ರಾಯಚೂರು | ಬೋನಿಗೆ ಬಿದ್ದ ಚಿರತೆ

Date:

ರಾಯಚೂರು ಜಿಲ್ಲೆಯ ಮಲಿಯಾಬಾದ್ ಬೆಟ್ಟದಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.


ಆರು ತಿಂಗಳಿಂದ ಬೆಟ್ಟದ ಗುಹೆಯಲ್ಲಿ ವಾಸಿಸುತ್ತಿದ್ದ ಚಿರತೆ ಗ್ರಾಮದ ಸುತ್ತ ಮುತ್ತ ನಾಯಿಗಳು ಹಾಗೂ ಇತರೆ ಸಾಕು ಪ್ರಾಣಿಗಳನ್ನು ಬೇಟೆಯಾಡುತ್ತಿತ್ತು .ಇದರಿಂದ ಗ್ರಾಮಸ್ಥರು ಭಯದಲ್ಲಿ ಇದ್ದರು. ಸ್ಥಳೀಯರ ದೂರಿನ ಅನ್ವಯ ಅರಣ್ಯ ಇಲಾಖೆಯವರು ಇಂದು ಬೆಳಿಗ್ಗೆ ಸೆರೆಹಿಡಿದರು.

ಕೆಲವು ದಿನಗಳ ಹಿಂದೆ ಚಿರತೆಯ ಹೆಜ್ಜೆ ಗುರುತುಗಳು ಮಾತ್ರ ಪತ್ತೆಯಾಗಿದ್ದವು. ಸ್ಥಳೀಯರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಕ್ಯಾಮೆರಾದಲ್ಲಿ ಚಿರತೆಯ ಚಲನವಲನವೂ ಸೆರೆಯಾಗಿತ್ತು.

ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಸಿದ್ದರು. ಇದೀಗ ಚಿರತೆ ಬೋನಿಗೆ ಬಿದ್ದಿದ್ದು, ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...