ರಾಯಚೂರು | ಜಿಲ್ಲೆಯಲ್ಲಿ ಕನ್ನಡ ನಾಮಫಲಕಗಳು ಪಸರಿಸಬೇಕು: ನಮ್ಮ ಕರ್ನಾಟಕ ಸೇನೆ ಒತ್ತಾಯ

Date:

ರಾಯಚೂರು ಜಿಲ್ಲೆಯ ವ್ಯಾಪಾರ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳನ್ನು ಶೇ. 70ರಷ್ಟು ಕನ್ನಡದಲ್ಲಿರಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ಜಿಲ್ಲೆಯಾದ್ಯಂತ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಸಂಸ್ಥೆಗಳು ಎಲ್ಲಾ ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಸೂಚಿಸಬೇಕು. ನಾಮಫಲಕಗಳಲ್ಲಿ ಶೇ.70 ರಷ್ಟು ಭಾಗ ಕನ್ನಡದಲ್ಲಿರತಕ್ಕದ್ದು ಉಳಿದ ಶೇ.30 ರಷ್ಟು ಭಾಗದಲ್ಲಿ ಇತರ ಭಾಷೆ ಬಳಸಬಹುದಾಗಿದೆ ಎಂಬುದು ಸರ್ಕಾರದ ಸುತ್ತೋಲೆಯಲ್ಲಿ ಆದೇಶಿಸಿದ್ದರೂ, ನಾಮಫಲಕಗಳಲ್ಲಿ ಕನ್ನಡ ಕಾಣಿಸುತ್ತಿಲ್ಲ ಎಂದು ಒತ್ತಾಯಿಸಿದರು.

ನಗರದಲ್ಲಿ ಜಿಲ್ಲಾಡಳಿತವು ಕನ್ನಡದ ಬಗ್ಗೆ ತಳೆದಿರುವ ನಿರ್ಲಕ್ಷ್ಯದಿಂದಾಗಿ ಅನ್ಯ ಭಾಷೆಗಳು ಬಹುಪಾಲು ನಾಮಫಲಕಗಳು ಆವರಿಸಿದ್ದು, ಎಲ್ಲಾ ಕಡೆ ಎದ್ದು ಕಾಣಿಸುತ್ತಿವೆ. ಆದ್ದರಿಂದ ಕೂಡಲೇ ನವೆಂಬರ್ 1ರೊಳಗಾಗಿ ಎಲ್ಲಾ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಸಂಸ್ಥೆಗಳಿಗೆ ತಿಳುವಳಿಕೆ ಪತ್ರ ಹೊರಡಿಸಿ ಕನ್ನಡ ನಾಮಫಲಕ ಕಾರ್ಯರೂಪಕ್ಕೆ ತರಬೇಕು ಹಾಗೂ ಖಡಕ್ ಸೂಚನೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 1ರಿಂದ ರಾಯಚೂರಿನ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ ನೀಡಬೇಕು ಹಾಗೂ ಜಿಲ್ಲೆಯ ಕನ್ನಡ ಪರ ಸಂಘಟನೆಗಳು ಕನ್ನಡ ಕಂಪನ್ನು ಪಸರಿಸುವ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕಾಗಿ ನೂರಾರು ಮರಕ್ಕೆ ಕೊಡಲಿ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ

ನವೆಂಬರ್ 1 ರಂದು ಶಾಲಾ ಮಕ್ಕಳಿಗೆ ರಜೆ ಘೋಷಿಸದೇ ಕನ್ನಡದ ಧ್ವಜಾರೋಹಣ ಮಾಡಿ ನಾಡಗೀತೆ ಹಾಡಿ ರಾಜ್ಯೋತ್ಸವ ಆಚರಣೆಯ ಇತಿಹಾಸವನ್ನು ಮಕ್ಕಳಿಗೆ ತಿಳಿಸಬೇಕೆಂದು ಎಲ್ಲಾ ಶಾಲೆಗಳಿಗೆ ಆದೇಶ ಹೊರಡಿಸಬೇಕು ಎಂದರು.

ಈ ವೇಳೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಕೊಂಡಪ್ಪ , ಎಂ ಎಸ್ ವೆಂಕಟೇಶ , ಮಹೇಶ್ ಪಾಟೀಲ್ , ರಾಜಶೇಖರ್ , ವೀರೇಶ್ ಎಲಿಗಾರ , ಇನ್ನಿತರರು ಹಾಜರಿದ್ದರು.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...