ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಆರ್ಎಸ್ಎಸ್, ಪ್ರಧಾನಿ ಮೋದಿ ಹಾಗೂ ವಿ.ಡಿ.ಸಾವರ್ಕರ್ ವಿರುದ್ಧ ಅವಮಾನಿಸುವ ರೀತಿಯಲ್ಲಿ ಪೋಸ್ಟ್ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವ ವ್ಯಕ್ತಿಯ ವಿರುದ್ಧ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಫೈಸಲ್ ಕೆಎಸ್ಟಿ’ ಎಂಬ ಹೆಸರಿನ ಫೇಸ್ಬುಕ್ ಖಾತೆ ಹೊಂದಿರುವ ಲಿಂಗಸಗೂರು ಪಟ್ಟಣದ ಅಮೀರ್ ಹುಸೇನ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.
ಫೇಸ್ಬುಕ್ ನಲ್ಲಿ ‘RSS hindu agatawadi sangatana’, ‘RSS shreeram sena hindu agatawadi sangatana’ ಹಾಗೂ ಪ್ರಧಾನಿ ಮೋದಿ ಅವರಿಗೆ ʼgaddar gaddar hi baat kar hai’ ಸೇರಿದಂತೆ ಇತರೆ ಅವಾಚ್ಯ ಶಬ್ದ ಬಳಸಿ ನಿಂದನಾತ್ಮಕ ರೀತಿಯಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್ಗಳನ್ನು ಹಂಚಿಕೊಂಡಿರುವುದಾಗಿ ಪ್ರಕರಣದಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಪದಗಳನ್ನು ಬಳಕೆ ಮಾಡಲಾಗಿದೆ. ಅದರ ಮುಂದಿನ ದಿನವಾದ ಅಕ್ಟೋಬರ್ 6 ರಂದು ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಕುರಿತು ಅಪಮಾನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಎಂದು ದೂರಿದ್ದಾರೆ.
ಹೀಗೆ ಫೇಸ್ಬುಕ್ನಲ್ಲಿ ಇಬ್ಬರು ಆರ್ಎಸ್ಎಸ್ ಗಣವೇಶಧಾರಿಗಳು ಪರಸ್ಪರ ಚುಂಬಿಸುವ ರೀತಿಯಲ್ಲಿ ಫೋಟೊ ಎಡಿಟ್ ಮಾಡಿ ಶೇರ್ ಮಾಡಿ ಧಾರ್ಮಿಕ ಭಾವನೆಗೆ ಹಾನಿ ಉಂಟುಮಾಡುವ ರೀತಿಯಲ್ಲಿ ಹಂಚಿಕೊಂಡಿದ್ದಾನೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು
ಸಮಾಜದಲ್ಲಿ ಕೋಮುವಾದ ಮತ್ತು ಶಾಂತಿ ಕದಡುವ ಉದ್ದೇಶದಿಂದ ಹಿಂದೂ ಆತಂಕವಾದಿ ಎಂಬ ವಾಕ್ಯ ಬಳಸಿ ಧರ್ಮದ ಅವಹೇಳನ ಮಾಡಿದ್ದಲ್ಲದೆ, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಹಣಮಂತ ವಾಸುನಾಯಕ ಎಂಬುವವರು ದೂರು ನೀಡಿದ್ದಾರೆ. ದೂರಿನ್ವಯ ಲಿಂಗಸೂಗೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





