ಜಿಲ್ಲೆಯ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶಿವಮೂರ್ತಿ (25) ಎನ್ನುವ ಯುವಕ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ತಲೇಖಾನ್ ಗ್ರಾಮದ ಪಕ್ಕದ ಊರಾದ ದೇಸಾಯಿ ಭೋಗಾಪೂರ ಗ್ರಾಮದ ನಿವಾಸಿಯಾಗಿರುವ ಆರೋಪಿಯನ್ನು ಫೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಸ್ಕಿ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿ ಅಸ್ವಸ್ಥಳಾಗಿ ಚಿಕಿತ್ಸೆಗಾಗಿ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಅಪ್ರಾಪ್ತೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವವಾಗಿದ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕನ ವರ್ಗಾವಣೆಗೆ ಗ್ರಾಮಸ್ಥರ ಆಗ್ರಹ
ಅಪಹರಣ ಕೇಸ್ ದಾಖಲಾಗಿತ್ತು: ಇದಕ್ಕೂ ಮುಂಚೆ ಅಕ್ಟೋಬರ್ 30ರಂದು ರಾತ್ರಿ 11 ಗಂಟೆಗೆ ಮನೆಯಿಂದ ಹೊರಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಹೇಳಿದವಳು ಬಾಲಕಿ ಮರಳಿ ಬಂದಿರಲಿಲ್ಲ, ಬಾಲಕಿಯ ತಾಯಿ ಅಕ್ಟೊಬರ್ 31 ರಂದು ಮಸ್ಕಿ ಠಾಣೆಯಲ್ಲಿ ತನ್ನ ಮಗಳಿಗೆ ಯಾರೋ ಅಪಹರಿಸಿಕೊಂಡು ಹೋಗಿದ್ದಾರೆ ಹುಡುಕಿಕೊಡಿ ಎಂದು ದೂರು ನೀಡಿದ್ದರು. ಈಗ ಅತ್ಯಾಚಾರ, ಗರ್ಭಿಣಿಯಾಗಿದ್ದು ಪಾಲಕರಿಗೆ ದಿಗ್ಭ್ರಮೆ ಗೊಳಿಸಿದೆ.





