ರಾಯಚೂರು | ಲಕ್ಷ್ಮಣ್ ಮಂಡಲಗೇರ, ನೀನಾಸಂ ಅರುಣ್ ಮಾನ್ವಿಯವರಿಗೆ ಸಿಜಿಕೆ ರಂಗ ಪ್ರಶಸ್ತಿ ಪ್ರದಾನ

Date:

ಸಿಜಿಕೆ ಒಂದು ಅದ್ಭುತ ಚೇತನ ಅವರು ಎಲ್ಲರಿಗೂ ಪ್ರತೀಕವಾಗಿದ್ದರು. ಅವರು ಕಾಲೇಜಿನಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡು 70-80 ರ ದಶಕದಲ್ಲಿ ಸಮುದಾಯದ ಮೂಲಕ ಸಾಂಸ್ಕೃತಿಕ ಲೋಕಕ್ಕೆ ಹೊಸ ಆಯಾಮ ಕೊಟ್ಟ ರಂಗ ದಿಗ್ಗಜ. ಅವರ ಹೆಸರಿನಲ್ಲಿ ರಂಗ ಪ್ರಶಸ್ತಿ ಕೊಡುತ್ತಿರುವುದು ಸಂತೋಷದ ವಿಷಯ ಎಂದು ಸಾಹಿತಿ ವೀರ ಹನುಮಾನ್ ಅಭಿಪ್ರಾಯಪಟ್ಟರು.

ಮಾದರ ಚೆನ್ನಯ್ಯ ಗುರುಪೀಠದಲ್ಲಿ ಕರ್ನಾಟಕ ಬೀದಿನಾಟಕ ಅಕಾಡೆಮಿ, ಬೆಂಗಳೂರು ಹಾಗೂ ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ (ರಿ) ರಾಯಚೂರು ವತಿಯಿಂದ ನಡೆದ ಲಕ್ಷ್ಮಣ್ ಮಂಡಲಗೇರ, ನೀನಾಸಂ ಅರುಣ್ ಮಾನ್ವಿಯವರಿಗೆ ಸಿಜಿಕೆ ರಂಗ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

1979ರ ಇಸವಿಯಲ್ಲಿ ಸಿಜಿಕೆ ಬರೆದು ನಿರ್ದೇಶಿಸಿದ ಬೆಲ್ಟಿ ಎಂಬ ಬೀದಿ ನಾಟಕವನ್ನು ರಾಜ್ಯಾದಂತ ಬೀದಿಯಲ್ಲಿ ಜನರ ಮಧ್ಯೆಯೇ ಪ್ರದರ್ಶನಗಳನ್ನು ಮಾಡುತ್ತಾ ಹೋದ್ವಿ. ಈ ನಾಟಕದ ಮೂಲಕ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಿಲ್ಟಿ ನಾಟಕವು ಉತ್ತರ ಪ್ರದೇಶದಲ್ಲಿ ಹನ್ನೊಂದು ಜನ ದಲಿತರನ್ನು ಸುಟ್ಟು ಹಾಕಿದ ಘಟನೆ ಆಧರಿಸಿದ್ದು ಆಗಿತ್ತು. ಸಿಜಿಕೆ 90ರ ದಶಕದಲ್ಲಿ ರಾಯಚೂರಿನಲ್ಲಿ ಮೂರು ದಿನದ ನಾಟಕೋತ್ಸವ ಮಾಡಿದಾಗ ನಾಟಕದ ಕುರಿತು ರಾತ್ರಿಯೆಲ್ಲಾ ನಮ್ಮೊಂದಿಗೆ ಚರ್ಚೆ ಮಾಡುತ್ತಿದ್ದರು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಮುಖ್ಯ ಅಥಿತಿಗಳಾದ ಶ್ರೀನಿವಾಸ ಮರಡ್ಡಿ ಮಾತನಾಡುತ್ತಾ, ಇದೊಂದು ಆತ್ಮೀಯವಾದಂತ ಕ್ಷಣ. ನಾವು ನಮ್ಮನ್ನು ಅವಲೋಕನ ಮಾಡಿಕೊಳ್ಳಬೇಕಾದ ಸಮಯ. ಕಲೆ ಕಲೆಗಾಗಿ ಅನ್ನುವ ಸಂದರ್ಭದಲ್ಲಿ ಕಲೆ ಬದುಕಿಗಾಗಿ ಕಲೆ ಸಮಾಜದ ಬದಲಾವಣೆಗಾಗಿ ಎನ್ನುವ ತತ್ವದಲ್ಲಿ ಸಿಜಿಕೆ ಸಮುದಾಯದ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಸಾಂಸ್ಕೃತಿಕ ಚಳುವಳಿಯನ್ನು ಕಟ್ಟಿದಂತವರು. ಇವರು ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದರೂ ರಂಗಭೂಮಿಯಲ್ಲಿ ಬಹಳಷ್ಟು ಆಸಕ್ತಿ ಹೊಂದಿದ ವ್ಯಕ್ತಿ ಎಂದರು.

