ್ಟಿಯಿಂದ ರಾಯಚೂರು ಜಿಲ್ಲೆಯ ಬಗ್ಗೆ ಸರ್ಕಾರ ಪದೇ ಪದೇ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದೆ. ಈ ವರೆಗೂ ನಮ್ಮ ಜಿಲ್ಲೆಗೆ ನ್ಯಾಯ ಸಿಗದೇ ಇರುವುದು ನೋವಿನ ಸಂಗತಿ. ಕೆಲವು ನಿಗಮಗಳಲ್ಲಿ ಸಾಮಾನ್ಯ ಸದಸ್ಯರ ನೇಮಕಾತಿ ಬಿಟ್ಟರೆ ಯಾವುದೇ ಅಧ್ಯಕ್ಷ ಸ್ಥಾನ ನೀಡಿಲ್ಲ. ನೆರೆಯ ಕಲಬುರಗಿಗೆ ಎರಡು ಮೂರು ಅಧ್ಯಕ್ಷ ಸ್ಥಾನ ನೀಡಿರುವಾಗ ರಾಯಚೂರು ಜಿಲ್ಲೆಗೆ ಒಬ್ಬರನ್ನೂ ನೀಡದೇ ಇರುವುದು ಅನ್ಯಾಯʼ ಎಂದು ಹೆಸರು ಹೇಳಲು ಇಚ್ಚಿಸದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ʼಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವವನ್ನು ಸರ್ಕಾರ ಪಾಲಿಸುತ್ತಿದ್ದರೆ, ಕೆಲ ಹಿಂದುಳಿದ ಜಿಲ್ಲೆಗಳನ್ನು ಹೀಗಾಗಿ ಕಡೆಗಣಿಸುವುದು ಹೇಗೆ ನ್ಯಾಯ? ಅನ್ಯಾಯದ ವಿರುದ್ಧ ಧ್ವನಿ ಎತ್ತದೇ ಇರುವುದು, ಅನ್ಯಾಯಕ್ಕೆ ಬೆಂಬಲ ನೀಡಿದಂತಾಗಿದೆ. ಆದ್ದರಿಂದ ನಾವು ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆʼ ಎಂದು ಸ್ಪಷ್ಟಪಡಿಸಿದರು.

ರಾಯಚೂರಿನ ಕಾಂಗ್ರೆಸ್ ಕಾರ್ಯಕರ್ತರು ಸದಾ ಪಕ್ಷದ ಪರವಾಗಿ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಇತ್ತೀಚಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಅಭ್ಯರ್ಥಿಗಳಿಗೆ ಗೆಲುವು ತಂದುಕೊಡಲು ಶ್ರಮಿಸಿದ್ದಾರೆ. ಹೀಗಿದ್ದರೂ ಅಂತಹ ಕಾರ್ಯಕರ್ತರನ್ನು ಪರಿಗಣಿಸದೇ ಇರುವುದು ಖಂಡನೀಯʼ ಎಂದು ಅಸಮಧಾನ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯಲ್ಲಿ ಮೂರು ದಿನ ಮಳೆ ಸಾಧ್ಯತೆ : ಜನಜೀವನ ಅಸ್ತವ್ಯಸ್ತ

ನಮ್ಮದೇ ಸರ್ಕಾರದಿಂದ ನಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆ ತಾರತಮ್ಯ ನೀತಿ ಅನುಸರಿಸುವುದು ಸಮಂಜಸವೇ? ಸರ್ಕಾರವು ತಕ್ಷಣವೇ ಈ ವಿಚಾರದಲ್ಲಿ ಗಮನ ಹರಿಸಿ, ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್‌ ಮುಖಂಡರು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...