ರಾಯಚೂರು | ತಾಲ್ಲೂಕು ಘೋಷಣೆ ಒತ್ತಾಯಿಸಿ ಮುದಗಲ್ ಬಂದ್ ಸಂಪೂರ್ಣ ಯಶಸ್ವಿ

Date:

ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿ, ಸಂಪೂರ್ಣ ಯಶಸ್ವಿಯಾಯಿತು.

ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಕೆಲಕಾಲ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಸದಸ್ಯ ಅಶೋಕಗೌಡ ಪಾಟೀಲ್ ಮುದಗಲ್ ಪಟ್ಟಣವು ಸುತ್ತಮುತ್ತಲಿನ 60 ಗ್ರಾಮಗಳು ಹಾಗೂ 18 ತಾಂಡಾಗಳಿಗೆ ಕೇಂದ್ರ ಬಿಂದುವಾಗಿದ್ದು, ಎರಡು ರಾಜ್ಯ ಹೆದ್ದಾರಿಗಳನ್ನು ಹೊಂದಿರುವ ಪ್ರಮುಖ ಪಟ್ಟಣವಾಗಿದೆ ಎಂದು ಹೇಳಿದರು. ತಾಲೂಕು ಕೇಂದ್ರವಾಗಲು ಅಗತ್ಯವಿರುವ ಎಲ್ಲಾ ಮೂಲಭೂತ ಅರ್ಹತೆಗಳನ್ನು ಈ ಪಟ್ಟಣ ಹೊಂದಿದೆ ಎಂದು ಅವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುರಸಭೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ವಿದ್ಯುತ್ ಪ್ರಸಾರಣಾ ಕೇಂದ್ರ, ಪದವಿ ಕಾಲೇಜು, ಬಸ್ ನಿಲ್ದಾಣ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಠಾಣೆ, ನಾಡ ತಹಶೀಲ್ದಾರ್ ಕಚೇರಿ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ಸೌಕರ್ಯಗಳು ಈಗಾಗಲೇ ಇಲ್ಲಿವೆ ಎಂದು ತಿಳಿಸಿದರು.

23433

ಪಟ್ಟಣ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಈ ಹಿಂದೆ ಹುಂಡೆಕಾರ್, ಗದ್ದಿಗೌಡರ್, ವಾಸುದೇವ ಸಮಿತಿಗಳು ಪಟ್ಟಣ ತಾಲೂಕು ಕೇಂದ್ರವಾಗಲು ಯೋಗ್ಯವಾಗಿದ್ದು,ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಮಾಜಿ ಶಾಸಕ ದಿ.ಎಂ.ಗಂಗಣ್ಣನವರ ನೇತೃತ್ವದಲ್ಲಿ ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ ಕಾಂಗ್ರೆಸ್ ಸರಕಾರ ಮುದಗಲ್ ಪಟ್ಟಣವನ್ನು ಹೊಸ ತಾಲೂಕು ಕೇಂದ್ರವೆಂದು ಘೋಷಣೆ ಮಾಡಬೇಕು ಹಾಗೂ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಅನುಧಾನ ಮೀಸಲಿಡಬೇಕು ಎಂದು ಈಗಾಗಲೇ ಅಧಿವೇಶನದಲ್ಲಿ ನಾನಾ ಬಾರಿ ಪ್ರಸ್ತಾಪಿಸಿದರೂ ಸರಕಾರ ಕಿಂಚಿತ್ತೂ ಗಮನಹರಿಸಿಲ್ಲ.ಬಜೆಟ್ ಅಧಿವೇಶನಕ್ಕೂ ಮುಂಚೆ ಹೋರಾಟಗಾರ ಜತೆ ನಾನು ಕೂಡಾ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಹಾಗೂ ಕಂದಾಯ ಸಚಿವರಲ್ಲಿ ಮನವಿಗೂ ಸಿದ್ದ ಎಂದರು.

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಕಾರು ಪಲ್ಟಿಯಾಗಿ ಹೋಟೆಲ್‌ಗೆ ನುಗ್ಗಿ ಅಪಘಾತ; ಪ್ರಾಣಾಪಾಯದಿಂದ ಪಾರು

ಈ ಸಂದರ್ಭದಲ್ಲಿ ತಹಸೀಲ್ದಾರ್ ಪುರುರಾಜಸಿಂಗ್ ಸೊಲಂಕಿ,
ಕೃಷ್ಣಾ ಚಲುವಾದಿ, ಮೈಬೂಬಸಾಬ, ಕಡ್ಡಿಪುಡಿ, ಶರಣಪ್ಪ ಕಟ್ಟಿಮನಿ, ಮೌನೇಶ ಶಿವನಗುತ್ತಿ, ರಹೀಮ್ ಷಾ, ಬಸವರಾಜ ಬಂಕ ದಮನಿ ಸೇರಿ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...