ರಾಯಚೂರು | ಸರ್ಕಾರಿ ಕಾಲೇಜು ಸಬಲೀಕರಣಕ್ಕೆ ಕೆಆರ್‌ಎಸ್‌ ಆಗ್ರಹ

Date:

ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರನ್ನು ಗೌರವದಿಂದ ಕಾಣುವಂತೆ ಆದೇಶ ಹೊರಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಕಾರ್ಯಕರ್ತರು ರಾಯಚೂರು ಜಿಲ್ಲೆಯ ಸಿಂಧನೂರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

“ತಾಲೂಕು ವ್ಯಾಪ್ತಿಯ ಕೆಲ ಸರ್ಕಾರಿ ಕಾಲೇಜುಗಳಲ್ಲಿ ಮೂಲಸೌಕರ್ಯ ತಡವಾಗಿ ಬರುವುದು, ಶಿಕ್ಷಕರು ತರಗತಿಗಳಿಗೆ ಗೈರಾಗುವುದರ ಬಗ್ಗೆ ವಿದ್ಯಾರ್ಥಿ ಪಾಲಕರು ಸೇರಿದಂತೆ ಸಂಘ-ಸಂಸ್ಥೆಗಳವರು ಈಗಾಗಲೇ ತಕರಾರು ವ್ಯಕ್ತಪಡಿಸಿದ್ದರೂ ಕೆಲವಡೆ ಅದೇ ಪರಿಸ್ಥಿತಿ ಮುಂದುವರಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿದ್ಯಾರ್ಥಿಗಳಿಗೆ ಸಮಯ ಪರಿಪಾಲನೆಯ ಬುದ್ದಿ ಹೇಳುವ ಉಪನ್ಯಾಸಕರೇ ಸಮಯದ ಪರಿಪಾಲನೆ ಮರೆತಿರುವುದು ವಿಪರ್ಯಾಸವೇ ಸರಿ. ಹಾಗಾಗಿ ಸರ್ಕಾರಿ ಕಾಲೇಜುಗಳ ವ್ಯವಸ್ಥೆಯನ್ನು ಶಿಸ್ತುಗೊಳಿಸುವ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಆದೇಶಗಳನ್ವಯ ಕಟ್ಟುನಿಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಮಟ್ಟದ ಅಧಿಕಾರಿಗಳು ಕಾಲೇಜುಗಳಿಗೆ ಭೇಟಿ ನೀಡಿ ಸೂಕ್ತ ನಿರ್ದೇನ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಾಸಗಿ ಕಾಲೇಜುಗಳ ಬಗ್ಗೆ ಹೇಳಬೇಕೆಂದರೆ, ಕೆಲ ಖಾಸಗಿ ಕಾಲೇಜುಗಳಲ್ಲಿ ಕೆಲಸ ಮಾಡುವ ಕೆಲ ಉಪನ್ಯಾಸಕರನ್ನು ಅಗೌರವದಿಂದ ಕಾಣುವ ಮೂಲಕ ಅವರಿಗೆ ತಾರತಮ್ಯದಿಂದ ವರ್ತಿಸಲಾಗುತ್ತಿದೆ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆರೋಪಗಳಿವೆ. ಹಾಗಾಗಿ ಖಾಸಗಿ ಕಾಲೇಜುಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರ ಮೇಲೆ ಯಾವುದೇ ರೀತಿಯ ತಾರತಮ್ಯ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

“ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಉಪನ್ಯಾಸಕರು ಖಾಸಗಿ ಕಾಲೇಜುಗಳವರ ಸಮಾರಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಾಗಿಯಾಗುವುದು, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಆಯೋಜಿಸಬೇಕಾದ ಸರ್ಕಾರಿ ಕಾರ್ಯಕ್ರಮಗಳನ್ನು ಖಾಸಗಿ ಕಾಲೇಜುಗಳವರ ಸಹಭಾಗಿತ್ವದಲ್ಲಿ, ಖಾಸಗಿ ಕಾಲೇಜುಗಳಲ್ಲಿ ಆಯೋಜಿಸುವುದು ನಡೆಯುತ್ತಿದೆ. ಇದನ್ನು ನಿಲ್ಲಿಸಬೇಕು. ಇನ್ನು ತಾಲೂಕು, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯವರು ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಪರಿಣಿತರು, ವಿಶೇಷ ಸಾಧಕರು ಸೇರಿದಂತೆ ಸರ್ಕಾರಿ ಸಂಸ್ಥೆಗಳಲ್ಲಿ ಹೆಚ್ಚಿನ ಅನುಭವ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಕೆಆರ್‌ಎಸ್ ರಾಜ್ಯ ಘಟಕದ ಯುವ ಉಪಾಧ್ಯಕ್ಷ ನಿರುಪಾದಿ ಗೋಮರ್ಸಿ, ಅಮರೇಗೌಡ ಮಲ್ಲಾಪುರ, ದೌಲಸಾಬ್ ದೊಡ್ಡಮನಿ, ಓಬಳೇಶ್ ನಾಯಕ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...