ರಾಯಚೂರು | ಬಿಜೆಪಿ ಸೋಲಿಸಲು ಮಾದಿಗ ಸಮುದಾಯ ಮುಂದಾಗಬೇಕು: ಜೆ ಬಿ ರಾಜು

Date:

ಬಿಜೆಪಿಗೆ ಮಾರಾಟವಾಗಿರುವ ಮಂದಕೃಷ್ಣ ಮಾದಿಗ ಇವರು ಸಮೂದಾಯವನ್ನು ಒಂದು ಪಕ್ಷಕ್ಕೆ ಒತ್ತೆಯಿಟ್ಟು ಮಾತನಾಡುವುದನ್ನು ನಿಲ್ಲಿಸಬೇಕು. ಸಂಘಟನೆ ಧ್ವಜವನ್ನು ಬಿಟ್ಟು ಬಿಜೆಪಿ ಧ್ವಜ ಹಾಕಿಕೊಳ್ಳಲಿ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಸಂಚಾಲಕ ಜೆ ಬಿ ರಾಜು ಎಚ್ಚರಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಸಮಾಜ ಸಂಘಟನೆ ಪ್ರತಿನಿಧಿಸಿ ಕಪ್ಪು ಬಣ್ಣದ ಶಾಲು ಹಾಕಿಕೊಂಡು ಮಾದಿಗರ ಸಮುದಾಯ ಬಿಜೆಪಿ ಬೆಂಬಲಿಸುತ್ತಾರೆಂದು ಹೇಳಿರುವದು ಖಂಡನೀಯ. ಸಮಾಜ ಯಾವುದೇ ರಾಜಕೀಯ ಪಕ್ಷದ ಸ್ವತ್ತಲ್ಲ. ವೈಯಕ್ತಿಕವಾಗಿ ನಿರ್ಧಾರ ಕೈಗೊಳ್ಳುತ್ತಾರೆ. ಒಳಮೀಸಲಾತಿ ಹೋರಾಟಕ್ಕೆ ಮಂದಕೃಷ್ಣ ಮಾದಿಗ ಇವರ ಕೊಡುಗೆ ಇಲ್ಲ. 1997ರಲ್ಲಿ ನಗರದ ಮಹಿಳಾ ಸಮಾಜದಲ್ಲಿ ನಡೆದ ಸಭೆಯಲ್ಲಿ ಒಳಮೀಸಲಾತಿ ಹೋರಾಟ ಹುಟ್ಟು ಪಡೆದುಕೊಂಡಿದೆ. ಉಸ್ಮಾನೀಯ ಯುನಿವರ್ಸಟಿಯ ಅನೇಕರು ಅಂದು ಭಾಗಿಯಾಗಿದ್ದರು. ಆಂಧ್ರದ ಹೋರಾಟದಿಂದ ರಾಜ್ಯದ ಜನರು ಕಲೆಯಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಾದಿಗ ಸಮುದಾಯದ ಬಿಜೆಪಿ ಬೆಂಬಲಿಸಿದೆ. ಶಿಕ್ಷಣ, ಉದ್ಯೋಗ ದೊರೆಯುತ್ತದೆಂದು ಸುಳ್ಳು ಹೇಳಿದ್ದಾರೆ. ಕಳೆದ 10 ವರ್ಷದ ಬಿಜೆಪಿ ಆಡಳಿತದಲ್ಲಿ ಪರಿಶಿಷ್ಟ ಸಮುದಾಯಗಳ ಎಷ್ಟು ಮಂದಿಗೆ ಉದ್ಯೋಗ, ಶಿಕ್ಷಣ ದೊರೆತಿದೆಯೆಂದು ಅವರ ಹೇಳಲಿ” ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೇ.30ರಷ್ಟು ಯುವಜನರಿಗೆ ಉದ್ಯೋವಿಲ್ಲದಂತಾಗಿದೆ. ರೈಲು, ಬಂದರು, ವಿಮಾನ ನಿಲ್ದಾಣ, ಸಾರ್ವಜನಿಕ ಆಸ್ತಿಯನ್ನು ಮೋದಿ ಸರ್ಕಾರ ಮಾರಾಟ ಮಾಡಿದೆ. 2012ರಲ್ಲಿ ಬಿಜೆಪಿ ಸರ್ಕಾರಕ್ಕೆ ಸದಾಶಿವ ಆಯೋಗ ವರದಿ ಸಲ್ಲಿಸಿತ್ತು. ನಿಜವಾದ ಕಾಳಜಿಯಿದ್ದರೆ ಏಕೆ ಮಂಡಿಸಲಿಲ್ಲ? ಮಾದಿಗ ಸಮಾಜ ಸೇರಿದಂತೆ ಪರಿಶಿಷ್ಟ ಜಾತಿಗಳು ಒಂದು ಪಕ್ಷವಾಗಿ ನಿಲ್ಲಲು ಸಾಧ್ಯವಿಲ್ಲ” ಎಂದರು.

