ರಾಯಚೂರು | ಮೊಹರಂ ಭಾವೈಕ್ಯದ ಪ್ರತೀಕ

Date:

ಮೊಹರಂ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದ್ದು, ಭಾವೈಕ್ಯದ ಪ್ರತೀಕವಾಗಿದೆ. ರಾಯಚೂರು ಜಿಲ್ಲೆ ಮುದಗಲ್ ಪಟ್ಟಣ ಹಾಗೂ ಗುರುಗುಂಟ ಗ್ರಾಮದಲ್ಲಿ ನಡೆಯುವ ಆಚರಣೆ ವೀಕ್ಷಣೆಗೆ ರಾಜ್ಯ ಹಾಗೂ ನೆರೆರಾಜ್ಯಗಳ ಸಹಸ್ರಾರು ಭಕ್ತರು ಸೇರಿದ್ದು, ವಿಶೇಷವಾಗಿದೆ.

ಕೋಟೆಯೊಳಗಿನ ದರ್ಗಾ ಬಳಿ ಪೀರ್‌ಗಳ ಸವಾರಿ ವೈಭವದಿಂದ ನಡೆಯುತ್ತದೆ. ಇದನ್ನು ಸಾವಿರಾರು ಭಕ್ತರು ಕಣ್ತುಂಬಿಕೊಳ್ಳುತ್ತಾರೆ. ದರ್ಗಾದ ಮುಂದಿರುವ ಅಲಾವಿ ಕುಣಿತದ ಮುಂದೆ ಯುವಕರು ಹೆಜ್ಜೆ ಹಾಕುತ್ತಾರೆ. ಕರ್‌ಬಲಾ ಕಾಳಗ ಯುದ್ಧದ ಘೋರ ವರ್ಣನೆ, ಅನ್ಯಾಯ, ವಂಚನೆ, ಸಾವು-ನೋವು, ಶೌರ್ಯ-ಬಲಿದಾನಗಳ ಕಥನವನ್ನು ಹಾಡುಗಾರರು ಹಾಡಿ ವರ್ಣಿಸುತ್ತಾರೆ.

ಸಿಂಗಾರ: ಮೊಹರಂ ಅಂಗವಾಗಿ ಪಟ್ಟಣದ ಹಿಂದೂ-ಮುಸ್ಲಿಂ ಸಮುದಾಯದವರು ಮನೆಗೆ ಸುಣ್ಣ ಬಣ್ಣ ಬಳಿದು ಸಿಂಗರಿಸಿ ಹಬ್ಬ ಆಚರಿಸುತ್ತಾರೆ. ಹರಕೆ ಹೊತ್ತವರು ಆಲಂಗಳಿಗೆ ಮುಡಿಪು ಅರ್ಪಿಸುತ್ತಾರೆ. ಮುದಗಲ್‌ನ ಮೊಹರಂ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಪಟ್ಟಣದ ಕೋಟೆ ಹೊರಭಾಗದಲ್ಲಿ ನಡೆಯುವ ಹಸನ್‌-ಹುಸೇನ್‌ ಸಹೋದರರ ಬೆಳ್ಳಿ ಪಂಜಾಗಳ ಮುಖಾಮುಖಿ ದೃಶ್ಯ ಕಣ್ತುಂಬಿಕೊಳ್ಳಲು ದೇಶ-ವಿದೇಶದ ಜನರು ಆಗಮಿಸುತ್ತಾರೆ. ಹಿಜರಿ ಸಂವತ್ಸರದ ಮೊದಲನೇ ತಿಂಗಳು ಹತ್ತು ದಿನಗಳ ಕಾಲ ಮೊಹರಂ ಆಚರಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುರುಗುಂಟ ಗ್ರಾಮದಲ್ಲಿಯೂ ಕೂಡ ಮೊಹರಂ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಮೊಹರಂ 7 ನೇ ದಿವಸ ಹುಸೇನ ಆಲಂ ದರ್ಗಾದಿಂದ ಸೈದಖಾಸಿಂ ದರ್ಗಾವರಗೆ ಒಂದು ಎತ್ತು ಕಟ್ಟಿಗೆಯಿಂದ ತುಂಬಿದ 30 ಎತ್ತಿನ ಬಂಡಿಗಳನ್ನು ಎಳೆಯುತ್ತದೆ . ಹಾಗೆಯೇ ಕಟ್ಟಿಗೆಗಳನ್ನು ಸೈದಖಾಸಿಂ ದರ್ಗಾದ ಮುಂದೆ ಹವಾಲಾದಲ್ಲಿ ಹಾಕಿ ಇಡಿ ರಾತ್ರಿ ಸುಡುತ್ತಾರೆ. ಮರುದಿನ ಅಂದರೆ ಮೊಹರಂ 08 ನೇ ದಿನ ಬೆಳಗಿನ ಜಾವ ಆಲಾಯೆ ದೇವರು ಬೆಂಕಿಯನ್ನು ತುಳಿಯುವುದನ್ನು ವೀಕ್ಷಿಸಲು ಸಹಸ್ರಾರು ಸಂಖ್ಯೆಯ ಭಕ್ತಾದಿಗಳು ಸೇರುತ್ತಾರೆ.

ಇದನ್ನೂ ಓದಿದ್ದೀರಾ? ಗುಲ್ಬರ್ಗಾ ವಿವಿ | ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸದ ಆಡಳಿತ

ದುಡಿಯಲು ವಲಸೆ ಹೋದವರೂ ಕೂಡ ವರ್ಷಕ್ಕೆ ಒಂದು ಬಾರಿ ಮೊಹರಂ ಹಬ್ಬಕ್ಕೆ ತಮ್ಮ ತಮ್ಮ ಊರಿಗೆ ಮರಳುತ್ತಾರೆ. ಮೊಹರಂ ಕೊನೆಯ ಎರಡು ದಿನಗಳು ಮುಸ್ಲಿಂ ಸಮುದಾಯದವರು ರಂಝಾನ್ ಹಬ್ಬದಂತೆ ಉಪವಾಸ ಇರುತ್ತಾರೆ.

ಸತತ 10 ದಿನಗಳ ಕಾಲ ಆಚರಿಸುವ ಮೊಹರಂನಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. 9ನೇ ದಿನ ಹಸನ್‌-ಹುಸೇನ್‌ (ಖತಲ್ ರಾತ್ರಿ) ಸವಾರಿ ಎಂದು ಹಾಗೂ ಕೊನೆಯ 10ನೇ ದಿನ ದಫನ್‌ ಕಾರ್ಯಕ್ರಮ ನಡೆಯುತ್ತವೆ. ಆಲಂ(ದೇವರು)ಗಳ ಕೊನೆಯ ಭೇಟಿ ರೊಮಾಂಚನಕಾರಿಯಾಗಿರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...