ರಾಯಚೂರು | ಧೂಳಿನ ಸಮಸ್ಯೆ ನಿವಾರಣೆಗೆ ಜಯ ಕರವೇ ಮನವಿ

Date:

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಧೂಳಿನ ಸಮಸ್ಯೆ‌ ಅತಿಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು.

“ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಿಂದ ಕೋನಾಪುರಪೇಟೆ ಮುಖ್ಯರಸ್ತೆಯ ಚರಂಡಿ ಕಾಮಗಾರಿ ನಡೆದಿದೆ. ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ವಿಪರೀತ ಮಣ್ಣು ತುಂಬಿಕೊಂಡಿದ್ದು, ಎಲ್ಲೆಡೆ ಹರಡಿಕೊಂಡಿದೆ” ಎಂದು‌ ದೂರಿದರು.

“ಮರಳು ಸಾಗಿಸುವ ಭಾರೀ ವಾಹನಗಳು, ಲಘು ವಾಹನಗಳು, ಟ್ರ್ಯಾಕ್ಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿರುವುದರಿಂದ ಧೂಳಿನ ಕಣಗಳು ವಾಹನ‌ ಸವಾರರ ಕಣ್ಣಲ್ಲಿ ಹೋಗಿ ಅಪಘಾತಕ್ಕೆ ಕಾರಣವಾಗುತ್ತಿದೆ. ಧೂಳಿನ ಸಮಸ್ಯೆಯಿಂದ ಜನರಿಗೆ ಉಸಿರಾಟ, ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಆಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವಾಸಿ ಮಂದಿರದಿಂದ ಕೋನಾಪುರಪೇಟೆ ಹಾಗೂ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆವರೆಗೆ ವಿದ್ಯುತ್ ಕಂಬಗಳಿಗೆ ದೀಪಗಳನ್ನು ಅಳವಡಿಸಬೇಕು. ಮುಖ್ಯರಸ್ತೆಗಳಲ್ಲಿನ ಧೂಳಿನ ಸಮಸ್ಯೆಯನ್ನು ನಿವಾರಿಸಬೇಕು” ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಚೆನ್ನಿ, ನೀವೆಷ್ಟು ಗೋಶಾಲೆಗಳಿಗೆ ಅನುದಾನ ನೀಡಿದ್ದೀರೆಂದು ಗಂಡಸ್ತನದಿಂದ ಹೇಳಿ: ಎಚ್‌ ಸಿ ಯೋಗೇಶ್

ಸಂಘಟನೆಯ ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಪದಾಧಿಕಾರಿಗಳಾದ ಶರಣಯ್ಯಸ್ವಾಮಿ, ನಾಗರಾಜ ಶೆಟ್ಟಿ, ಶೇಖ್ ಮುಸ್ತಫಾ, ಗುರುರಾಜ ಕುಲಕರ್ಣಿ, ಈರೇಶ ಮಳ್ಳಿ, ಮಲ್ಲನಗೌಡ ಬೈಲಮಾರ್ಚೆಡ್, ಬಸವರಾಜ ಮೈಲಾರಿ, ಬಸವರಾಜ ಮೇಟಿ, ಜಲಾಲ್ ಶಾಸ್ತ್ರಿ ಕ್ಯಾಂಪ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...