ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ದೇವದುರ್ಗ ತಾಲ್ಲೂಕು ಗಲಗ ಗ್ರಾಮದ ಕೆಇಬಿ ಬಳಿ ನಡೆದಿದೆ.
ಸಿರಿಯಪ್ಪ ರಾಮೇಶ್ (30) ಮೃತ ಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ.ದೇವದುರ್ಗ ಕಡೆಯಿಂದ ಬರುತ್ತಿದ್ದ ಬಸ್ ಗೆ ಬೈಕ್ ಸವಾರನು ಕೆಇಬಿ ಕ್ರಾಸ್ ಬಳಿ ವೇಗವಾಗಿ ಚಲಾಯಿಸುವಾಗ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೈಕ್ ಸವಾರನು ಲಿಂಗಸೂಗೂರು ತಾಲ್ಲೂಕು ಅನ್ವರಿ ಗ್ರಾಮದವನು ಎನ್ನಲಾಗಿದೆ. ಅನ್ವರಿ ಗ್ರಾಮದಿಂದ ದೇವದುರ್ಗ ತಾಲ್ಲೂಕು ಗುಂಡಗುರ್ತಿ ಗ್ರಾಮಕ್ಕೆ ಮದುವೆ ಕಾರ್ಯಕ್ರಮದ ನಿಮಿತ್ಯದಿಂದ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು |ರೈಲ್ವೇ ಸ್ಟೇಷನ್ ಬಳಿ ಯುವಕನ ಕೊಲೆ
ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರನ ತೆಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದರು.
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.





