ರಾಯಚೂರು | ಕ್ಯಾಥೋಲಿಕ್ ಕನ್ಯಾಸ್ತ್ರೀಯರ ಬಂಧನ ಖಂಡಿಸಿ ಪ್ರತಿಭಟನೆ

Date:

ಛತ್ತೀಸಗಡದಲ್ಲಿ ಕ್ಯಾಥೋಲಿಕ್ ಕನ್ಯಾಸ್ತ್ರೀಯರ ಮೇಲೆ ನಡೆದ ಹಲ್ಲೆ ಹಾಗೂ ಕಾನೂನು ಬಾಹಿರವಾಗಿ ನಡೆಸಲಾದ ಬಂಧನ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಮಸ್ಕಿ ನಗರದಲ್ಲಿ ಸೋಮವಾರ ಕ್ರೈಸ್ತ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.

ನಗರದ ಕೋರ್ಟ್ ಸರ್ಕಲ್‌ನಿಂದ ಆರಂಭಗೊಂಡ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿಯವರೆಗೆ ಕೈಯಲ್ಲಿ ಬಿತ್ತಿ ಪತ್ರಗಳನ್ನು ಹಿಡಿದು ಮೌನವಾಗಿ ಮರೆವಣಿಗೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಾಲಸ್ವಾಮಿ ಅವರು, ಕ್ಯಾಥೋಲಿಕ್ ಧರ್ಮಸಭೆಯ ಕನ್ಯಾಸ್ತ್ರೀಯರನ್ನು ಮಕ್ಕಳ ಸಾಗಾಟ ಮತ್ತು ಮತಾಂತರದಲ್ಲಿ ತೊಡಗಿರುವ ಧರ್ಮ ಪ್ರಚಾರಕರೆಂದು ಸುಳ್ಳು ಆರೋಪ ಹೊರಿಸಿ ಪೊಲೀಸ್ ಠಾಣೆಗೆ ದೂರು ನೀಡಿ ಬಂಧಿಸಿರುವುದು ಖಂಡನೀಯ ಎಂದರು.

ಪ್ರತಿಯೊಬ್ಬ ಪ್ರಜೆಗೂ ತಾನು ಇಚ್ಛಿಸಿದ ಧರ್ಮವನ್ನು ಆಚರಿಸಲು ಸಂವಿಧಾನ ಹಕ್ಕಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಯವರು ಶಾಂತಿ, ಪ್ರೀತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಹಿಸದೆ, ಮನುವಾದಿ ನಿಲುವಿನಿಂದ ಉದ್ದೇಶಪೂರ್ವಕವಾಗಿ ಸಂಚು ರೂಪಿಸಿ ದಮನಕ್ಕೆ ಮುಂದಾಗುತ್ತಿದ್ದಾರೆ,” ಎಂದು ಆರೋಪಿಸಿದರು.

1000163981

ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಅಹಿತಕರ ಘಟನೆಗಳು ನಡೆಯುತ್ತಿವೆ. ತಕ್ಷಣ ಆಯಾ ರಾಜ್ಯದ ಸರ್ಕಾರಗಳು ಸೂಕ್ತ ರಕ್ಷಣೆ ನೀಡಬೇಕು ಇಲ್ಲದಿದ್ದರೆ ರಾಜ್ಯದ ಸರ್ಕಾರವೇ ನೇರ ಹೊಣೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೈಕ್ – ಟಾಟಾಏಸಿ ಡಿಕ್ಕಿ : ಓರ್ವ ಸಾವು ,ನಾಲ್ವರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ರಾಜ್ಯ ಮಹಿಳಾ ಒಕ್ಕೂಟ ಮೌಕ್ಷಮ್ಮ, ಫಾದರ್ ಕ್ಸೇವಿಯರ, ಸುರೇಶ್ ಅಂತರಗಂಗಿ, ರಾಯಪ್ಪ, ಶಾಂಭವಿ, ಮರಿಯಮ್ಮ ಹೊಸಳ್ಳಿ, ಇನ್ನಿತರರು ಉಪಸ್ಥಿತರಿದ್ದರು.


WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...