ರಾಯಚೂರು | ಅಶೋಕನ ನಾಡು ಮಸ್ಕಿ ತಾಲೂಕಿಗೆ ಉಪ ನೋಂದಣಿ ಕಚೇರಿಯೇ ಇಲ್ಲ!

Date:

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕು ಕೇಂದ್ರವಾಗಿ 7 ವರ್ಷ ಕಳೆದರೂ ಉಪ ನೋಂದಣಿ ಕಚೇರಿ ಇಲ್ಲದೆ ಸಾರ್ವಜನಿಕರು ಬೇರೆ ಬೇರೆ ರೀತಿಯ ಪ್ರಮಾಣ ಪತ್ರ ಮಾಡುವುದಕ್ಕೆ ಮೂರು ತಾಲೂಕಿಗೆ ತಿರುಗಾಡುವ ಸ್ಥಿತಿ ನಿರ್ಮಾಣವಾಗಿದೆ.

2018ರಲ್ಲಿ ಮಸ್ಕಿ ತಾಲೂಕು ಕೇಂದ್ರವೆಂದು ಘೋಷಣೆಯಾಗಿದೆ. ಮಸ್ಕಿ ನಗರದಲ್ಲಿ ತಹಶೀಲ್ದಾರ್ ಕಚೇರಿ, ನ್ಯಾಯಾಲಯ ಕಚೇರಿಗಳ ಕಟ್ಟಡಗಳು ನಿರ್ಮಾಣವಾಗಿವೆ. ಆದರೆ ಸುಮಾರು 7 ವರ್ಷ ಕಳೆದರೂ ಮಸ್ಕಿಯಲ್ಲಿ ಉಪ ನೋಂದಣಿ ಕಚೇರಿ ತೆರೆದಿರುವುದಿಲ್ಲವೆಂದು ಜನ ಸಾಮಾನ್ಯರು ಚಿಂತೆಗೀಡಾಗಿದ್ದಾರೆ.

“ಮಸ್ಕಿ ತಾಲೂಕಿನಲ್ಲಿ 143 ಗ್ರಾಮಗಳು ಹಾಗೂ 20 ತಾಂಡಾಗಳು ಹಾಗೂ 6 ಹೋಬಳಿಗಳಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ತಾಲೂಕಿಗೆ ಅಲೆದಾಡುತ್ತಾರೆ. ಆದರೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕು ತೀರಾ ಹಿಂದುಳಿದ ಪ್ರದೇಶವಾಗಿದೆ. ಆದರೆ ಇಲ್ಲಿ ನೋಂದಣಿ ಕಚೇರಿಯಿಲ್ಲ. ಈ ಭಾಗದ ಜನರು ನೋಂದಣಿ ಕಾರ್ಯಗಳಿಗಾಗಿ ಅಕ್ಕಪಕ್ಕದ ತಾಲೂಕುಗಳಿಗೆ ಅಲೆದಾಡಬೇಕಿದೆ. ಇದರಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ” ಎಂದು ತಾಲೂಕಿನ ನಿವಾಸಿಗಳು ಅತಂತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000063880

ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಮಲ್ಲಿಕ್ ಮುರಾರಿ ಮಾತನಾಡಿ, “ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಸಿರಾವಾರ ಹಾಗೂ ಮಸ್ಕಿ ನೂತನ ತಾಲೂಕುಗಳಾಗಿ ಘೋಷಣೆ ಮಾಡಲಾಗಿತ್ತು. ಆದರೆ ಸಿರವಾರ ತಾಲೂಕಿನಲ್ಲಿ ಕಳೆದ ವರ್ಷ ಉಪ ನೋಂದಣಿ(ಸಬ್ ರಿಜಿಸ್ಟರ್) ಕಚೇರಿ ಪ್ರಾರಂಭಗೊಂಡಿದೆ. ಆದರೆ ಮಸ್ಕಿ ತಾಲೂಕಿನಲ್ಲಿ ಉಪ ನೋಂದಣಿ ಕಚೇರಿಯಾಗಿಲ್ಲ. ಇಲ್ಲಿನ ಜನರು ಬೇರೆ ಬೇರೆ ತಾಲೂಕಿಗೆ ಅಲೆದಾಡುವ ಪರಿಸ್ಥಿತಿಯಿದೆ. ನಮ್ಮ ತಾಲೂಕಿನ ಎಲ್ಲ ಜನರಿಗೆ ವಿವಾಹ, ಖರೀದಿ, ವಿಭಾಗ, ಮರಣ ಶಾಸನ ಇನ್ನು ಮುಂತಾದ ನೋಂದಣಿ ಕಾರ್ಯಕ್ಕೆ ಹಾಗೂ ತಾಲೂಕಿನ ಅಭಿವೃದ್ಧಿಗೆ ತಡೆಹಿಡಿದಂತಾಗಿದೆ” ಎಂದರು.

“ನೋಂದಣಿ ಕಚೇರಿ ಇಲ್ಲದಿರುವುದರಿಂದ ಮಾರಾಟ ವಹಿವಾಟುಗಳು ಕುಂಠಿತಗೊಂಡಿದ್ದು, ಜನರಿಗೆ ಮೂರು ತಾಲೂಕುಗಳಿಗೆ ಅಲೆದಾಡಿ ಸಾಕಾಗಿದೆ. ತಹಶೀಲ್ದಾರ್ ಕಚೇರಿ ಬಿಟ್ಟರೆ ಉಳಿದ ಕಚೇರಿಗಳಿಗೆ ಈ ಹಿಂದಿನ ತಾಲೂಕುಗಳಲ್ಲಿ ಇರುತ್ತವೆ. ಅಲ್ಲಿಗೆ ಹೋಗಿ ಅಲ್ಲಿಂದ ಇಲ್ಲಿಗೆ ಬರುವುದು ತುಂಬ ಹೈರಾಣದ ಕೆಲಸವಾಗಿರುತ್ತದೆ. ಮಸ್ಕಿ ವ್ಯಾಪ್ತಿಯಲ್ಲಿ ಬರುವ ಕೆಲವು ಗ್ರಾಮಗಳು ಸರ್ಕಾರಿ ಕಚೇರಿ ಕೆಲಸ ಕಾರ್ಯಗಳು ಚಟುವಟಿಕೆಗೆ ಹೋಗಬೇಕಾದರೆ ಮೂರು ತಾಲೂಕಿಗೆ ಸುತ್ತಬೇಕು. ಕೆಲವು ಗ್ರಾಮಗಳು ಮಾನ್ವಿ ತಾಲೂಕಿಗೆ ಸೇರ್ಪಡೆ, ಕೆಲವು ಲಿಂಗಸಗೂರು ತಾಲೂಕಿಗೆ ಹಾಗೂ ಇನ್ನೂ ಕೆಲವು ಸಿಂಧನೂರು ತಾಲೂಕಿಗೆ ಜನ ಸಾಮಾನ್ಯರು ತಿರುಗಾಡುತ್ತಿದ್ದಾರೆ” ಎಂದು ಹೇಳಿದರು.

“ಕೆಲವು ದಿನಗಳ ಹಿಂದೆಯು ಇದರ ಬಗ್ಗೆ ಶಾಸಕರಿಗೆ, ತಹಶೀಲ್ದಾರ್ ಅವರಿಗೆ ಸಲ್ಲಿಸಲಾಗಿದೆ. ಆದಷ್ಟು ಬೇಗೆನೆ ನಮ್ಮ ತಾಲೂಕಿಗೆ ನೋಂದಣಿ ಕಚೇರಿ ಪ್ರಾರಂಭಿಸಿ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಹೇಳಿದರು.

1000062281
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...