ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

Date:

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ ರೈತ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮದ ಗ್ರಾಮಸ್ಥರು ಕೂಲಿ ಸಾಮಗ್ರಿಗಳು ಹಿಡಿದು ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.

ಗುರುಗುಂಟ ಗ್ರಾಮವು ಹೋಬಳಿ ಗ್ರಾಮವಾಗಿದ್ದು, ಸುಮಾರು 60 ರಿಂದ 70 ರವರೆಗೆ ದೊಡ್ಡಿಗಳು ಬರುತ್ತವೆ. ಇಲ್ಲಿ ವಾಸಿಸುವ ಜನರು ವ್ಯವಸಾಯ, ಉದ್ಯೋಗ ಖಾತ್ರಿ ನಂಬಿಕೊಂಡು ಜೀವನವನ್ನು ಸಾಗಿಸುತ್ತಿದ್ದಾರೆ. ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಸೇರಿಸಿದರೆ ಗ್ರಾಮೀಣ ಕೃಪಾಂಕದಿಂದ ಗ್ರಾಮಸ್ಥರು ವಂಚಿತರಾಗುತ್ತಾರೆ ಎಂದು ಆಗ್ರಹಿಸಿದರು.

ಪಟ್ಟಣ ಪಂಚಾಯತ್ ಆದ್ರೆ ತೆರಿಗೆ, ವಿದ್ಯುತ್, ನೀರಿನ ಬಿಲ್‌ಗಳು ಹೆಚ್ಚಾಗುತ್ತವೆ. ನಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ಇದು ಭಾರವಾಗಲಿದೆ. ಉದ್ಯೋಗ ಸಿಗದೇ ಮಹಾನಗರಗಳಿಗೆ ಗುಳೆ ಹೋಗುತ್ತಾರೆ. ಗ್ರಾಮೀಣ ಭಾಗದಲ್ಲಿ ಮನೆಯ ಕರ(ತೆರಿಗೆ) 5.5 ರಷ್ಟು ಇದ್ದು ಪಟ್ಟಣಕ್ಕೆ 7.7 ರಷ್ಟು ಹೆಚ್ಚಿರುತ್ತದೆ. ಹೀಗಾಗಿ ಪಟ್ಟಣ ಪಂಚಾಯಿಯಾಗಿ ಮೇಲ್ದರ್ಜೆಗೆ ಸೇರಿಸಬಾರದು ಎಂದು ಒತ್ತಾಯಿಸಿದರು.

1000171871

ಪ್ರಭಾವಿ ನಾಯಕರ ಒತ್ತಡಕ್ಕೆ ಮಣಿದು ಮೇಲ್ದರ್ಜೆಗೆ ಏರಿಸಿದರೆ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ದುರ್ಗಪ್ರಸಾದ್, ಉಪಾಧ್ಯಕ್ಷ ಆನಂದ್ ಕುಂಬಾರ್, ಶಿವಪ್ಪ ನಾಯಕ, ಶರಣೋಜಿ ಪವಾರ್, ಲಾಲ್ ಸಾಬ್, ಹನುಮಂತ, ಮತ್ತಿತರರು ಇದ್ದರು.

1000171875




WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...