WhatsApp Image 2025 06 28 at 11.09.20 AM

ಇವತ್ತು ಎಲ್ಲವೂ ಕಳೆದು ಹೋಗುತ್ತಿರುವ ಸಂದರ್ಭದಲ್ಲಿ ಕಲೆಯ ಮೂಲಕ ಜನರ ಮಧ್ಯೆ ಹೋಗಿ ಜನರ ಸಮಸ್ಯೆಗೆ ಸ್ಪಂದಿಸುತ್ತಾ ಜನರಲ್ಲಿ ಹೊಸ ಚೈತನ್ಯವನ್ನು ತುಂಬಬೇಕಾಗಿದೆ. ಸಿಜಿಕೆಯವರ ಆಶಯವೂ ಇದೇ ಆಗಿತ್ತು. ಇಂಥ ರಂಗ ದಿಗ್ಗಜರ ಹೆಸರಿನಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದರು.

ರಮೇಶ್‌ ಆರೋಲಿ ಮಾತನಾಡಿ, ನಾಟಕದ ಹಿಂದೆ ಹೋದರೆ ತಲೆ ಮೇಲೆ ಚಾಪೆ ಹಾಸಿಕೊಳ್ಳುತ್ತಾರೆ ಎನ್ನುವ ಮಾತಿದೆ. ಆದರೆ ಇವತ್ತು ನಾಟಕದ ಹಿಂದೆ ಹೋದವರು ತಲೆಯ ಮೇಲೆ ಪೇಟ ಹಾಕಿಕೊಂಡಿದ್ದಾರೆ. ನಾನು ವಿದ್ಯಾರ್ಥಿ ದಿನಗಳಲ್ಲಿ ನಾಟಕ ಮಾಡುವ ಆಸಕ್ತಿ ಇತ್ತು. ನಾನು ಬರೆದ ನಾಟಕ ತೀನ್ ಕಂದೀಲ್ ನಾಟಕದಲ್ಲಿ ಬರುವ ಯಲ್ಲಯ್ಯ ಪಾತ್ರವನ್ನು ಲಕ್ಷ್ಮಣ ಮಂಡಲಗೇರಾ ಪಾತ್ರಕ್ಕೆ ಜೀವ ತುಂಬಿ ಅಭಿನಯಿಸಿದ್ದರು. ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಪ್ರದರ್ಶನದ ದಿನ ರಾಯಚೂರಿನ ರಂಗಮಂದಿರದಲ್ಲಿ ತುಂಬಿದ ಪ್ರೇಕ್ಷಕರನ್ನು ನೋಡಿ ತುಂಬಾ ಸಂತೋಷವಾಗಿತ್ತು. ಅದೊಂದು ನನ್ನ ಜೀವನದ ಅವಿಸ್ಮರಣೀಯ ಕ್ಷಣ ಎಂದು ಅಭಿಪ್ರಾಯಪಟ್ಟರು.

WhatsApp Image 2025 06 28 at 11.09.22 AM

ಈ ವೇದಿಕೆಯಲ್ಲಿ ಅಧ್ಯಕ್ಷತೆ ಹಿರಿಯರಾದ ವಿ. ಎನ್. ಅಕ್ಕಿ ಪ್ರಶಸ್ತಿ ಪುರಸ್ಕೃತರ ಪರಿಚಯ ರಂಗ ನಿರ್ದೇಶಕ ಪ್ರವೀಣ ರೆಡ್ಡಿ ಗುಂಜಹಳ್ಳಿ, ಮುಖ್ಯ ಅತಿಥಿಗಳಾದ ರಮೇಶ್ ಆರೋಲಿ, ಶ್ರೀನಿವಾಸ ಮರಡ್ಡಿ, ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮಣ ಮಂಡಲಗೇರಾ, ಅರುಣ್ ಕುಮಾರ್ ಮಾನ್ವಿ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕುಡುಪು ಘಟನೆ | ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು: ಸಂತ್ರಸ್ತ ಅಶ್ರಫ್ ಸಹೋದರ ಜಬ್ಬಾರ್

ರಂಗಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ನಿರೂಪಣೆಯನ್ನು ಶಿವರಾಜ್ ಹೆಗ್ಗಸನಹಳ್ಳಿ ನಿರ್ವಸಿದರು. ರಂಗ ಕಲಾವಿದರಾದ ವೆಂಕಟ ನರಸಿಂಹಲು, ನಾಗರಾಜ ಸಿರವಾರ, ಅಂಬರೀಶ್ ರಾಠೋಡ್, ಸಾಗರ್ ಇಟೇಕರ್, ಮಹೇಶ್, ಗೋಪಿ, ವಿಮಲಾ ಶ್ರೀಕಾಂತ್ ಶಾಂತಮೂರ್ತಿ ಗಬೂರು ರಂಗ ಗೀತೆಗಳನ್ನು ಹಾಡಿದರು..

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...