ರಾಯಚೂರು | ಮಾನ್ವಿ ಜಲಸಂಪನ್ಮೂಲ ಕಚೇರಿಯಲ್ಲಿ 22 ಎಂಜಿನಿಯರ್ ಹುದ್ದೆ ಖಾಲಿ

Date:

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿರುವ ಜಲಸಂಪನ್ಮೂಲ ಇಲಾಖೆಯ ಉಪ ವಿಭಾಗ ಕಚೇರಿಗಳಲ್ಲಿ 22 ಎಂಜಿನಿಯರ್ ಹುದ್ದೆಗಳು ಖಾಲಿ ಉಳಿದಿವೆ. ಈವರೆಗೆ ಆ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪರಿಣಾಮ ತಾಲೂಕಿನಲ್ಲಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಲಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ತುಂಗಭದ್ರ ಜಲಾಶಯದಿಂದ ತಂಗಭದ್ರ ಎಡದಂಡೆ ನಾಲಾ ಯೋಜನೆ ಮೂಲಕ ಮಾನ್ವಿ ಮತ್ತು ಸಿರವಾರವರೆಗೆ ಕೃಷಿ ಭೂಮಿಗಳಿಗೆ ನಾಲೆಗಳ ಮೂಲಕ ನೀರು ಹರಿಸಲಾಗುತ್ತದೆ. ನಾಲಾ ಯೋಜನೆಯ ಕೊನೆಯ ಭಾಗವು (70-104 ಕಿ.ಮೀ) ಜಲಸಂಪನ್ಮೂಲ ಇಲಾಖೆಯ ಸಿರವಾರ ಮುಖ್ಯ ವಿಭಾಗಕ್ಕೆ ಒಳಪಡುತ್ತದೆ. ಈ ವಿಭಾಗವು ಸಿರವಾರ ಮತ್ತು ಮಾನ್ವಿ ತಾಲೂಕಿನ 20 ವಿತರಣಾ ನಾಲೆಗಳಿಗೆ ನೀರು ಹರಿಸುವುದನ್ನು ನಿರ್ವಹಿಸುವ ಜವಬ್ದಾರಿ ಹೊಂದಿದೆ.

ಆದರೆ, ಮಾನ್ವಿ ಉಪ ವಿಭಾಗದ ಕಚೇರಿಯಲ್ಲಿ 22 ಎಂಜಿನಿಯರ್‌ ಹುದ್ದೆಗಳು ಖಾಲಿ ಇರುವುದರಿಂದ ತಾಲೂಕಿನ ಕೃಷಿ ಭೂಮಿಗೆ ನೀರು ಸಿಗದಂತಾಗಿದೆ. ಹಲವು ನಾಲೆಗಳು ಬತ್ತಿ ಹೋಗಿವೆ. ಜೊತೆಗೆ, ಸಿರವಾರ ಕಚೇರಿಯಲ್ಲಿಯೂ ಐದು ಎಂಜಿನಿಯರ್‌ ಹುದ್ದೆಗಳು ಖಾಲಿ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

ತುಂಗಭದ್ರ ನಾಲಾ ಯೋಜನೆಯ ವ್ಯಾಪ್ತಿಯಲ್ಲಿ ನಾಲೆಗಳ ಆರಂಭದ ಭಾಗದಲ್ಲಿ ಹಲವಾರು ಪ್ರದೇಶಗಳು ಅನಧಿಕೃತವಾಗಿ ನೀರಾವರಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿವೆ. ಹೀಗಾಗಿ, ನಾಲೆಯ ಕೊನೆಯ ಭಾಗಕ್ಕೆ ನೀರು ಹರಿದುಬರುತ್ತಿಲ್ಲ. ಮಾನ್ವಿ ತಾಲೂಕಿನ ನಾಲೆಗಳು ನೀರು ಕಂಡು ವರ್ಷಗಳೇ ಕಳೆದಿವೆ. ಸರ್ಕಾರ ಮತ್ತು ಸ್ಥಳೀಯ ಶಾಸಕರು ಸಮರ್ಪಕ ನೀರಿನ ಹರಿವಿಗೆ ಕ್ರಮ ಕೈಗೊಳ್ಳಬೇಕು. ಖಾಲಿ ಇರುವ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದು ಸ್ಥಳೀಯ ರೈತರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...