ರಾಯಚೂರು | ಜಿಲ್ಲಾಸ್ಪತ್ರೆಯಲ್ಲಿ ಕೋತಿಗಳ ಹಾವಳಿ; ಹೈರಾಣಾದ ರೋಗಿಗಳು

Date:

ರಾಯಚೂರಿಗೆ ಏಮ್ಸ್‌ ಆಸ್ಪತ್ರೆ ಬೇಕೆಂದು ಜಿಲ್ಲೆಯ ಜನರು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಜಿಲ್ಲೆಯ ಒತ್ತಾಯಕ್ಕೆ ಸರ್ಕಾರಗಳು ಕಿವಿಗೊಡುತ್ತಿಲ್ಲ. ಇದೀಗ, ಜಿಲ್ಲೆಯ ಜನರು ಏಮ್ಸ್‌ ಜೊತೆಗೆ, ಈಗಿರುವ ಜಿಲ್ಲಾಸ್ಪತ್ರೆಯ ಉತ್ತಮ ನಿರ್ವಹಣೆಗಾಗಿಯೂ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ರಾಯಚೂರಿನಲ್ಲಿರುವ ರಿಮ್ಸ್‌ ಆಸ್ಪತ್ರೆಯಲ್ಲಿ ಕೋತಿಗಳ ಉಪಠಳ ಹೆಚ್ಚಾಗಿದೆ. ಆಸ್ಪತ್ರೆಯ ವಾರ್ಡ್‌ಗಳಿಗೂ ನುಗ್ಗುವ ಕೋತಿಗಳು ರೋಗಿಗಳು ಮತ್ತು ಅವರ ಸಂಬಂಧಿಗಳಿಗೆ ತೊಂದರೆ ಕೊಡುತ್ತಿವೆ. ರೋಗಿಗಳಿಗೆ ನೀಡಲಾಗುವ ಊಟ ಮತ್ತು ಇನ್ನಿತರೆ ತಿನಿಸುಗಳನ್ನು ಹೊತ್ತೊಯ್ಯುತ್ತಿವೆ. ನೆಮ್ಮದಿಯಿಂದ ಕುಳಿತು ಊಟ ಮಾಡಲು, ತಿಂಡಿ ತಿನ್ನಲು ಬಿಡದೆ ಕಾಟ ಕೊಡುತ್ತಿವೆ ಎಂದು ರೋಗಿಗಳ ಪಾಲಕರು ಆರೋಪಿಸಿದ್ದಾರೆ.

“ಕೋತಿಗಳ ಕಾಟದಿಂದ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಈ ಪರಿಸ್ಥಿತಿ ಇಂದು-ನಿನ್ನೆಯದಲ್ಲ. ಹಲವು ತಿಂಗಳುಗಳಿಂದ ಕೋತಿಗಳ ಆಸ್ಪತ್ರೆ ಸುತ್ತ-ಮುತ್ತ ಬೀಡು ಬಿಟ್ಟಿವೆ. ಅವುಗಳನ್ನು ಓಡಿಸಲು ಆಗುತ್ತಿಲ್ಲ. ಓಡಿಸಲು ಮುಂದಾದರೆ, ನಮ್ಮ ಮೇಲೆಯೇ ಎಗರಿ ಹಲ್ಲೆ ಮಾಡುತ್ತವೆ” ಎಂದು ರೋಗಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೀದರ್ | ತಡವಾಗಿದ್ದಕ್ಕೆ ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ವ್ಯಕ್ತಿ

“ಕೋತಿಗಳ ಹಾವಳಿ ತಪ್ಪಿಸಲು ಪಟಾಕಿ ಸಿಡಿಸುತ್ತಿದ್ದೇವೆ. ಅರಣ್ಯ ಇಲಾಖೆಗೂ ಮಾಹಿತಿ ನೀಡಿದ್ದೇವೆ. ಕೋತಿಗಳ ಕಾಟ ತಪ್ಪಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ” ಎಂದು ಆಸ್ಪತ್ರೆಯ ಅಧೀಕ್ಷರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...