ರಾಯಚೂರು | ಎಟಿಎಂನಲ್ಲಿ ಹಣ ಬಿಡಿಸುವ ವೇಳೆ ಮಹಿಳೆಯಿಂದ ಹಣ ದೋಚಿ ಪರಾರಿ

Date:

ಬ್ಯಾಂಕ್‌ನ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಹಿಂತಿರುಗಿತ್ತಿದ್ದ ಮಹಿಳೆಯೊಬ್ಬರ ಲಕ್ಷಾಂತರ ರೂ. ಹಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ ಲೋಹರವಾಡಿಯಲ್ಲಿರುವ ಎಸ್‌ಬಿಐ ಬ್ಯಾಂಕ್ ಬಳಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಬಂದಿದ್ದ ಮಹಿಳೆಯು ಒಂದು ಲಕ್ಷ ರೂಪಾಯಿ ಹಣ ಡ್ರಾ ಮಾಡಿಕೊಂಡು ಹೊರ ಬರುತ್ತಿರುವಾಗ ಆರೋಪಿಗಳು ಹೋಂಡಾ ಶೈನ್ ಬೈಕ್‌ನಲ್ಲಿ ಬಂದು ರಸ್ತೆಯಲ್ಲಿಯೇ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಹಾಡುಹಗಲೇ ರಸ್ತೆಯಲ್ಲಿ ಹಣದೋಚಿ ಪರಾರಿಯಾಗುತ್ತಿರುವ ವಿಡಿಯೋ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ ನಿಖಿಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಬ್ಯಾಂಕ್ ಸುತ್ತಮುತ್ತಲಿನಲ್ಲಿರುವ ಸಿಸಿ ಟಿವಿ ಕ್ಯಾಮೆರಾ ದೃಶ್ಯವನ್ನು ಪರಿಶೀಲನೆ ನಡೆಸಿದರು. ಈ ಕುರಿತು ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಸರೆಗೆ ಪೊಲೀಸರು ಬಲೆ ಬೀಸಿದ್ದಾರೆ.

“ಬ್ಯಾಂಕ್, ಎಟಿಎಂ ಸುತ್ತಮುತ್ತಲೂ ದುಷ್ಟರು ಕಾದು ಕುಳಿತಿರುತ್ತಾರೆ. ಎಟಿಎಂ ಪಕ್ಕದಲ್ಲೇ ಬೈಕ್ ನಿಲ್ಲಿಸಿ ಜನಸಾಮಾನ್ಯರಂತೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ತಿರುಗಾಡುತ್ತಿರುತ್ತಾರೆ. ಹಣ ಡ್ರಾ ಮಾಡಲು ಬಂದವರು ಅವರ ಚಲನವಲನಗಳನ್ನು ಗಮನಿಸದೇ ಇರುವುದರಿಂದ ಇಂತಹ ಕಳ್ಳತನದ ಘಟನೆಗಳು ನಡೆಯುತ್ತಿವೆ” ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೈಕ್ – ಬಸ್ ನಡುವೆ ಅಪಘಾತ; ಮದುವೆಯಾದ ಎರಡೇ ದಿನಕ್ಕೆ ಯುವಕ ಸಾವು

ಯಾಮಾರಿದರೆ ಸಾಕು ಕೂಡಲೇ ದಾಳಿ ಮಾಡಿ  ಹಣ ದೋಚಿ ಪರಾರಿಯಾಗುತ್ತಾರೆ. ಇಂತಹ ಪ್ರಕರಣಗಳು  ಜಿಲ್ಲೆಯಲ್ಲಿ ನಡೆಯುತ್ತಿದ್ದು, ಗ್ರಾಮೀಣ ಭಾಗದ ಜನರ ಸುರಕ್ಷತೆ ಮತ್ತು ಅನಕ್ಷರತೆಯನ್ನೇ ಬಂಡವಾಳ ಮಾಡಿಕೊಂಡು ಗ್ರಾಹಕರಂತೆ ಬಂದು ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಹಣ ದೋಚುತ್ತಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...