ರಾಯಚೂರು | ಶಾಸಕ ಬಸನಗೌಡ ದದ್ದಲ್ ರಾಜೀನಾಮೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಆಗ್ರಹ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ಹಣ ವರ್ಗಾವಣೆ ಪ್ರಕರಣದಲ್ಲಿ ಅಭಿವೃದ್ದಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಕೂಡಾ ಭಾಗಿಯಾಗಿರುವ ಶಂಕೆಯಿದ್ದು, ರಾಜೀನಾಮೆ ನೀಡಬೇಕು” ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ ಆಗ್ರಹಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಬಿಡುಗಡೆಯಾಗಿದ್ದು, ₹187 ಕೋಟಿ ಅನುದಾನವನ್ನು ಬೇರೆ ರಾಜ್ಯಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಿಂದ ಅಮಾಯಕ ಅಧಿಕಾರಿ ಬಲಿಯಾಗಿದ್ದಾನೆ. ನಿಗಮದ ಹಣ ವರ್ಗಾವಣೆಗೆ ಸಚಿವ ಸೂಚನೆಯಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ನಿಗಮದ ಅಧ್ಯಕ್ಷರ ಮಾಹಿತಿಯಿಲ್ಲದೇ ಇಷ್ಟೊಂದು ಹಣವರ್ಗಾವಣೆ ಹೇಗಾಯಿತು ಎಂದು ಪ್ರಶ್ನಿಸಿದರು. ಯೂನಿಯನ್ ಬ್ಯಾಂಕ್ ಮೂಲಕ ₹83 ಕೋಟಿ ಅನುದಾನ ಬೇರೆ ಬೇರೆ ಖಾತೆಗೆ ವರ್ಗಾವಣೆಯಾಗಿರುವುದಾಗಿ ಬಯಲಾಗಿದೆ. ರತ್ನಾಕರ್‌ ಬ್ಯಾಂಕ್‌ನ ಮೂಲಕ ಸಾಫ್ಟ್‌ವೇರ್‌ ಕಂಪನಿ ಖಾತೆಗೆ ಹಣ ವರ್ಗಾವಣೆಯಾಗಿರುವುದರ ಹಿಂದೆ ಅನೇಕ ಸಚಿವರು, ಶಾಸಕರ ಕೈವಾಡವಿದೆ” ಎಂದು ಆರೋಪಿಸಿದರು.

“ಯೂನಿಯನ್ ಬ್ಯಾಂಕ್ ನೀಡಿರುವ ದೂರಿನ ಮೇರೆಗೆ ಸಿಬಿಐ ದೂರು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರದ ಮೂಲದ ನಕ್ಕುಂಟಿ ನಾಗೇಶ್ವರರಾವ್ ಎಂಬಾತನ ಬಂಧನವಾಗಿದೆ. ನಗರದ ಡಿವಿಆರ್ ಕ್ಲಬ್ ಕೂಡ ನಕ್ಕಂಟಿ ಕುಟುಂಬಕ್ಕೆ ಸೇರಿದೆ. ದೊಡ್ಡ ಮಟ್ಟದಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೊಸರಾಜ ಅವರೂ ಕೂಡಾ ಪ್ರಕರಣದ ಹಿಂದಿರುವ ಸಂಶಯಗಳಿದ್ದು, ಸಮಗ್ರ ತನಿಖೆ ನಡೆಸಬೇಕಿದೆ. ತೆಲಂಗಾಣದ ಚುನಾವಣೆ ಉಸ್ತುವಾರಿಯಾಗಿದ್ದ ಎನ್.ಎಸ್.ಬೋಸರಾಜ ಇವರು ರಾಜ್ಯದಿಂದ ನಿಗಮದ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿರುವ ಸಾಧ್ಯತೆಗಳಿದ್ದು ಸಿಬಿಐ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಪಂಗಡದ ಮೀಸಲಾತಿ ಕ್ಷೇತ್ರದಿಂದ ಗೆದ್ದಿರುವ ಗ್ರಾಮೀಣ ಶಾಸಕ ದದ್ದಲ ಬಸನಗೌಡ ಅದೇ ಸಮುದಾಯಕ್ಕೆ ದ್ರೋಹ ಮಾಡಿದ್ದು, ನೈತಿಕತೆಯಿದ್ದರೆ ಸ್ವಯಂಪ್ರೇರಿತವಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮಖ್ಯಮಂತ್ರಿಗಳು ನಿಗಮದ ಅಧ್ಯಕ್ಷರಿಗೆ ಸೂಚನೆ ನೀಡಿ ರಾಜೀನಾಮೆ ಪಡೆಯಬೇಕು. ಪಕ್ಷದಿಂದ ಉಚ್ಛಾಟಿಸುವ ಮೂಲಕ ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಒತ್ತಾಯಿಸಿದರು.

“ಶೋಷಿತ ಸಮುದಾಯಗಳನ್ನು ಮೇಲೆತ್ತುವುದಾಗಿ ಹೇಳುತ್ತಾ ಬಂದಿರುವ ಕಾಂಗ್ರೆಸ್ ನಾಯಕರು ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನ ₹11,000 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡರು. ಈಗ ಟಿಎಸ್‌ಪಿ ಅನುದಾನವನ್ನು ಚುನಾವಣೆಗೆ ಬಳಿಸಿಕೊಂಡಿದ್ದಾರೆ. ಈ ಕುರಿತು ಜೆಡಿಎಸ್ ಪಕ್ಷದ ಮುಖಂಡರ ಬಳಿ ನಿಯೋಗ ತೆರಳಿ ತನಿಖೆಗೆ ಒತ್ತಾಯಿಸುವಂತೆ ಮನವಿ ಮಾಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬಿತ್ತನೆ ಬೀಜದ ದರ ಏರಿಕೆಗೆ ಖಂಡನೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಈ ಸಂದರ್ಭದಲ್ಲಿ ಎನ್ ಶಿವಶಂಕರ ವಕೀಲ, ರಾಮಕೃಷ್ಣ, ನರಸಿಂಹನಾಯಕ, ಹಂಪಯ್ಯನಾಯಕ, ಲಕ್ಷ್ಮೀಪತಿ ಗಾಣಧಾಳ, ನಾಗರಾಜಗೌಡ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...