ರಾಯಚೂರು | ನ್ಯಾಯಾಧೀಶ ಬಿ.ಆರ್. ಗವಾಯಿ ಮೇಲೆ ನಡೆದ ಹಲ್ಲೆ ಖಂಡಿಸಿ ಸಂವಿಧಾನ ಸಂರಕ್ಷಣಾ ವೇದಿಕೆಯ ಬೃಹತ್ ಪ್ರತಿಭಟನೆ

Date:

ಸುಪ್ರೀಂಕೋರ್ಟ್ ನ್ಯಾಯಾಧೀಶ ಬಿ.ಆರ್.ಗವಾಯಿವರ ಮೇಲೆ ನಡೆದ ಹಲ್ಲೆ ಖಂಡಿಸಿ ಸಿರವಾರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವ ವೃತ್ತದಿಂದ, ಬಸ್ ನಿಲ್ದಾಣ ಹಾಗೂ ಕೆಲವು ಮುಖ್ಯ ರಸ್ತೆಗಳ ಮೂಲಕ ತಹಶೀಲ್ದಾರ್ ಕಚೇರಿವರೆಗೆ ತಲುಪಿ ಭಯೋತ್ಪಾದಕ ರಾಕೇಶ ಕಿಶೋರನನ್ನು ಗಡಿಪಾರು ಮಾಡಬೇಕು ಎಂದು ಘೋಷಣೆ ಹಾಕಿ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಪ್ರಗತಿಪರ ಚಿಂತಕ ಉದಯ ಸಾಹುಕಾರ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್‌ ಅವರು ದೇಶಕ್ಕೆ ನೀಡಿದ ಸಂವಿಧಾನದಲ್ಲಿ ಎಲ್ಲರೂ ಗೌರವದಿಂದ ಬದುಕಲು ಅವಕಾಶಗಳನ್ನು ಕಲ್ಪಿಸಿದ್ದಾರೆ. ಜಾತ್ಯತೀತ ಕಲ್ಪನೆಯನ್ನು ಸಹಿಸಲಾರದ ಮನುವಾದಿಗಳು, ದಲಿತರ ಬೆಳವಣಿಗೆಯನ್ನು ಸಹಿಸದೇ ಆಗಾಗ್ಗೆ ಸಂವಿಧಾನದ ಆಶಯಗಳಿಗೆ ಭಂಗ ತರುವ ತಂತ್ರ ಹೂಡುತ್ತಿರುವುದು ತೀವ್ರ ಖಂಡನೀಯ ಎಂದರು.

ಇಂದಿನ ಕಾಲದಲ್ಲೂ ಶೋಷಿತ ವರ್ಗಗಳು ಸುಖವಾಗಿ ಬಾಳಬೇಕೆಂದು ಬಯಸುವುದು ಕೆಲವರಿಗೇ ಅಸಹ್ಯವಾಗಿರುವಂತಿದೆ. ಇಂತಹ ದಿನಮಾನಗಳಲ್ಲಿ ದಲಿತರ ಮತ್ತು ಹಿಂದುಳಿದ ವರ್ಗಗಳ ಪ್ರಗತಿಯನ್ನು ತಡೆಯಲು ಮನುವಾದಿಗಳು ಗುಪ್ತ ಅಜೆಂಡಾವನ್ನು ಮುಂದಿಟ್ಟಿದ್ದಾರೆ. ಒಳವರ್ಮದ ಶೋಷಕ ವ್ಯವಸ್ಥೆಯ ನೆರಳು ಇನ್ನೂ ನಮ್ಮ ಸಮಾಜದ ಮೇಲೆ ತೂಗುತಿದೆ ನಾವೆಲ್ಲರೂ ಒಂದಾಗಿ ನಿಂತು ಈ ವ್ಯವಸ್ಥೆಯ ವಿರುದ್ಧ ಹೋರಾಡಬೇಕಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುದಗಲ್‌ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮಾನವ ಬಂಧುತ್ವ ವೇದಿಕೆ ಒತ್ತಾಯ

ಪ್ರತಿಭಟನೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖಂಡ ಬಸವರಾಜ ಭಂಡಾರಿ, ಮೇಷಕ್ ದೊಡ್ಮನಿ, ಗಂಗಾಧರ, ಆದೇಶ ನಗನೂರು, ವಿಜಯರಾಣಿ, ಇನ್ನಿತರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...