‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

Date:

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ.

ರಾಯಚೂರು ವಿಧಾನಸಭಾ ಕ್ಷೇತ್ರದ ಪೋತಗಲ್, ಅಮರಾವತಿ ಗ್ರಾಮದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡಲು ತೆರಳಿದ್ದರು. ಈ ವೇಳೆ, ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದ್ದಾರೆ.

“ಪೋತಗಲ್ ಮತ್ತು ಅಮರಾವತಿ ಗ್ರಾಮದಲ್ಲಿ ಚರಂಡಿ, ಶುದ್ಧ ಕುಡಿಯುವ ನೀರು ಹಾಗೂ ಮೂಲಸೌಕರ್ಯವಿಲ್ಲ. 5 ವರ್ಷವಾದರೂ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಈಗ ಮತ್ತೆ ಮತ ಕೇಳಲು ಬಂದಿದ್ದೀರಾ” ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಾದಿಗರ ರಾಜಕೀಯವನ್ನು ಬಿಜೆಪಿಗೆ ಅನೈತಿಕವಾಗಿ ಅಡಮಾನ ಮಾಡಬೇಕೆ?: ಹನುಮೇಶ್‌ ಗುಂಡೂರು

ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ, “ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ನನಗೆ ಮತ ಹಾಕಿ” ಎಂದು ಮನವೊಲಿಸಲು ಮುಂದಾದರು. ಆದರೂ, ಅವರ ಮಾತಿಗೆ ಗ್ರಾಮಸ್ಥರು ಮಣಿಯಲಿಲ್ಲ. ಬಳಿಕ ಶಾಸಕರು ಸ್ಥಳದಿಂದ ಕಾಲ್ಕಿತ್ತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...