ರಾಯಚೂರು | ಖಾಲಿ ಹುದ್ದೆಗಳನ್ನು ಭರ್ತಿಗಾಗಿ ಆಗ್ರಹಿಸಿ ಉದ್ಯೋಗ ಆಕಾಂಕ್ಷಿಗಳಿಂದ ಪ್ರತಿಭಟನೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ನೇಮಕಾತಿ ಪಾರದರ್ಶಕವಾಗಿ ಪ್ರಕ್ರಿಯೆ ನಡೆಯಬೇಕು ಹಾಗೂ ಕನಿಷ್ಠ ವಯೋಮಿತಿ 5 ವರ್ಷ ಹೆಚ್ಚಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ಉದ್ಯಾನವನದವರಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಕೇಂದ್ರ ಮತ್ತು ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಬಿದ್ದಿವೆ. ಆದರೆ ನೇಮಕಾತಿಗಳು ನಡೆದು ಹಲವು ವರ್ಷಗಳೇ ಕಳೆದಿದ್ದರೂ ನಿರ್ಲಕ್ಷ್ಯ ವಹಿಸಿದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಗ್ರಹಿಸಿದರು.

ಕಳೆದ 10 ವರ್ಷಗಳಿಂದ ಉದ್ಯೋಗಾಕಾಂಕ್ಷಿ ಯುವಕರು ತರಬೇತಿ ಪಡೆದು, ಲಕ್ಷಾಂತರ ಹಣವನ್ನು ಕಳೆದುಕೊಂಡಿದ್ದಾರೆ ಹಾಗೂ ನೇಮಕಾತಿಯ ಚಿಂತನೆಯಲ್ಲಿ ಮಾನಸಿಕ ಕುಗ್ಗಿ ಹೋಗಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರಗಳು ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025-26 ನೇ ಸಾಲಿನಲ್ಲಿ ರಾಜ್ಯದ 44 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಕೇಂದ್ರದ ವಿವಿಧ ಇಲಾಖೆಗಳಲ್ಲಿ 9.5 ಲಕ್ಷ ಹುದ್ದೆ ಖಾಲಿ ಇವೆ. ರೈಲ್ವೇ ಇಲಾಖೆಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಬಿದ್ದಿವೆ. ಇವು ಅನುಮೋದಿತ ಹುದ್ದೆಗಳು ಆದರೂ ಹೊಸದಾಗಿ ಸೃಜಿಸಬೇಕಾದ ಹುದ್ದೆಗಳು ಇನ್ನೆಷ್ಟೋ ಬಾಕಿಯಿವೆ. ಹುದ್ದೆಯ ಖಾಲಿಗಳ ಲೆಕ್ಕವಿಲ್ಲ ಈ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪ್ರಯತ್ನಗಳು ನಡೆಯುತ್ತಿಲ್ಲ. ಕುಂಟು ನೆಪಗಳನ್ನು ಹೇಳಿ ನೇಮಕಾತಿಗಳನ್ನು ಮುಂದೂಡುವ ಪರಿಪಾಠವನ್ನು ಎಲ್ಲಾ ಸರ್ಕಾರಗಳು ಅನುಸರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,454 ಹುದ್ದೆಗಳು ಖಾಲಿಯಿವೆ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ 21381 ಶಿಕ್ಷಕರ ಹುದ್ದೆಗಳು ಕೂಡ ಖಾಲಿಯಿವೆ. ಇನ್ನು ಚಿತ್ರಕಲಾ, ಸಂಗೀತ, ನಾಟಕ, ದೈಹಿಕ ಸೇರಿದ ವಿಶೇಷ ಶಿಕ್ಷಕರ ನೇಮಕಾತಿ ಬಗ್ಗೆ ಮಾತನಾಡುವುದೇ ಬೇಡ ಎಂಬಂತಾಗಿದೆ. ಮತ್ತೊಂದೆಡೆ ಆರೋಗ್ಯ, ಗ್ರಾಮೀಣಾಭಿವೃದ್ಧಿ, ಹಾಗೂ ಪಂಚಾಯತ್ ರಾಜ್, ಕಂದಾಯ, ಒಳಾಡಳಿತ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಬಹಳ ದೊಡ್ಡ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಅತಿಥಿ ಶಿಕ್ಷಕ, ಅತಿಥಿ ಉಪನ್ಯಾಸಕ, ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ತುಂಬಿಕೊಂಡು ಉದ್ಯೋಗ ಭದ್ರತೆ ನೀಡದೆ ದುಡಿಸಿಕೊಳ್ಳಲಾಗುತ್ತಿದೆ ಇಷ್ಟೆಲ್ಲಾ ಗಂಭೀರ ಸಮಸ್ಯೆಗಳನ್ನು ಯುವಜನರು ಎದುರಿಸುತ್ತಿದ್ದಾರೆ ಎಂದರು.

ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕು, ಎಲ್ಲಾ ಹುದ್ದೆಗಳ ನೇಮಕಾತಿಯಲ್ಲಿ ಐದು ವರ್ಷಗಳ ಸಡಿಲಿಕೆ ನೀಡಬೇಕು, ನೇಮಕಾತಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಬೇಕು, ಚಿತ್ರಕಲಾ, ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ ಎಲ್ಲಾ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೊಲದಲ್ಲಿ ಹತ್ತಿ ಕಳವು ; ರೈತರಿಗೆ ಆತಂಕ

ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್, ಜಿಲ್ಲಾಧ್ಯಕ್ಷ ಡಾ.ಹನುಮೇಶ ಕುರ್ಡಿ, ಜಿಲ್ಲಾ ಘಟಕ ಜಂಟಿ ಕಾರ್ಯದರ್ಶಿ ಯಲ್ಲಪ್ಪ ದೊರೆ, ವಿನೋದ ಕುಮಾರ, ಕಾರ್ಯದರ್ಶಿ ರಾಮಚಂದ್ರಪ್ಪ, ಸಂತೋಷ ಸಾಗರ್ ಮನ್ಸಲಾಪುರ, ಸುದೀಪ್ ಮನ್ಸಲಾಪೂರ ಸೇರಿದಂತೆ ಉದ್ಯೋಗಾಕ್ಷಿಗಳು, ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...