ರಾಯಚೂರು | ದಾಳಿ ಮಾಡುತ್ತಿದ್ದ ಮಂಗ ಸೆರೆ

Date:

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಮಂಗವೊಂದು ಸಾರ್ವಜನಿಕರಿಗೆ ಕಚ್ಚುವ ಮೂಲಕ ಭೀತಿಯನ್ನುಂಟುಮಾಡಿತ್ತು. ಅದನ್ನು ಗಂಗಾವತಿ ನುರಿತ ತಂಡವು ಸೆರೆಹಿಡಿದಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಕಳೆದ ಒಂದುವರೆ ತಿಂಗಳಿನಿಂದ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಕಚ್ಚಿ ಗಾಯಗೊಳಿಸಿ ಕಿರಿಕಿರಿ ಉಂಟುಮಾಡಿತ್ತು. ಮನೆ ಮೇಲೆ ಬಟ್ಟೆ ಹಾಕಲು ಹೋದವರ ಮೇಲೆ ದಾಳಿ ಮಾಡಿ ಕೈ ಮುರಿದು ಗಂಭೀರ ಗಾಯಗೊಳಿಸಿತ್ತು.

ಈ ಬಗ್ಗೆ ಗ್ರಾಮದ ನಿವಾಸಿ ನಾಗರೆಡ್ಡೆಪ್ಪ ದೇವರಮನಿ ಮಾತನಾಡಿ, “ಶಾಲೆಯ ಮೈದಾನದಲ್ಲಿನ ಗಿಡಮರಗಳಲ್ಲಿ ಅತ್ತಿಂದಿತ್ತ ಜಿಗಿಯುತ್ತ, ಶಾಲೆ ಮಕ್ಕಳು ಹಾಲು ಕುಡಿಯುವ ಮತ್ತು ಊಟ ಮಾಡುವ ಸಂದರ್ಭದಲ್ಲಿ ಮಕ್ಕಳ ಮೇಲೆ ದಾಳಿ ಮಾಡಲು ಮುಂದಾಗುತ್ತಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

“ಗದ್ದೆಮ್ಮ ನಿಂಗಪ್ಪ ಎನ್ನುವ ಮ‌‌ಹಿಳೆ ಮನೆ ಮಾಳಿಗೆ ಮೇಲೆ ಒಣಸಿದ್ದ ಬಟ್ಟೆಗಳನ್ನು ತರಲು ಹೋದಾಗ ಮಂಗ ದಾಳಿ ಮಾಡಿದ್ದರಿಂದ ಮೆಟ್ಟಿಲುಗಳ ಮೇಲಿಂದ ಕೆಳಗೆ ಬಿದ್ದು ಕೈ ಮೂಳೆ ಮುರಿದುಕೊಂಡಿದ್ದಾರೆ. ಕಲ್ಲಪ್ಪ ಪೂಜಾರಿ ಎನ್ನುವವರ ಮೇಕೆ ಮೇಲೆ ದಾಳಿ ಮಾಡಿ ಸಾಯಿಸಿತ್ತು” ಎಂದರು.

“ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಾಗ ಎಚ್ಚೆತ್ತುಕೊಂಡು ಗಂಗಾವತಿ ನುರಿತ ತಂಡದ ನೇತೃತ್ವದಲ್ಲಿ ಸೆರೆ ಹಿಡಿಯಲಾಗಿದೆ. ದಾಳಿಗೊಳಗಾದ ಸಂತ್ರಸ್ತ ಮಹಿಳೆಗೆ ಪರಿಹಾರ ಒದಗಿಸಬೇಕು” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...