ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

Date:

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧಿಸಿ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಆದೇಶ ಹೊರಡಿಸಿದ್ದಾರೆ.

ಸಿಂಧನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಣಿವಾರ, ಅರಳಹಳ್ಳಿ, ಉಪ್ಪಳ, ಗೋರೆಬಾಳ ಹಾಗೂ ಗುಂಡಾ, ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ನಿಡಿಗೊಳ-ತಿಡಿಗೋಳ, ಎಲೆಕೂಡ್ಲಿಗಿ, ಚಿಕ್ಕಬೇರಿ, ಮಾನ್ವಿ ಪೊಲೀಸ್ ಠಾಣೆಯ ವ್ಯಾಪ್ತಿಯ ನಂದಿಹಾಳ, ಜಾಗೀರ ಪನ್ನೂರು, ಜಾನೇಕಲ್ ಹಾಗೂ ಮದಾವೂರು, ಸಿರವಾರ ಪೊಲೀಸ್ ಠಾಣೆಯ ವ್ಯಾಪ್ತಿಯ ಸಿರವಾರ ಪಟ್ಟಣ, ಕಡದಿನ್ನಿ, ಬೊದ್ದುನಾಳ, ಕವಿತಾಳ ಪೊಲೀಸ್ ಠಾಣೆಯ ವ್ಯಾಪ್ತಿಯ ಕವಿತಾಳ ಪಟ್ಟಣ, ಹಿರೇ ಬಾದರದಿನ್ನಿ, ಬಾಗಲವಾಡ, ಅಮೀನಗಡ, ಗೊಗಬಾಳ, ಮಸ್ಕಿ ಪೊಲೀಸ್ ಠಾಣೆಯ ವ್ಯಾಪ್ತಿಯ ತಲೇಖಾನ್, ದೇವದುರ್ಗ ಪೊಲೀಸ್ ಠಾಣೆಯ ವ್ಯಾಪ್ತಿಯ ಖಾನಾಪೂರ, ಚಂಚೋಡಿ ಸೇರಿ 23 ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಮೊಹರಂ ಆಚರಣೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇವನಹಳ್ಳಿ ಚಲೋ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

ಮೊಹರಂ ಆಚರಣೆಯಲ್ಲಿ ಅನ್ಯ ಸಮುದಾಯಗಳ ಯುವಕರ ಮಧ್ಯೆ ಗಲಾಟೆ, ಹಲವು ಬಾರಿ ಹಳೆ ವೈಷಮ್ಯ ಉಂಟಾಗಿ ಪ್ರಕರಣಗಳು ದಾಖಲಾಗಿವೆ. ಗ್ರಾಮದಲ್ಲಿ ಜೀವ ಹಾನಿ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುವ, ಕಾನೂನು ಸುವ್ಯವಸ್ಥೆ ಹದೆಗೆಡುವ ಸಂಭವ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಿಸುವುದು ಹಾಗೂ ಸಾರ್ವಜನಿಕವಾಗಿ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...