ರಾಯಚೂರು | ಸಮ್ಮೇಳನಗಳು ಕನ್ನಡ ಬಾಂಧವ್ಯ ಗಟ್ಟಿಗೊಳಿಸಲಿ; ನಾಡೋಜ ಗೊ ರು ಚನ್ನಬಸಪ್ಪ

Date:

ಕನ್ನಡಿಗರು ದ್ವೇಷಿಸುವ ಕಲೆಯಿಂದ ಹೊರಬಂದು ಜನರು ಜಾಗೃತರಾಗಬೇಕಾದ ಅವಶ್ಯಕತೆಯಿದ. ಆತ್ಮವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ಕನ್ನಡದ ಬಾಂಧವ್ಯವನ್ನು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿ ಎಂದು ನಾಡೋಜ ಗೊ.ರು.ಚನ್ನಬಸಪ್ಪ ಹೇಳಿದರು.

ರಾಯಚೂರು ನಗರದ ರಂಗ ಮಂದಿರದಲ್ಲಿ ಆರನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಮ್ಮೇಳನಗಳು ಬರೀ ಜಾತ್ರೆಗಳಲ್ಲ ಅವು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ. 35 ವರ್ಷಗಳ ನಂತರ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಾಹಿತ್ಯ ಚಟುವಟಿಕೆಗಳು ಸೃಷ್ಟಿಯಾಗುವಂತಾಗಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ಸಾಹಿತ್ಯ ಪರಿಷತ್ ಇಂದು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೂ ವಿಸ್ತರಿಸಿಕೊಂಡಿರುವುದು ಸಂತಸ ತಂದಿದೆ” ಎಂದರು.

“ಕನ್ನಡಿಗರ ಸಮೈಕ್ಯತೆ, ಸಾಹಿತ್ಯ ಸಂರಕ್ಷಣೆ, ಭಾಷೆಯ ಸಮೃದ್ಧಿಯೇ ಪರಿಷತ್ತಿನ ಮುಖ್ಯ ಧ್ಯೇಯ. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಸುಧೀರ್ಘ ಇತಿಹಾಸವಿದೆ. ಸಿವಿಲೈಜ್ ಕಾಲುವಾಗಿದಿದ್ದು ಸಿವಿಲೈಜ್ ಕಾಲುವೆಯಾಗಿ ಮಾರ್ಪಟ್ಟಿರುವದು ದುರುದುಷ್ಟಕರ. ಶತಮಾನೋತ್ಸವ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿಯೂ ಸಾಹಿತಿಗಳಿದ್ದಾರೆ. ಎಲ್ಲರನ್ನು ಒಳಗೊಂಡ ಪರಿಷತ್ ಮುನ್ನಡೆಯಬೇಕಿದೆ” ಎಂದು ತಿಳಿಸಿದರು.

“ವಚನ ಸಾಹಿತ್ಯ ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯ ಜನ ಸಂಕಷ್ಟಕ್ಕೆ ,ನೋವಿಗೆ ಪರಿಹಾರವಾಗಬೇಕು. ರಾಜ್ಯ ಸರ್ಕಾರ ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವದು ಸಮಧಾನಕರ ಬೆಳವಣಿಗೆಯಾಗಿದೆ. ಕನ್ನಡ,ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು” ಎಂದು ಆಶಿಸಿದರು.

ಇದನ್ನೂ ಓದಿ:ರಾಯಚೂರು | ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಇಂದಿನಿಂದ ರೀಗಲ್-25 ವಾರ್ಷಿಕೋತ್ಸವ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇದಿಕೆಯಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಸದಸ್ಯ ಜಯಣ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ಸಾಹಿತಿ ಬಾಬು ಬಂಢಾರಿಗಲ್, ಸಮ್ಮೇಳನಾಧ್ಯಕ್ಷ ಅಯ್ಯಪ್ಪಯ್ಯ ಹುಡಾ, ಸಾಹಿತಿ ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ, ಬಸವರಾಜ ಸ್ವಾಮಿ, ಚನ್ನಬಸವಣ್ಣ, ಅರವಿಂದ
ಕುಲ್ಕರ್ಣಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...