ರಾಜ್ಯ ಮುಖಂಡ ಎಸ್ ಮಾರೆಪ್ಪ ಮಾತನಾಡಿ, “ಮಂದಕೃಷ್ಣ ಮಾದಿಗ ಒಬ್ಬ ಅನಕ್ಷರಸ್ಥ. ಆತನಿಗೆ ರಾಜ್ಯ ಪರಿಶಿಷ್ಟ ಒಳ ಮೀಸಲಾತಿ ಸಮಸ್ಯೆ ಅರಿವಿಲ್ಲ. ಸುಪ್ರಿಂಕೋರ್ಟಿನಲ್ಲಿ ರಚಿತವಾಗಿರುವ ಏಳು ಮಂದಿ ನ್ಯಾಯಮೂರ್ತಿಗಳ ಪೀಠ ನರೇಂದ್ರ ಮೋದಿ ಹೇಳಿದರೆ ರಚನೆಯಾಗಿಲ್ಲ. ಪಂಜಾಬ್ ಪ್ರಕರಣ ವಿಚಾರಣೆಯನ್ನು ನ್ಯಾಯಪೀಠ ವಿಚಾರಣೆ ನಡೆಸಿದೆ. ತೀರ್ಪಿನಿಂದ ರಾಜ್ಯದ ಪರಿಶಿಷ್ಟರಿಗೆ ಅನ್ವಯವಾಗುವದಿಲ್ಲ. 341 ಕಲಂ ತಿದ್ದುಪಡಿ ಅಗತ್ಯವಿಲ್ಲವೆಂದು ಹೇಳಿರುವ ಅರುಣಾ ಮಿಶ್ರಾ ಅಭಿಪ್ರಾಯವೇ ಹೊರತು ತೀರ್ಪಲ್ಲ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ; ಲಾರಿ ವಶ

“ಆತ್ಮಗೌರವ, ಸ್ವಾಭಿಮಾನ ಇಲ್ಲದ ನಾಯಕ ನಾಯಕನಲ್ಲ. ಮಂದಕೃಷ್ಣ ಮಾದಿಗ ಅವರು ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಾಲಿಗೆ ಬಿದ್ದು ಹೋರಾಟ ಪ್ರಾರಂಭಿಸಿದ್ದರು. ಅವರಿಗೆ ಬದ್ಧತೆಯೂ ಇಲ್ಲ. ಸಮುದಾಯ ರಾಷ್ಟ್ರೀಯ ನಾಯಕನೆಂದು ಬಿಂಬಿಸಿಕೊಂಡು ಬಿಜೆಪಿ ಪರ ಮಾತನಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಯನ್ನು ಸೋಲಿಸಲು ಸಮುದಾಯದ ಜನರು ಮುಂದಾಗಬೇಕು” ಎಂದರು.

ಈ ಸಂದರ್ಭದಲ್ಲಿ ಹೇಮರಾಜ ಅಸ್ಕಿಹಾಳ, ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪು, ಆಂಜಿನೇಯ್ಯ ಉಟ್ಕೂರು, ತಾಯಣ್ಣ ಗಧಾರ, ಶ್ರೀನಿವಾಸ ಕಲವಲದೊಡ್ಡಿ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...