ರಾಯಚೂರು | ಕೋತಿಗಳು ಬಿದ್ದು ಸಾವನ್ನಪ್ಪಿದ್ದ ನೀರು ಕುಡಿದ ಗ್ರಾಮಸ್ಥರು; ಕೆಲವರು ಅಸ್ವಸ್ಥ

Date:

ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ‘ಓವರ್‌ಹೆಡ್‌ ಟ್ಯಾಂಕ್‌’ಗೆ ಕೋತಿಗಳು ಬಿದ್ದು, ಸಾವನ್ನಪ್ಪಿವೆ. ಈ ಬಗ್ಗೆ ತಿಳಿಯದ ಗ್ರಾಮಸ್ಥರು ಅದೇ ನೀರನ್ನು ಕುಡಿದು, ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಖಾನಾಪೂರ ಗ್ರಾಮದ ಸುಮಾರು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ನೀರಿನ ಟ್ಯಾಂಕ್‌ನಲ್ಲಿ ನೀರು ಕುಡಿಯಲು ಹೋಗಿದ್ದ ಮಂಗಗಳು ಟ್ಯಾಂಕ್‌ ಒಳಗೆ ಬಿದ್ದು ಸಾವನ್ನಪ್ಪಿವೆ. ಆದರೆ, ಕೋತಿಗಳು ನೀರಿನಲ್ಲಿ ಬಿದ್ದಿರುವ ಬಗ್ಗೆ ತಿಳಿಯದೆ, ಮೂರು ದಿನಗಳ ಕಾಲ ಅದೇ ನೀರನ್ನು ಗ್ರಾಮದ ಜನರಿಗೆ ನಲ್ಲಿಗಳ ಮೂಲಕ ಸರಬರಾಜು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೋತಿಗಳು ಸತ್ತು ಕಲುಷಿತವಾಗಿದ್ದ ನೀರನ್ನೇ ಗ್ರಾಮದ ಜನರು ಕುಡಿದಿದ್ದಾರೆ. ಕೆಲವರು ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...