ರಾಯಚೂರು | ಕಟ್ಟಡ ಕಾರ್ಮಿಕರಿಗಾಗಿ ಇರುವ ಸೆಸ್ ಹಣ ಸರಿಯಾದ ಉಪಯೋಗವಾಗಲಿ; ಕಾರ್ಮಿಕ ಸಂಘಟನೆಗಳ ಒತ್ತಾಯ

Date:

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಪಡೆಯಲು ಅನೇಕ ಅವೈಜ್ಞಾನಿಕ ಮಾನದಂಡಗಳನ್ನು ಮಾಡಿದ್ದರಿಂದ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಫುಡ್ ಕಿಟ್, ಸಲಕರಣೆಗಳ ಅನವಶ್ಯಕ ಯೋಜನೆಗಳನ್ನು ಕೈಬಿಟ್ಟು ಸೆಸ್ ಹಣ ಸರಿಯಾಗಿ ಉಪಯೋಗಿಸಿ ಕಾರ್ಮಿಕರ ಕಲ್ಯಾಣಕ್ಕೆ ಖರ್ಚು ಮಾಡಬೇಕು ಎಂದು ಕಟ್ಟಡ ಕಾರ್ಮಿಕರ ಸಂಘಗಳ ಜಿಲ್ಲಾ ಸಮನ್ವಯತೆ ಸಮಿತಿಯ ಅಧ್ಯಕ್ಷ ವೀರನಗೌಡ ಒತ್ತಾಯಿಸಿದರು.

ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ಕಾರ್ಮಿಕರು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಾರ್ಮಿಕ ಸಚಿವರು ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸೌಲಭ್ಯಗಳನ್ನು ಪಡೆಯಲು ಅನೇಕ ಅವೈಜ್ಞಾನಿಕ ಮಾನದಂಡಗಳನ್ನು ಜಾರಿ ಮಾಡಲಾಗಿದೆ. ಸರ್ಕಾರದಿಂದ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯಗಳಿದ್ದರೂ ಸರಿಯಾಗಿ ತಲುಪುತ್ತಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳು ನಿರ್ಲಕ್ಷ್ಯ ಮುಂದುವರೆಸಿದ್ದಾರೆ ಎಂದು ದೂರಿದರು.

ಆರ್.ಪಿ.ಎಲ್.ಟ್ರೈನಿಂಗ್ ವಿತ್ ಕಿಟ್ , ಟೂಲ್ಸ್ ಕಿಟ್ , ನ್ಯೂಟ್ರೆಷನ್ ಕಿಟ್ ಹ್ಯೂಮಿನಿಟಿ ಕಿಟ್ ಸೇರಿದಂತೆ ಹಲವಾರು ನಿರುಪಯುಕ್ತ ಕಿಟ್ ನೀಡುತ್ತಿದ್ದು. ಇದರಿಂದ ಮಂಡಳಿಯಿಂದ ನೀಡುತ್ತಿರುವ ಕಾರ್ಮಿಕರ ಬೆವರಿನ ಹನಿಯಿಂದ ಸಂಗ್ರಹವಾಗಿರುವ ಸೆಸ್ ಹಣ ದುರುಪಯೋಗವಾಗುತ್ತಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕರಿಗೆ ಅವಶ್ಯವಿರುವ ಮೂಲ ಯೋಜನೆಗಳಾದ ಶೈಕ್ಷಣಿಕ ಸಹಾಯಧನ, ಮದುವೆ ಮತ್ತು ಮರಣ ಸಹಾಯಧನ, ಪಿಂಚಣಿ ಸವಲತ್ತುಗಳು ಸಹಾಯಧನವನ್ನು ಒಂದು ವರ್ಷದಿಂದ ನೀಡುತ್ತಿಲ್ಲ ಎಂದು ಆಪಾದಿಸಿದರು‌.

ಈ ಸುದ್ದಿ ಓದಿದ್ದೀರಾ? ರಾಯಚೂರು | ಚಿಕಿತ್ಸೆಗೆ ದಾಖಲಾಗಿದ್ದ ಬಾಲಕ ಜಿಲ್ಲಾಸ್ಪತ್ರೆಯಿಂದ ನಾಪತ್ತೆ; ದೂರು ದಾಖಲು

ಪತ್ರಿಕಾಗೋಷ್ಠಿಯಲ್ಲಿ ಆನಂದಪ್ಪ, ವೀರಣ್ಣ ಹೊಸೂರು, ರಂಗಪ್ಪ ಅಸ್ಕಿಹಾಳ, ತಿಮ್ಮಪ್ಪ ಸ್ವಾಮಿ, ಭೀಮಣ್ಣ, ನಾಗರಾಜ, ವೀರೇಶ ಜಾಲಗರ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...