ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ ರೂಪಿಸಿರುವ ಜ್ಯೋತಿ ರಥಯಾತ್ರೆಗೆ ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಚಾಲನೆ ನೀಡಿದರು. ನಗರದ ಐತಿಹಾಸಿಕ ಕರ್ನಾಟಕ ಸಂಘದ ಆವರಣದಿಂದ ರಥಯಾತ್ರೆ ಅಧಿಕೃತವಾಗಿ ಆರಂಭವಾಯಿತು.
ಹೂವುಗಳು ಹಾಗೂ ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಥವು ಸಾರ್ವಜನಿಕರ ಗಮನ ಸೆಳೆಯಿತು. ರಥಯಾತ್ರೆಯು ನಗರದ ಬಂಗಾರ ಬಜಾರ್, ಸದರ್ ಬಜಾರ್, ಹಳೆ ನಗರಸಭೆ ಕಚೇರಿ ಮುಂಭಾಗ, ಕೇಂದ್ರ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಬಸವೇಶ್ವರ ವೃತ್ತದ ಮೂಲಕ ತಾಲ್ಲೂಕು ಕಡೆಗೆ ಸಂಚರಿಸಿತು.
ಮುಂದಿನ ದಿನಗಳಲ್ಲಿ ಮಾನ್ವಿ, ಸಿಂಧನೂರು, ಮಸ್ಕಿ, ಲಿಂಗಸೂರು, ಕವಿತಾಳ, ದೇವದುರ್ಗ, ಗಬ್ಬೂರ, ಅರಕೇರಾ, ಸಿರವಾರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಫೆಬ್ರವರಿ 5ರವರೆಗೆ ಜ್ಯೋತಿ ರಥಯಾತ್ರೆ ಸಂಚರಿಸಲಿದೆ. ಜಿಲ್ಲಾಡಳಿತದ ಸೂಚನೆ ಹಿನ್ನೆಲೆ, ರಜೆ ದಿನವಾದ ಭಾನುವಾರವೂ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ತಮ್ಮತಮ್ಮ ಕಚೇರಿಯ ಸಿಬ್ಬಂದಿಯೊಂದಿಗೆ ಜ್ಯೋತಿ ರಥಯಾತ್ರೆ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಥಯಾತ್ರೆಯನ್ನು ಯಶಸ್ವಿಗೊಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ವ-ಸಹಾಯ ಗುಂಪುಗಳಿಂದ ತರಕಾರಿ-ಮೊಟ್ಟೆ ಸರಬರಾಜು ಖಂಡಿಸಿ ಬಿಸಿಯೂಟ ನೌಕರರಿಂದ ಪ್ರತಿಭಟನೆ
ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಉಪ ಆಯುಕ್ತರಾದ ಸಂತೋಷ ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಯಪ್ರಕಾಶ್ ಚವ್ಹಾಣ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು ಆರ್. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ರಾಯಚೂರು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಮುಖಂಡರಾದ ರವಿ ಭೋಸರಾಜು, ಜಯವಂತರಾವ್ ಪತಂಗೆ, ಕೆ.ಶಾಂತಪ್ಪ, ರವಿ ಜಲ್ದಾರ್ ಸೇರಿದಂತೆ ವಿವಿಧ ದಿನಾಚರಣೆಗಳ ಆಚರಣಾ ಸಮಿತಿಯ ಸದಸ್ಯರು ಕೂಡ ಹಾಜರಿದ್ದರು.





