ಸಿಂಧನೂರು | ಮುಕ್ಕುಂದಾ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸೌಲಭ್ಯಗಳ ಅಭಾವ – ದಲಿತ ಸೇನೆ ಒತ್ತಾಯ

Date:

ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ ಸ್ಥಳ ಕೇವಲ ದಾಖಲೆಗಳಲ್ಲಿ ಮಾತ್ರ ಸೀಮಿತವಾಗಿದೆ. ಇಂದಿಗೂ ಕೂಡ ಗ್ರಾಮಸ್ಥರು ತುಂಗಭದ್ರಾ ನದಿಯನ್ನು ದಾಟಿ ಶವಸಂಸ್ಕಾರ ಮಾಡುವ ದಾರುಣ ಪರಿಸ್ಥಿತಿಯೊಳಗಿದ್ದಾರೆ. ನದಿಯ ಪ್ರವಾಹದ ವೇಳೆಯಲ್ಲಿ ಇದು ಜೀವಪಣಕ್ಕಿಟ್ಟು ನಡೆಯುವ ಶವಸಂಸ್ಕಾರವಾಗಿ ಮಾರ್ಪಡುತ್ತಿದೆ.

ಡಿಜಿಟಲ್ ಯುಗ, ಸುಧಾರಿತ ಕರ್ನಾಟಕದ ಘೋಷಣೆಗಳನ್ನು ನಂಬಿ ನಿರೀಕ್ಷೆಯಲ್ಲಿ ಇರುವ ಈ ಗ್ರಾಮಸ್ಥರು ಇಂದು ಸಹ ಅಮಾನವೀಯ ಪರಿಸ್ಥಿತಿಯಲ್ಲಿ ಮೃತರ ಅಂತಿಮ ಸಂಸ್ಕಾರ ಮಾಡುತ್ತಿದ್ದಾರೆ. ಇದು ಆಡಳಿತದ ನಿರ್ಲಕ್ಷ್ಯವೇ? ಅಥವಾ ಪ್ರಭಾವಿಗಳ ಅಕ್ರಮದ ಪರಿಣಾಮವೇ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಕ್ಕೆ ಶವಸಂಸ್ಕಾರಕ್ಕೆ ಸೂಕ್ತ ಸ್ಥಳ, ರಸ್ತೆ ಸಂಪರ್ಕ, ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡಬೇಕು ಎಂಬ ಬೇಡಿಕೆ ವರ್ಷಗಳಿಂದ ಅಲಕ್ಷ್ಯವಾಗುತ್ತಿದೆ. ಇಂತಹ ದುಸ್ಥಿತಿಯಲ್ಲಿ ಕಾನೂನು ಬದ್ಧವಾಗಿ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಮಾನವೀಯ ಸೌಲಭ್ಯ ಒದಗಿಸುವುದು ಅತಿ ಅಗತ್ಯವಾಗಿದೆ

ಮುಕುಂದಾ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ನಿಗದಿತ ಜಾಗವನ್ನು ನಿಖರವಾಗಿ ಗಡಿ ಗುರುತಿಸಿ ಭೌತಿಕವಾಗಿ ಹಸ್ತಾಂತರಿಸಬೇಕು. ಶವಸಂಸ್ಕಾರ ಸ್ಥಳಕ್ಕೆ ರಸ್ತೆ ಸಂಪರ್ಕ, ಶೆಡ್, ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಒದಗಿಸಬೇಕು. ನದಿಯ ಪ್ರವಾಹದ ಸಂದರ್ಭದಲ್ಲಿ ಶವ ಸಾಗಣೆ ಇತ್ಯಾದಿ ಅವ್ಯವಹಾರ ತಪ್ಪಿಸಲು ತಾತ್ಕಾಲಿಕ ಬೋಟು ಪರವಾನಗಿ ನೀಡುವುದು ಅಥವಾ ಸೇತುವೆ ನಿರ್ಮಾಣದ ಪ್ರಸ್ತಾವನೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರೀತಿ ವಿಚಾರದಲ್ಲಿ ಯುವಕನ ಹತ್ಯೆ ಖಂಡಿಸಿ – ಸಾಲಿಡಾರಿಟಿ ಪ್ರತಿಭಟನೆ

ಈ ವೇಳೆ ಸುರೇಶ್ ಬಾಬು, ಬಾಬಾಬಾವುದ್ದೀನ್ ,ಬಾಬುರಾವ್, ತಾಜುದ್ದೀನ್ , ರಾಜಸಾಬ್ , ಶಾಂತಕುಮಾರ್ ಕುರುಡಿ, ದಲಿತ ಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಜಾವಿದ್ ಖಾನ್, ದಲಿತ ಸೇನೆ ಜಿಲ್ಲಾಧ್ಯಕ್ಷರು ಮಾರುತಿ ಚಿಕ್ಕ ಸ್ಕೋರ್, ಅನೇಕ ಕಾರ್ಯಕರ್ತರು ಸಮಾಜ ಮುಖಂಡರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...