ರಾಯಚೂರು | ಲಾರಿ ಡಿಕ್ಕಿ ; ಓರ್ವ ಸಾವು , ಮತ್ತೊಬ್ಬ ಗಂಭೀರ ಗಾಯ

Date:

ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದ ಹಳ್ಳದ ಬಳಿ ನಡೆದಿದೆ.

ಮೃತ ದುರ್ದೆವಿ ಬೋಮ್ಮನಾಳ ಗ್ರಾಮದ ನಾಗಪ್ಪ (48) ತಂದೆ ಗಿರಿಯಪ್ಪ ಎನ್ನಲಾಗಿದೆ.ತನ್ನ ಪತ್ನಿಯೊಂದಿಗೆ ಮಾನ್ವಿಗೆ ಬೈಕ್ ನಲ್ಲಿ ತೆರಳುತ್ತಿರುವ ವೇಳೆ ಹಿಂಬದಿ ಬರುತ್ತಿದ್ದ ಲಾರಿಯು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿ ದೇವಮ್ಮಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಮಾನ್ವಿ ತಾಲೂಕ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಾಲ್ಮೀಕಿ ರಾಯಚೂರು ವಿ.ವಿ ಕುಲಸಚಿವರಾಗಿ ಡಾ.ಚನ್ನಪ್ಪ ಎ. ಅಧಿಕಾರ ಸ್ವೀಕಾರ

ಘಟನಾ ಸ್ಥಳಕ್ಕೆ ಮಾನ್ಯ ಪೊಲೀಸ್ ಠಾಣೆಯ ಪಿಐ ಸೋಮಶೇಖರ ಕೆಂಚಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರಕರಣ ಮಾನ್ವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...