ರಾಯಚೂರು | ಹಾಸ್ಟೆಲ್‌ ಸಮಸ್ಯೆ ಪರಿಹರಿಸುವಂತೆ ಕೆವಿಎಸ್‌ ಆಗ್ರಹ

Date:

ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್‌) ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸಿಂಧನೂರು ತಹಶೀಲ್ದಾರ್‌ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, “ಹಾಸ್ಟೆಲ್ ವಾರ್ಡ್‌ನ್ ಬೇಜವ್ದಾರಿ ಕಾರ್ಯನಿರ್ವಹಣೆ, ಮೂಲ ಸೌಕರ್ಯಗಳ ಕೊರತೆ ಹಾಗೂ ಅನಗತ್ಯ ಕಿರುಕುಳದಿಂದ ವಿದ್ಯಾರ್ಥಿನಿಯರು ಬೇಸತ್ತಿದ್ದಾರೆ. ಇದು ಅವರ ವಿದ್ಯಾಭ್ಯಾಸದ ಮೇಲೆ ಮತ್ತು ಪರೀಕ್ಷಾ ಫಲಿತಾಂಶದ ಮೇಲೆ ವ್ಯತಿರಿಕ್ತಿ ಪರಿಣಾಮ ಬೀರುತ್ತಿದೆ” ಎಂದು ಹೇಳಿದ್ದಾರೆ.

“ಹಾಸ್ಟೆಲ್‌ ಸಮಸ್ಯೆಗಳ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಗಳ ಕಾರಣದಿಂದ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ದಿನವೂ ಯಾತನೆ ಅನುಭವಿಸುವಂತಾಗಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿಗೆ ಬಿಗಡಾಯಿಸುತ್ತಿದೆ. ಸಮಸ್ಯೆಗಳು ವಿಕೋಪಕ್ಕೆ ಹೋಗಿ ಪರಿಸ್ಥಿತಿ ಸಂಪೂರ್ಣ ಹದಗೆಡುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹದಿನೈದು ದಿನಗಳಲ್ಲಿ ಹಾಸ್ಟೆಲ್‌ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ತಾಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಾಸ್ಟೆಲ್‌ ವಿದ್ಯಾರ್ಥಿನಿಯರ ಬೇಡಿಕೆಗಳು

  1. ಹಾಸ್ಟೆಲ್‌ ವಾರ್ಡನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು.
  2. ರೇಷನ್ ಕೊರತೆ, ಊಟ ತಯಾರಿಕೆಯಲ್ಲಿ ಅಶುಚಿತ್ವ, ಗುಣಮಟ್ಟದ ತರಕಾರಿ ಬಳಸದೇ ಕೊಳೆತ ತರಕಾರಿ ಬಳಸಿ ಅಡುಗೆ ತಯಾರಿಸಲಾಗುತ್ತಿದೆ. ಅವ್ಯವಸ್ಥೆಯನ್ನು ಪರಿಹರಿಸಿ, ಗುಣಮಟ್ಟದ ಆಹಾರ ನೀಡಬೇಕು.
  3. ಗ್ರಂಥಾಲಯದಲ್ಲಿನ ಪುಸ್ತಕಗಳ ಕೊರತೆ ಪರಿಹರಿಸಬೇಕು.
  4. ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು.
  5. ಹಾಸ್ಟೆಲ್‌ನ ವಾರ್ಡ್‌ನ್‌ ವಿದ್ಯಾರ್ಥಿನಿಯರ ಮೇಲೆ ಅನುಚಿತವಾಗಿ ವರ್ತಿಸುವುದಲ್ಲದೇ ಮಾನಸಿಕ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಕರ್ನಾಟಕ ವಿಧ್ಯಾರ್ಥಿ ಸಂಘಟನೆ ರಾಜ್ಯ ಮುಖಂಡ ಗುರುಬಸವ ಬರಗೂರು, ತಾಲ್ಲೂಕು ಮುಖಂಡ ಚಾಂದ್ ಪಾಶ, ಸಮದ್ ಚೌದ್ರಿ, ಹಾಗೂ ವಿಧ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...